ಬ್ರೇಕಿಂಗ್ ನ್ಯೂಸ್
17-04-24 02:16 pm Mangalore Correspondent ಕರಾವಳಿ
ಮಂಗಳೂರು, ಎ.17: ಕಾರು ಡಿಕ್ಕಿಯಾಗಿ ಬೈಕ್ ಸವಾರ, ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಡ್ಯಾರ್ ನಲ್ಲಿ ನಡೆದಿದೆ.
ಬೆಳ್ತಂಗಡಿ ಮೂಲದ, ಅಡ್ಯಾರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿ ಸಾವಿಯೊ ಮಹೇಶ್ (21) ಮೃತರು. ಅವರ ಜೊತೆಗಿದ್ದ ಸಹ ಸವಾರ, ಬೆಳ್ತಂಗಡಿ ಲಾಯ್ಲ ನಿವಾಸಿ ಪ್ರಣಮ್ ಶೆಟ್ಟಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರಿಬ್ಬರೂ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಹಾಸ್ಟೆಲ್ ನಲ್ಲಿದ್ದುಕೊಂಡು ಓದುತ್ತಿದ್ದರು.
ಸೋಮವಾರ ಸಂಜೆ ಹೊರಗಡೆ ಟ್ಯೂಶನ್ ಮುಗಿಸಿ ಬೈಕಿನಲ್ಲಿ ರಾತ್ರಿ 9 ಗಂಟೆ ವೇಳೆಗೆ ಹಿಂತಿರುಗಿ ಸಹ್ಯಾದ್ರಿ ಕಾಲೇಜಿನತ್ತ ಬರುತ್ತಿದ್ದರು. ಅಡ್ಯಾರಿನ ಸಹ್ಯಾದ್ರಿ ಕಾಲೇಜಿನ ಎದುರಿನ ರಸ್ತೆಯಿಂದ ಗೇಟಿನತ್ತ ತಿರುವು ಪಡೆಯುತ್ತಿದ್ದಾಗ ಬಿ.ಸಿ.ರೋಡ್ ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಆಡಿ ಕಾರು ವೇಗವಾಗಿ ಬಂದು ಬೈಕಿಗೆ ಡಿಕ್ಕಿ ಹೊಡೆದಿತ್ತು. ಅಪಘಾತದ ತೀವ್ರತೆಗೆ ಇಬ್ಬರೂ ಗಂಭೀರ ಗಾಯಗೊಂಡಿದ್ದಾರೆ. ಮಹೇಶ್ ಅವರ ಮುಖ ಮತ್ತು ತಲೆಯ ಹಿಂಭಾಗಕ್ಕೆ ತೀವ್ರ ಗಾಯಗೊಂಡಿದ್ದು ಅವರನ್ನು ಕೂಡಲೇ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆಸ್ಪತ್ರೆಗೆ ತಲುಪುವಷ್ಟರಲ್ಲಿ ಮಹೇಶ್ ಸಾವನ್ನಪ್ಪಿದ್ದರು.
ಗಾಯಾಳುಗಳನ್ನು ಆಟೋ ಚಾಲಕ ನಾಸಿರ್ ಕೂಡಲೇ ಆಸ್ಪತ್ರೆಗೆ ಒಯ್ದಿದ್ದು ನಾಸಿರ್ ದೂರಿನನ್ವಯ ಕಾರು ಚಾಲಕ ಶ್ಯಾಮ್ ಸುಧೀರ್ ವಿರುದ್ಧ ನಗರ ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರಿನಿಂದ ಬಿಸಿ ರೋಡ್ ರಾಷ್ಟ್ರೀಯ ಹೆದ್ದಾರಿ ರಸ್ತೆ ಅವೈಜ್ಞಾನಿಕ ರೀತಿಯಲ್ಲಿದ್ದು ರಸ್ತೆ ವಿಭಜಕದ ನಡುವೆ ಜಾಗ ಇಲ್ಲ. ಯು ಟರ್ನ್ ಪಡೆಯುವಲ್ಲಿ ಎಲ್ಲ ಕಡೆಯೂ ಸಮಸ್ಯೆ ಇದ್ದು ಅಪಘಾತಕ್ಕೆ ಕಾರಣವಾಗುತ್ತಿದೆ. ಇತ್ತೀಚೆಗೆ ಅರ್ಕುಳದಲ್ಲಿ ಇದೇ ರೀತಿ ಹಲವಾರು ಅಪಘಾತಗಳಾಗಿದ್ದು ನಡುವೆ ನಿಲ್ಲುವುದಕ್ಕೂ ಜಾಗ ಇಲ್ಲದೆ ದ್ವಿಚಕ್ರ ವಾಹನ ಸವಾರರು ಬಲಿಯಾಗುತ್ತಿದ್ದಾರೆ.
Mangalore accident at Adyar, 21 year old engineering student dies after audi car rams bike. He was a engineering student of Shyadri college. The deceased has been identified as Savio Mahesh from Belthangady.
14-06-25 11:05 pm
Bangalore Correspondent
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
Bike Taxi, Ola, Uber, Karnataka: ರ್ಯಾಪಿಡೋ, ಉ...
13-06-25 08:47 pm
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
ಕಾರವಾರ ಜಿಲ್ಲಾ ಆಸ್ಪತ್ರೆಗೆ ನುಗ್ಗಿದ್ದ ಚರಂಡಿ ನೀರು...
12-06-25 11:07 pm
14-06-25 12:00 pm
HK News Desk
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
ಇರಾನ್ ಮೇಲೆ ಇಸ್ರೇಲ್ ಡೆಡ್ಲಿ ಅಟ್ಯಾಕ್ ; ಅಣ್ವಸ್ತ್ರ...
13-06-25 02:14 pm
15-06-25 12:12 pm
Mangalore Correspondent
Rahiman Murder, Senior Advocate Balan, Mangal...
14-06-25 10:21 pm
Mangalore Heavy Rain, Traffic, Pumpwell: ಒಂದೇ...
14-06-25 09:00 pm
Bangalore RCB Stampede, Veerappa Moily: ಕಾಲ್ತ...
14-06-25 02:49 pm
NIA Mangalore, Suhas Shetty Murder; ಸುಹಾಸ್ ಶೆ...
14-06-25 12:11 pm
14-06-25 11:02 pm
Bangalore Correspondent
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm