ಬ್ರೇಕಿಂಗ್ ನ್ಯೂಸ್
18-04-24 05:57 pm Mangalore Correspondent ಕರಾವಳಿ
ಮಂಗಳೂರು, ಎ.18: ನಗರದ ಉರ್ವಾ ಚಿಲಿಂಬಿಯ ಸಾಯಿಮಂದಿರದ ಬಳಿ ಚುನಾವಣೆ ಪ್ರಚಾರ ನಡೆಸುವ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರ ಘೋಷಣೆ ಕೂಗಿದ್ದಲ್ಲದೆ, ವಾಗ್ವಾದ ನಡೆಸಿದ ಘಟನೆ ನಡೆದಿದೆ.
ರಾಮನವಮಿ ಪ್ರಯುಕ್ತ ಸಾಯಿ ಮಂದಿರದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಹೀಗಾಗಿ ಭಕ್ತರ ಸಂಖ್ಯೆಯೂ ಹೆಚ್ಚಿತ್ತು. ಇದೇ ವೇಳೆ, ಮಂದಿರದ ಎದುರಿನ ರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಚಾರ ನಡೆಸುತ್ತ ತೆರಳುತ್ತಿದ್ದರು. ಇದನ್ನು ಕಂಡ ಅಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು, ಮಂದಿರದ ಬಳಿ ಪ್ರಚಾರ ನಡೆಸಬಾರದು ಎಂದು ಹೇಳಿದ್ದು ವಾಗ್ವಾದಕ್ಕೆ ಕಾರಣವಾಯಿತು.
ಕೆಲಹೊತ್ತಿನಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ಸೇರಿದ್ದು, ಪರಸ್ಪರ ವಾಗ್ವಾದ ನಡೆಸಿದ್ದಾರೆ. ಮಂದಿರದ ಬಳಿ ಪ್ರಚಾರ ನಡೆಸಬಾರದು ಎಂದು ನೀವು ಯಾರು ಹೇಳೋಕೆ ಎಂದು ಬಿಜೆಪಿಯವರು ಪ್ರಶ್ನಿಸಿದರೆ, ಇಲ್ಲಿ ಪ್ರಚಾರ ಮಾಡಲಿಕ್ಕಿಲ್ಲ, ನಾವು ಮಾಡೋದಿಲ್ಲ. ಮಂದಿರದಲ್ಲಿ ರಾಜಕೀಯ ಇಲ್ಲ ಎಂದಿದ್ದಾರೆ. ನಾವು ಒಳಗಡೆ ಪ್ರಚಾರ ಮಾಡ್ತಾ ಇಲ್ಲ. ಹೊರಗಿನಿಂದ ನಾವು ಹೋಗ್ತಾ ಇದ್ದರೆ ನೀವು ಯಾಕೆ ಅಡ್ಡಿ ಬಂದಿದ್ದು ಎಂದು ವಾಗ್ವಾದ ಮಾಡಿದ್ದಾರೆ. ಹೊಯ್ ಕೈ ಆಗುತ್ತೆ ಎನ್ನುವಾಗ ಶಾಸಕ ವೇದವ್ಯಾಸ ಕಾಮತ್ ಮತ್ತು ಕಾಂಗ್ರೆಸ್ ಮುಖಂಡ ಮಿಥುನ್ ರೈ ಸ್ಥಳಕ್ಕಾಗಮಿಸಿ ಕಾರ್ಯಕರ್ತರನ್ನು ಸಮಾಧಾನ ಪಡಿಸಿದ್ದು, ದೂರಕ್ಕ ಕಳಿಸಿದ್ದಾರೆ.
ಉರ್ವಾ ಇನ್ಸ್ ಪೆಕ್ಟರ್ ಭಾರತೀ ಸ್ಥಳಕ್ಕೆ ಬಂದು ಸೇರಿದ್ದ ಜನರನ್ನು ಚದುರಿಸುವ ಕೆಲಸ ಮಾಡಿದ್ದಾರೆ. ಕೆಲಹೊತ್ತು ಚಿಲಿಂಬಿಯಲ್ಲಿ ಜನ ಸೇರಿದ್ದರಿಂದ ವಾಗ್ವಾದ, ಹೊಡೆದಾಟಕ್ಕೆ ಕಾರಣವಾಗುತ್ತಾ ಅನ್ನುವ ಸ್ಥಿತಿ ಉಂಟಾಗಿತ್ತು.
Congress BJP campaign turns into fight near Sai mandir Chilimbi in Mangalore. Police who arrived at the spot sent the members of both the party away.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm