ಬ್ರೇಕಿಂಗ್ ನ್ಯೂಸ್
10-04-24 12:49 pm Mangalore Correspondent ಕರಾವಳಿ
ಮಂಗಳೂರು, ಎ.10: ಎಪ್ರಿಲ್ 14ರಂದು ಮಂಗಳೂರಿನಲ್ಲಿ ಆಯೋಜಿಸಿದ್ದ ಪ್ರಧಾನಿ ಮೋದಿಯವರ ಬೃಹತ್ ಸಮಾವೇಶವನ್ನು ಕೊನೆಕ್ಷಣದಲ್ಲಿ ರದ್ದು ಪಡಿಸಲಾಗಿದೆ. ಅದರ ಬದಲು ಮಂಗಳೂರು ನಗರದಲ್ಲಿ ಕೇವಲ ರೋಡ್ ಶೋ ನಡೆಸುವುದಕ್ಕೆ ಸಿದ್ಧತೆ ನಡೆಸಲಾಗಿದೆ.
ಕುಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸುವುದಕ್ಕೆ ಸಿದ್ಧತೆ ನಡೆಸಲಾಗಿತ್ತು. ಇಂದು ಬೆಳಗ್ಗೆ ಮೈದಾನದಲ್ಲಿ ಚಪ್ಪರ ಮುಹೂರ್ತವನ್ನೂ ನಡೆಸಲಾಗಿತ್ತು. ಜರ್ಮನ್ ನಿರ್ಮಿತ ಬೃಹತ್ ಪೆಂಡಾಲ್ ಹಾಕಲು ಸಿದ್ಧತೆ ನಡೆಸಲಾಗಿತ್ತು. ಇದರ ಬೆನ್ನಲ್ಲೇ ತಾಂತ್ರಿಕ ಕಾರಣದಿಂದಾಗಿ ಬೃಹತ್ ಸಮಾವೇಶ ನಡೆಸುವುದನ್ನು ರದ್ದು ಪಡಿಸಲಾಗಿದೆ.

ಸಮಾವೇಶ ನಡೆಸುವ ಬದಲು ಕೇವಲ ರೋಡ್ ಶೋ ನಡೆಸುವುದಕ್ಕೆ ಆದ್ಯತೆ ನೀಡಲಾಗಿದೆ. ಮಂಗಳೂರಿನಲ್ಲಿ ರೋಡ್ ಶೋ ನಡೆಸುವುದಕ್ಕೆ ಎಸ್ ಪಿಜಿ ಭದ್ರತೆ ಪರಿಶೀಲಿಸಿದ ನಂತರವೇ ಯಾವ ರಸ್ತೆಯಲ್ಲಿ ರೋಡ್ ಶೋ ನಡೆಸುವುದೆಂದು ನಿರ್ಧಾರ ಮಾಡಬೇಕಾಗುತ್ತದೆ. ಏರ್ಪೋರ್ಟ್ ರಸ್ತೆಯಲ್ಲೇ ಮಂಗಳೂರು ನಗರದ ವರೆಗೆ ರೋಡ್ ಶೋ ನಡೆಸುತ್ತಾರೆಯೇ ಅಥವಾ ಮಂಗಳೂರು ನಗರದ ಒಳಭಾಗದ ನೆಹರು ಮೈದಾನದ ಆಸುಪಾಸಿನಲ್ಲಿ ರೋಡ್ ಶೋ ನಡೆಸುತ್ತಾರೆಯೇ ಅನ್ನುವುದು ನಿರ್ಧಾರ ಆಗಿಲ್ಲ.
ಭದ್ರತೆಯ ಕಾರಣಕ್ಕೆ ಪ್ರಧಾನಿ ಮೋದಿ ಆಯಕಟ್ಟಿನ ರಸ್ತೆಗಳಲ್ಲಿ ಬರುವುದಕ್ಕೆ ಎಸ್ ಪಿಜಿ ಅವಕಾಶ ನೀಡುವುದಿಲ್ಲ. ರಾಷ್ಟ್ರೀಯ ಹೆದ್ದಾರಿಯಲ್ಲಿ ರೋಡ್ ಶೋ ನಡೆಸುವುದಕ್ಕೂ ಅವಕಾಶ ಇರುವುದಿಲ್ಲ. ಹೀಗಾಗಿ ರೋಡ್ ಶೋವನ್ನು ಯಾವ ರಸ್ತೆಯಲ್ಲಿ ಮತ್ತು ಎಷ್ಟು ಹೊತ್ತಿಗೆ ಮಾಡಲಿದ್ದಾರೆ ಎನ್ನುವುದು ಇನ್ನೂ ನಿರ್ಧಾರವಾಗಿಲ್ಲ. ಸದ್ಯಕ್ಕೆ ಕುಳೂರು ಮೈದಾನದಲ್ಲಿ ನಡೆಯುವ ಸಮಾವೇಶ ರದ್ದುಪಡಿಸಲಾಗಿದೆ ಎನ್ನುವ ಮಾಹಿತಿ ಬಿಜೆಪಿ ಮೂಲಗಳಿಂದ ತಿಳಿದುಬಂದಿದೆ.
PM Modi Public program cancelled in Mangalore, only road show to be held on April 14th. Road show place yet to be decided by the SGP team who will arrive to Mangalore.
10-01-26 01:17 pm
Bangalore Correspondent
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
09-01-26 11:00 pm
HK News Desk
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm