ಬ್ರೇಕಿಂಗ್ ನ್ಯೂಸ್
30-11-20 02:55 pm Udupi Correspondent ಕರಾವಳಿ
ಉಡುಪಿ, ನ.30 : ಹಿಂದೂ ಧರ್ಮ ಏನು ಬಿಜೆಪಿಗರ ಸ್ವತ್ತಾ? ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆಗೆ ಸಂಸದೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದಾರೆ. ಹೌದು, ಖಂಡಿತವಾಗಿಯೂ ಕರಾವಳಿಯನ್ನು ನಾವು ದತ್ತು ತಗೊಂಡಿದ್ದೇವೆ. ಕರ್ನಾಟಕ ಕರಾವಳಿ ನಮ್ಮದೇ. ಉಡುಪಿಯ ಐವರು ಶಾಸಕರು ಬಿಜೆಪಿಯವರೇ ಎಂದು ಟಾಂಗ್ ನೀಡಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಸಂಸದೆ, "ಈ ಭಾಗವನ್ನು ದತ್ತು ತೆಗೆದುಕೊಳ್ಳುತ್ತೇವೆ, ಅಭಿವೃದ್ಧಿನೂ ಮಾಡುತ್ತೇವೆ. ಕಾಂಗ್ರೆಸ್ ಜನವಿರೋಧಿ ನೀತಿಗೆ ಕರಾವಳಿ ಜನ ತಕ್ಕ ಪಾಠ ಕಲಿಸುತ್ತಾರೆ. ದೇವರ ವಿಚಾರದಲ್ಲಿ ನಾವು ರಾಜಕೀಯ ಮಾಡುತ್ತಿಲ್ಲ, ಡಿಕೆಶಿ ಚುನಾವಣೆ ಬಂದಾಗ ಮಾತ್ರ ದೇವಸ್ಥಾನ ತಿರುಗುತ್ತಾರೆ'' ಎಂದು ಆರೋಪಿಸಿದರು.
ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸಿಡಿ ಹೇಳಿಕೆಗೆ, ಪ್ರತಿಕ್ರಿಯಿಸಿ ಶೋಭಾ ಕರಂದ್ಲಾಜೆ, ಡಿಕೆಶಿಯವರು ತಮಗೆ ಗೊತ್ತಿರುವ ಮಾಹಿತಿಯನ್ನು ಬಹಿರಂಗಪಡಿಸಲಿ. ಬುಟ್ಟಿಯಲ್ಲಿ ಹಾವಿದೆ, ಹಾವಿದೆ ಎಂದು ಹೆದರಿಸುವ ಕೆಲಸ ಬೇಡ. ಸಾಧ್ಯವಿದ್ದರೆ ಆ ಹಾವನ್ನು ಹೊರಗೆ ಬಿಡಿ. ಈ ಪ್ರಕರಣದಲ್ಲಿ ನಿಮ್ಮ ಷಡ್ಯಂತ್ರ ಏನಾದರೂ ಇದೆಯಾ? ನಮ್ಮ ನಾಯಕರ ವಿರುದ್ಧ ಏನು ಷಡ್ಯಂತ್ರ ಮಾಡಿದ್ದೀರಿ ಎಂದು ಪ್ರಶ್ನಿಸಿದರು.

ಸುಳ್ಳು ಹೇಳುವುದರಲ್ಲಿ ಯಡಿಯೂರಪ್ಪ ಮಿನಿ ಮೋದಿ ಇದ್ದಂತೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಗರಂ ಆದ ಸಂಸದೆ ಶೋಭಾ ಕರಂದ್ಲಾಜೆ, ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಹೇಗೆ ಆಡಳಿತ ಮಾಡಿದ್ದಾರೆ ಎಂಬುದನ್ನು ನೋಡಿದ್ದೇವೆ. ಜಾತಿ ಜಾತಿಯನ್ನು ಒಡೆಯುವ ನೀತಿ ಮಾಡಿದ್ದರು. ಅಭಿವೃದ್ಧಿಗಿಂತ ಹೆಚ್ಚಾಗಿ ಜಾತಿ ಒಡೆಯುವುದರಲ್ಲಿ ಮಗ್ನರಾಗಿದ್ದರು ಎಂದು ತಿರುಗೇಟು ನೀಡಿದರು.
ನರೇಂದ್ರ ಮೋದಿ ಕೊಟ್ಟ ಅಕ್ಕಿ, ಗೋಧಿ ಬಳಕೆ ಮಾಡಿಕೊಂಡಿರಿ. ನಾನೇ ಅನ್ನಭಾಗ್ಯ ಯೋಜನೆ ಕೊಟ್ಟೆ ಎಂದು ಸುಳ್ಳು ಹೇಳಿದಿರಿ. ಸುಳ್ಳು ಹೇಳುವುದರಲ್ಲಿ ಯಾರಾದರೂ ನಿಪುಣರು ಇದ್ದರೆ ಅದು ಕಾಂಗ್ರೆಸ್ಸಿನವರು. ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಅಥವಾ ಬೇರೆಲ್ಲೂ ಭವಿಷ್ಯವಿಲ್ಲ. ಹಾಗಾಗಿ ಸಿದ್ದರಾಮಯ್ಯ ಮಾತಿಗೆ ಯಾರೂ ಬೆಲೆ ಕೊಡುವುದಿಲ್ಲ ಎಂದು ಸಂಸದೆ ಶೋಭಾ ಆರೋಪಿಸಿದರು.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
21-12-25 11:04 pm
Mangalore Correspondent
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
21-12-25 09:36 pm
Mangalore Correspondent
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm
Minor Girl Sexually Assaulted in Puttu: ಜೇನು...
21-12-25 01:18 pm
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am