ಬ್ರೇಕಿಂಗ್ ನ್ಯೂಸ್
10-04-24 08:56 pm Mangalore Correspondent ಕರಾವಳಿ
ಉಳ್ಳಾಲ, ಎ.10: ಯಾವುದೇ ಧರ್ಮದ ಹಬ್ಬಗಳ ಆಚರಣೆಯಿಂದ ನಮ್ಮನ್ನ ನಾವು ತಿದ್ದಿಕೊಳ್ಳುವಂತಾಗಬೇಕು. ಹಬ್ಬಗಳ ಸಂಭ್ರಮವನ್ನ ಸಮಾಜದ ಎಲ್ಲಾ ವರ್ಗದವರು ಅನುಭವಿಸುವಂತಾಗಬೇಕೆಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅಭಿಪ್ರಾಯಪಟ್ಟರು.
ತೊಕ್ಕೊಟ್ಟಿನ "ಹೆಲ್ಫ್ ಇಂಡಿಯಾ ಫೌಂಡೇಷನ್" ವತಿಯಿಂದ ಉಳ್ಳಾಲ ತಾಲೂಕಿನ ಸೋಮೇಶ್ವರದ ಪಶ್ಚಿಮ್ ರಿಹ್ಯಾಬ್ ಸೆಂಟರಿನಲ್ಲಿ ಬುಧವಾರ ನಡೆದ ಈದ್ ಹಬ್ಬದ ಸಂಭ್ರಮಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮನುಷ್ಯನಾಗಿ ಹುಟ್ಟಿದ ಪ್ರತಿಯೊಬ್ಬರೂ ಒಂದಲ್ಲ ಒಂದು ಸಮಸ್ಯೆಯಿಂದ ಬಳಲುತ್ತಿರುವವರೇ ಆಗಿದ್ದಾರೆ. ಈ ಪುನಶ್ಚೇತನ ಕೇಂದ್ರಕ್ಕೆ ಯಾವುದೋ ಚಿಂತೆ, ಸಮಸ್ಯೆಯಿಂದ ಬಂದಿರೋ ನೀವೆಲ್ಲರೂ ಶೀಘ್ರ ಗುಣಮುಖರಾಗಿ ಸಮಾಜದ ಮುಖ್ಯ ವಾಹಿನಿಯಲ್ಲಿ ಎಲ್ಲರೊಂದಿಗೆ ಬೆರೆತು ಬಾಳುವಂತಾಗಬೇಕು. ನಿಮ್ಮೊಂದಿಗೆ ಈದ್ ಹಬ್ಬದ ಸಂಭ್ರಮ ಹಂಚಲು ಅವಕಾಶ ಮಾಡಿಕೊಟ್ಟ ಹೆಲ್ಫ್ ಇಂಡಿಯಾ ಫೌಂಡೇಷನ್ ಕಾರ್ಯ ಶ್ಲಾಘನೀಯ ಎಂದರು.



ಈದ್ ಹಬ್ಬದ ಪ್ರಯುಕ್ತ ಆಶ್ರಮವಾಸಿಗಳೆಲ್ಲರಿಗೂ ಬಿರಿಯಾನಿ ಊಟವನ್ನು ಖಾದರ್ ಹಂಚಿದರು. ನಮ್ಮ ಟಿ.ವಿ ವಾಹಿನಿಯ ನಿರ್ದೇಶಕರಾದ ಡಾ.ಶಿವಶರಣ್ ಶೆಟ್ಟಿ, ಉದ್ಯಮಿ ಬಶೀರ್, ಡಾ.ಜಮಾಲ್, ಉಳ್ಳಾಲ ನಗರಸಭಾ ಸದಸ್ಯ ಅಝೀಝ್, ಪಶ್ಚಿಮ್ ರಿಹ್ಯಾಬ್ ಸೆಂಟರ್ ನ ವ್ಯವಸ್ಥಾಪಕರಾದ ರೋಹಿತ್ ಸಾಂಕ್ಟಸ್, ಹೆಲ್ಫ್ ಇಂಡಿಯಾ ಫೌಂಡೇಷನ್ ಸ್ಥಾಪಕರಾದ ರಾಝಿಕ್ ಉಳ್ಳಾಲ್, ಪ್ರಮುಖರಾದ ಝಾಕಿರ್ ಇಕ್ಲಾಸ್ ಮೊದಲಾದವರು ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ಯು.ಟಿ ಖಾದರ್ ಅವರು ದಕ್ಷಿಣದ ಅಜ್ಮೀರ್ ಖ್ಯಾತಿಯ ಉಳ್ಳಾಲ ದರ್ಗಾಕ್ಕೆ ತೆರಳಿ ಈದ್ ಹಬ್ಬದ ಪ್ರಯುಕ್ತ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಉಳ್ಳಾಲ ದರ್ಗಾ ಅಧ್ಯಕ್ಷರಾದ ಹಾಜಿ ಬಿ.ಜಿ.ಹನೀಫ್, ಉಪಾಧ್ಯಕ್ಷರಾದ ಅಶ್ರಫ್ ಅಹ್ಮದ್ ರೈಟ್ ವೇ ಅವರು ಖಾದರ್ ಅವರನ್ನ ಸ್ವಾಗತಿಸಿದರು.
Speaker mla UT Khader celebrates eid at orphanage centre at Thokottu in Mangalore.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am