ಬ್ರೇಕಿಂಗ್ ನ್ಯೂಸ್
01-12-20 11:06 am Mangalore Correspondent ಕರಾವಳಿ
ಮಂಗಳೂರು, ಡಿ.1: ಉಳ್ಳಾಲ ಬಳಿಯ ಅಳಿವೆಬಾಗಿಲು ಬಳಿ ಸಮುದ್ರ ಮಧ್ಯೆ ಮೀನುಗಾರಿಕಾ ಬೋಟ್ ಮುಳುಗಡೆಯಾಗಿದ್ದು ಆರು ಜನ ನಾಪತ್ತೆಯಾಗಿದ್ದಾರೆ.
22 ಜನರಿದ್ದ ಪರ್ಸಿನ್ ಮೀನುಗಾರಿಕೆ ಬೋಟ್ ನಸುಕಿನಲ್ಲಿ ಹಿಂತಿರುಗುತ್ತಿದ್ದಾಗ ಭಾರೀ ಅಲೆಗಳ ಹೊಡೆತಕ್ಕೆ ಮುಳುಗಡೆಯಾಗಿದೆ. ಉಳ್ಳಾಲದ ಅಳಿವೆಬಾಗಿಲಿನ ಸಮೀಪದಲ್ಲಿ ನೇತ್ರಾವತಿ ನದಿ ಸಮುದ್ರ ಸೇರುವುದಕ್ಕಿಂತ ಸ್ವಲ್ಪ ದೂರದಲ್ಲಿ ದುರಂತ ನಡೆದಿದೆ ಎನ್ನಲಾಗುತ್ತಿದೆ. ಬೋಟಿನಲ್ಲಿದ್ದ 22 ಜನ ಮೀನುಗಾರರಲ್ಲಿ 6 ಮಂದಿ ನಾಪತ್ತೆಯಾಗಿದ್ದಾರೆ.
ಮಂಗಳೂರಿನ ಬೋಳಾರದ ಶ್ರೀರಕ್ಷಾ ಹೆಸರಿನ ಮೀನುಗಾರಿಕಾ ಬೋಟ್ ದುರಂತಕ್ಕೀಡಾಗಿದ್ದು ಮಂಗಳೂರು, ಉಳ್ಳಾಲದವರು ಸೇರಿ ತಮಿಳುನಾಡು ಮೂಲದ ಕಾರ್ಮಿಕರು ಬೋಟಿನಲ್ಲಿದ್ದರು. ಈ ಪೈಕಿ ಮಂಗಳೂರಿನ ಪಾಂಡುರಂಗ ಸುವರ್ಣ (58), ಪ್ರೀತಮ್ (25), ಚಿಂತನ್(21), ಜಿಯಾವುಲ್ಲಾ (32), ಅನ್ಸಾರ್ (31), ಹಸೈನಾರ್ (25) ಸಮುದ್ರದಲ್ಲಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಬೋಟಿನಲ್ಲಿ ಭಾರೀ ಪ್ರಮಾಣದಲ್ಲಿ ಮೀನುಗಳ ಸಂಗ್ರಹ ಇತ್ತು. ಹಿಂತಿರುಗಿ ಬರುತ್ತಿದ್ದಾಗ ಅಲೆಗಳ ಹೊಡೆತಕ್ಕೆ ಬೋಟ್ ಮಗುಚಿದೆ ಎನ್ನಲಾಗುತ್ತಿದೆ. ಇನ್ನೊಂದು ಮೂಲದ ಪ್ರಕಾರ, ಮತ್ತಷ್ಟು ಮೀನು ಬಲೆಗೆ ಬಿದ್ದಿದ್ದು ಬೋಟಿಗೆ ಎಳೆದು ಹಾಕುವ ವೇಳೆ ಒಂದು ಬದಿಗೆ ಇಡೀ ಬೋಟ್ ಮಗುಚಿದೆ ಎನ್ನಲಾಗುತ್ತಿದೆ. ಕೂಡಲೇ ಇತರೇ ಮೀನುಗಾರಿಕಾ ದೋಣಿಗಳ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. 16 ಮಂದಿ ಡಿಂಗಿ ಮೂಲಕ ಈಜಿ ಬೇರೆ ದೋಣಿಗಳ ಮೂಲಕ ಪಾರಾಗಿದ್ದಾರೆ.
Video:
Six fishermen go missing In a tragic boat accident near Ullal. The boat, named 'Shree Raksha' from Bolar had left bolar for fishing on Monday. As many as 22 fishermen were in the boat. Fourteen out of the 22 managed to rescue themselves with the help of lifeboats.
18-03-25 02:30 pm
Bangalore Correspondent
Tumkur Wedding News, Water: ನೀರಿನ ವಿಚಾರದಲ್ಲಿ...
18-03-25 01:08 pm
ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್ ಸದ್ಯದಲ್ಲೇ...
17-03-25 11:54 am
Yatnal, Pramod Muthalik: ' ಬಾಂಬ್ ಹಾಕಿ ಹೊಟ್ಟೆ...
16-03-25 10:32 pm
Reservation for Muslims, Siddaramaiah, BJP: ಸ...
16-03-25 12:11 pm
17-03-25 10:57 pm
HK News Desk
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
18-03-25 08:53 pm
Mangalore Correspondent
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
Mangalore, Chakravarthy Sulibele, FIR: ಅನ್ಯಧರ...
17-03-25 04:27 pm
18-03-25 06:31 pm
Mangalore Correspondent
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am