ಬ್ರೇಕಿಂಗ್ ನ್ಯೂಸ್
18-04-24 05:57 pm Mangalore Correspondent ಕರಾವಳಿ
ಮಂಗಳೂರು, ಎ.18: ನಗರದ ಉರ್ವಾ ಚಿಲಿಂಬಿಯ ಸಾಯಿಮಂದಿರದ ಬಳಿ ಚುನಾವಣೆ ಪ್ರಚಾರ ನಡೆಸುವ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರ ಘೋಷಣೆ ಕೂಗಿದ್ದಲ್ಲದೆ, ವಾಗ್ವಾದ ನಡೆಸಿದ ಘಟನೆ ನಡೆದಿದೆ.
ರಾಮನವಮಿ ಪ್ರಯುಕ್ತ ಸಾಯಿ ಮಂದಿರದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಹೀಗಾಗಿ ಭಕ್ತರ ಸಂಖ್ಯೆಯೂ ಹೆಚ್ಚಿತ್ತು. ಇದೇ ವೇಳೆ, ಮಂದಿರದ ಎದುರಿನ ರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಚಾರ ನಡೆಸುತ್ತ ತೆರಳುತ್ತಿದ್ದರು. ಇದನ್ನು ಕಂಡ ಅಲ್ಲಿದ್ದ ಕಾಂಗ್ರೆಸ್ ಕಾರ್ಯಕರ್ತರು, ಮಂದಿರದ ಬಳಿ ಪ್ರಚಾರ ನಡೆಸಬಾರದು ಎಂದು ಹೇಳಿದ್ದು ವಾಗ್ವಾದಕ್ಕೆ ಕಾರಣವಾಯಿತು.





ಕೆಲಹೊತ್ತಿನಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ಸೇರಿದ್ದು, ಪರಸ್ಪರ ವಾಗ್ವಾದ ನಡೆಸಿದ್ದಾರೆ. ಮಂದಿರದ ಬಳಿ ಪ್ರಚಾರ ನಡೆಸಬಾರದು ಎಂದು ನೀವು ಯಾರು ಹೇಳೋಕೆ ಎಂದು ಬಿಜೆಪಿಯವರು ಪ್ರಶ್ನಿಸಿದರೆ, ಇಲ್ಲಿ ಪ್ರಚಾರ ಮಾಡಲಿಕ್ಕಿಲ್ಲ, ನಾವು ಮಾಡೋದಿಲ್ಲ. ಮಂದಿರದಲ್ಲಿ ರಾಜಕೀಯ ಇಲ್ಲ ಎಂದಿದ್ದಾರೆ. ನಾವು ಒಳಗಡೆ ಪ್ರಚಾರ ಮಾಡ್ತಾ ಇಲ್ಲ. ಹೊರಗಿನಿಂದ ನಾವು ಹೋಗ್ತಾ ಇದ್ದರೆ ನೀವು ಯಾಕೆ ಅಡ್ಡಿ ಬಂದಿದ್ದು ಎಂದು ವಾಗ್ವಾದ ಮಾಡಿದ್ದಾರೆ. ಹೊಯ್ ಕೈ ಆಗುತ್ತೆ ಎನ್ನುವಾಗ ಶಾಸಕ ವೇದವ್ಯಾಸ ಕಾಮತ್ ಮತ್ತು ಕಾಂಗ್ರೆಸ್ ಮುಖಂಡ ಮಿಥುನ್ ರೈ ಸ್ಥಳಕ್ಕಾಗಮಿಸಿ ಕಾರ್ಯಕರ್ತರನ್ನು ಸಮಾಧಾನ ಪಡಿಸಿದ್ದು, ದೂರಕ್ಕ ಕಳಿಸಿದ್ದಾರೆ.
ಉರ್ವಾ ಇನ್ಸ್ ಪೆಕ್ಟರ್ ಭಾರತೀ ಸ್ಥಳಕ್ಕೆ ಬಂದು ಸೇರಿದ್ದ ಜನರನ್ನು ಚದುರಿಸುವ ಕೆಲಸ ಮಾಡಿದ್ದಾರೆ. ಕೆಲಹೊತ್ತು ಚಿಲಿಂಬಿಯಲ್ಲಿ ಜನ ಸೇರಿದ್ದರಿಂದ ವಾಗ್ವಾದ, ಹೊಡೆದಾಟಕ್ಕೆ ಕಾರಣವಾಗುತ್ತಾ ಅನ್ನುವ ಸ್ಥಿತಿ ಉಂಟಾಗಿತ್ತು.
Congress BJP campaign turns into fight near Sai mandir Chilimbi in Mangalore. Police who arrived at the spot sent the members of both the party away.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
10-01-26 10:45 pm
Mangalore Correspondent
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ...
10-01-26 06:07 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm