ಬ್ರೇಕಿಂಗ್ ನ್ಯೂಸ್
10-04-24 08:56 pm Mangalore Correspondent ಕರಾವಳಿ
ಉಳ್ಳಾಲ, ಎ.10: ಯಾವುದೇ ಧರ್ಮದ ಹಬ್ಬಗಳ ಆಚರಣೆಯಿಂದ ನಮ್ಮನ್ನ ನಾವು ತಿದ್ದಿಕೊಳ್ಳುವಂತಾಗಬೇಕು. ಹಬ್ಬಗಳ ಸಂಭ್ರಮವನ್ನ ಸಮಾಜದ ಎಲ್ಲಾ ವರ್ಗದವರು ಅನುಭವಿಸುವಂತಾಗಬೇಕೆಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅಭಿಪ್ರಾಯಪಟ್ಟರು.
ತೊಕ್ಕೊಟ್ಟಿನ "ಹೆಲ್ಫ್ ಇಂಡಿಯಾ ಫೌಂಡೇಷನ್" ವತಿಯಿಂದ ಉಳ್ಳಾಲ ತಾಲೂಕಿನ ಸೋಮೇಶ್ವರದ ಪಶ್ಚಿಮ್ ರಿಹ್ಯಾಬ್ ಸೆಂಟರಿನಲ್ಲಿ ಬುಧವಾರ ನಡೆದ ಈದ್ ಹಬ್ಬದ ಸಂಭ್ರಮಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮನುಷ್ಯನಾಗಿ ಹುಟ್ಟಿದ ಪ್ರತಿಯೊಬ್ಬರೂ ಒಂದಲ್ಲ ಒಂದು ಸಮಸ್ಯೆಯಿಂದ ಬಳಲುತ್ತಿರುವವರೇ ಆಗಿದ್ದಾರೆ. ಈ ಪುನಶ್ಚೇತನ ಕೇಂದ್ರಕ್ಕೆ ಯಾವುದೋ ಚಿಂತೆ, ಸಮಸ್ಯೆಯಿಂದ ಬಂದಿರೋ ನೀವೆಲ್ಲರೂ ಶೀಘ್ರ ಗುಣಮುಖರಾಗಿ ಸಮಾಜದ ಮುಖ್ಯ ವಾಹಿನಿಯಲ್ಲಿ ಎಲ್ಲರೊಂದಿಗೆ ಬೆರೆತು ಬಾಳುವಂತಾಗಬೇಕು. ನಿಮ್ಮೊಂದಿಗೆ ಈದ್ ಹಬ್ಬದ ಸಂಭ್ರಮ ಹಂಚಲು ಅವಕಾಶ ಮಾಡಿಕೊಟ್ಟ ಹೆಲ್ಫ್ ಇಂಡಿಯಾ ಫೌಂಡೇಷನ್ ಕಾರ್ಯ ಶ್ಲಾಘನೀಯ ಎಂದರು.



ಈದ್ ಹಬ್ಬದ ಪ್ರಯುಕ್ತ ಆಶ್ರಮವಾಸಿಗಳೆಲ್ಲರಿಗೂ ಬಿರಿಯಾನಿ ಊಟವನ್ನು ಖಾದರ್ ಹಂಚಿದರು. ನಮ್ಮ ಟಿ.ವಿ ವಾಹಿನಿಯ ನಿರ್ದೇಶಕರಾದ ಡಾ.ಶಿವಶರಣ್ ಶೆಟ್ಟಿ, ಉದ್ಯಮಿ ಬಶೀರ್, ಡಾ.ಜಮಾಲ್, ಉಳ್ಳಾಲ ನಗರಸಭಾ ಸದಸ್ಯ ಅಝೀಝ್, ಪಶ್ಚಿಮ್ ರಿಹ್ಯಾಬ್ ಸೆಂಟರ್ ನ ವ್ಯವಸ್ಥಾಪಕರಾದ ರೋಹಿತ್ ಸಾಂಕ್ಟಸ್, ಹೆಲ್ಫ್ ಇಂಡಿಯಾ ಫೌಂಡೇಷನ್ ಸ್ಥಾಪಕರಾದ ರಾಝಿಕ್ ಉಳ್ಳಾಲ್, ಪ್ರಮುಖರಾದ ಝಾಕಿರ್ ಇಕ್ಲಾಸ್ ಮೊದಲಾದವರು ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ಯು.ಟಿ ಖಾದರ್ ಅವರು ದಕ್ಷಿಣದ ಅಜ್ಮೀರ್ ಖ್ಯಾತಿಯ ಉಳ್ಳಾಲ ದರ್ಗಾಕ್ಕೆ ತೆರಳಿ ಈದ್ ಹಬ್ಬದ ಪ್ರಯುಕ್ತ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಉಳ್ಳಾಲ ದರ್ಗಾ ಅಧ್ಯಕ್ಷರಾದ ಹಾಜಿ ಬಿ.ಜಿ.ಹನೀಫ್, ಉಪಾಧ್ಯಕ್ಷರಾದ ಅಶ್ರಫ್ ಅಹ್ಮದ್ ರೈಟ್ ವೇ ಅವರು ಖಾದರ್ ಅವರನ್ನ ಸ್ವಾಗತಿಸಿದರು.
Speaker mla UT Khader celebrates eid at orphanage centre at Thokottu in Mangalore.
10-01-26 01:17 pm
Bangalore Correspondent
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
09-01-26 11:00 pm
HK News Desk
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm