ಬ್ರೇಕಿಂಗ್ ನ್ಯೂಸ್
01-12-20 11:06 am Mangalore Correspondent ಕರಾವಳಿ
ಮಂಗಳೂರು, ಡಿ.1: ಉಳ್ಳಾಲ ಬಳಿಯ ಅಳಿವೆಬಾಗಿಲು ಬಳಿ ಸಮುದ್ರ ಮಧ್ಯೆ ಮೀನುಗಾರಿಕಾ ಬೋಟ್ ಮುಳುಗಡೆಯಾಗಿದ್ದು ಆರು ಜನ ನಾಪತ್ತೆಯಾಗಿದ್ದಾರೆ.
22 ಜನರಿದ್ದ ಪರ್ಸಿನ್ ಮೀನುಗಾರಿಕೆ ಬೋಟ್ ನಸುಕಿನಲ್ಲಿ ಹಿಂತಿರುಗುತ್ತಿದ್ದಾಗ ಭಾರೀ ಅಲೆಗಳ ಹೊಡೆತಕ್ಕೆ ಮುಳುಗಡೆಯಾಗಿದೆ. ಉಳ್ಳಾಲದ ಅಳಿವೆಬಾಗಿಲಿನ ಸಮೀಪದಲ್ಲಿ ನೇತ್ರಾವತಿ ನದಿ ಸಮುದ್ರ ಸೇರುವುದಕ್ಕಿಂತ ಸ್ವಲ್ಪ ದೂರದಲ್ಲಿ ದುರಂತ ನಡೆದಿದೆ ಎನ್ನಲಾಗುತ್ತಿದೆ. ಬೋಟಿನಲ್ಲಿದ್ದ 22 ಜನ ಮೀನುಗಾರರಲ್ಲಿ 6 ಮಂದಿ ನಾಪತ್ತೆಯಾಗಿದ್ದಾರೆ.



ಮಂಗಳೂರಿನ ಬೋಳಾರದ ಶ್ರೀರಕ್ಷಾ ಹೆಸರಿನ ಮೀನುಗಾರಿಕಾ ಬೋಟ್ ದುರಂತಕ್ಕೀಡಾಗಿದ್ದು ಮಂಗಳೂರು, ಉಳ್ಳಾಲದವರು ಸೇರಿ ತಮಿಳುನಾಡು ಮೂಲದ ಕಾರ್ಮಿಕರು ಬೋಟಿನಲ್ಲಿದ್ದರು. ಈ ಪೈಕಿ ಮಂಗಳೂರಿನ ಪಾಂಡುರಂಗ ಸುವರ್ಣ (58), ಪ್ರೀತಮ್ (25), ಚಿಂತನ್(21), ಜಿಯಾವುಲ್ಲಾ (32), ಅನ್ಸಾರ್ (31), ಹಸೈನಾರ್ (25) ಸಮುದ್ರದಲ್ಲಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಬೋಟಿನಲ್ಲಿ ಭಾರೀ ಪ್ರಮಾಣದಲ್ಲಿ ಮೀನುಗಳ ಸಂಗ್ರಹ ಇತ್ತು. ಹಿಂತಿರುಗಿ ಬರುತ್ತಿದ್ದಾಗ ಅಲೆಗಳ ಹೊಡೆತಕ್ಕೆ ಬೋಟ್ ಮಗುಚಿದೆ ಎನ್ನಲಾಗುತ್ತಿದೆ. ಇನ್ನೊಂದು ಮೂಲದ ಪ್ರಕಾರ, ಮತ್ತಷ್ಟು ಮೀನು ಬಲೆಗೆ ಬಿದ್ದಿದ್ದು ಬೋಟಿಗೆ ಎಳೆದು ಹಾಕುವ ವೇಳೆ ಒಂದು ಬದಿಗೆ ಇಡೀ ಬೋಟ್ ಮಗುಚಿದೆ ಎನ್ನಲಾಗುತ್ತಿದೆ. ಕೂಡಲೇ ಇತರೇ ಮೀನುಗಾರಿಕಾ ದೋಣಿಗಳ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. 16 ಮಂದಿ ಡಿಂಗಿ ಮೂಲಕ ಈಜಿ ಬೇರೆ ದೋಣಿಗಳ ಮೂಲಕ ಪಾರಾಗಿದ್ದಾರೆ.
Video:
Six fishermen go missing In a tragic boat accident near Ullal. The boat, named 'Shree Raksha' from Bolar had left bolar for fishing on Monday. As many as 22 fishermen were in the boat. Fourteen out of the 22 managed to rescue themselves with the help of lifeboats.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am