ಬ್ರೇಕಿಂಗ್ ನ್ಯೂಸ್
10-04-24 07:23 pm Mangalore Correspondent ಕರಾವಳಿ
ಮಂಗಳೂರು, ಎ.10: ಎಪ್ರಿಲ್ 14ರಂದು ಪ್ರಧಾನಿ ಮೋದಿ ಮಂಗಳೂರಿಗೆ ಆಗಮಿಸಲಿದ್ದು, ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಮಂಗಳೂರು ನಗರದ ನಾರಾಯಣ ಗುರು ಸರ್ಕಲ್ ನಿಂದ ಲಾಲ್ ಬಾಗ್, ಪಿವಿಎಸ್ ವೃತ್ತದ ಮೂಲಕ ನವಭಾರತ್ ಸರ್ಕಲ್ ಆಗಿ ಹಂಪನಕಟ್ಟೆಯ ವರೆಗೆ ರೋಡ್ ಶೋ ನಡೆಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ತಿಳಿಸಿದ್ದಾರೆ.
ಕುಳೂರಿನ ಗೋಲ್ಡ್ ಫಿಂಚ್ ಮೈದಾನದಲ್ಲಿ ಮೋದಿ ಸಮಾವೇಶ ನಡೆಸುವುದೆಂದು ಈ ಹಿಂದೆ ನಿರ್ಧರಿಸಲಾಗಿತ್ತು. ಆದರೆ ಕೊನೆಕ್ಷಣದಲ್ಲಿ ಸಮಾವೇಶ ರದ್ದುಪಡಿಸಿದ್ದು ಮಂಗಳೂರಿನಲ್ಲಿ ರೋಡ್ ಶೋ ನಡೆಸಲು ನಿರ್ಧರಿಸಲಾಗಿದೆ. ಮಂಗಳೂರು ನಗರದ ಉರ್ವಾ ಬಳಿಯ ನಾರಾಯಣ ಗುರು ಸರ್ಕಲ್ ನಲ್ಲಿ ನಾರಾಯಣ ಗುರುಗಳ ಪ್ರತಿಮೆಗೆ ಅಂದು ಸಂಜೆ 5 ಗಂಟೆಗೆ ಪ್ರಧಾನಿ ಮೋದಿ ಮಾಲಾರ್ಪಣೆ ಮಾಡಲಿದ್ದಾರೆ. ಆನಂತರ, ತೆರೆದ ವಾಹನದಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ಸತೀಶ್ ಕುಂಪಲ ತಿಳಿಸಿದ್ದಾರೆ.
ಎರಡೂವರೆ ಕಿಮೀ ಉದ್ದಕ್ಕೆ ರೋಡ್ ಶೋ ನಡೆಸುವ ಬಗ್ಗೆ ನಾವು ಕೇಂದ್ರ ಬಿಜೆಪಿ ಕಮಿಟಿಗೆ ಅಹವಾಲು ಕಳಿಸಿದ್ದೇವೆ. ಎಸ್ ಪಿಜಿ ಭದ್ರತಾ ವಿಭಾಗವು ಇಲ್ಲಿನ ಪರಿಸ್ಥಿತಿ ನೋಡಿಕೊಂಡು ಎಷ್ಟು ಉದ್ದಕ್ಕೆ ರೋಡ್ ಶೋ ನಡೆಸುವುದೆಂದು ನಿರ್ಧರಿಸಲಿದ್ದಾರೆ ಎಂದು ಸತೀಶ್ ಕುಂಪಲ ಹೇಳಿದ್ದಾರೆ. ಲಾಲ್ ಬಾಗ್, ಬಳ್ಳಾಲ್ ಬಾಗ್ ರಸ್ತೆಯಲ್ಲಿ ರೋಡ್ ಶೋ ನಡೆಸಿದರೆ ಅತಿ ಹೆಚ್ಚು ಜನ ಸೇರುವುದಕ್ಕೆ ಅವಕಾಶ ಇರಲಿದ್ದು ಭಾರೀ ಸಂಖ್ಯೆಯಲ್ಲಿ ಜನರನ್ನು ಸೇರಿಸಲು ಬಿಜೆಪಿ ಪ್ಲಾನ್ ಮಾಡಿಕೊಂಡಿದೆ.
Modi road show on April 14 at 5 pm in mangalore. Initially, it was planned to hold Vijaya Sankalpa Samavesha at Gold Finch City at Kuloor. However, the convention has been cancelled and a road show will be organised in the city.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm