ಬ್ರೇಕಿಂಗ್ ನ್ಯೂಸ್
19-04-24 09:55 pm Mangalore Correspondent ಕರಾವಳಿ
ಮಂಗಳೂರು, ಎ.19: ರಸ್ತೆ ದಾಟುತ್ತಿದ್ದ ಯುವಕನೊಬ್ಬ ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದು ಆತನ ಮೇಲೆ ಟ್ಯಾಂಕರ್ ಲಾರಿ ಹರಿದ ಘಟನೆ ನಗರದ ಕೊಟ್ಟಾರ ಚೌಕಿ ಬಳಿ ನಡೆದಿದ್ದು ಸ್ಥಳದಲ್ಲೇ ಯುವಕ ದಾರುಣ ಮೃತಪಟ್ಟಿದ್ದಾನೆ.
ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್(29) ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯ ಕೊಟ್ಟಾರ ಬಳಿಯ ಕೋಡಿಕಲ್ ಕ್ರಾಸ್ ನಲ್ಲಿ ಘಟನೆ ನಡೆದಿದೆ.

ಬೆಳಗ್ಗೆ 9 ಗಂಟೆ ಸುಮಾರಿಗೆ ಅಪಘಾತವಾಗಿದ್ದು ಸ್ಥಳದಲ್ಲಿ ಟ್ರಾಫಿಕ್ ಬ್ಲಾಕ್ ಆಗಿ ಕಿಮೀ ಉದ್ದಕ್ಕೆ ವಾಹನಗಳು ಸಾಲುಗಟ್ಟಿದ್ದವು. ಯುವಕ ಸ್ಥಳದಲ್ಲೇ ಸಾವು ಕಂಡಿದ್ದರಿಂದ ಆತನ ಗುರುತು ಪತ್ತೆಯಾಗಿರಲಿಲ್ಲ. ಸ್ಥಳದಲ್ಲಿ ಸೇರಿದ್ದ ಸಾರ್ವಜನಿಕರು ಯುವಕನ ಕಿಸೆಯಲ್ಲಿ ಐಡಿ ಕಾರ್ಡ್ ಇದೆಯಾ ಎಂದು ಹುಡುಕಾಟ ನಡೆಸುತ್ತಿದ್ದರು. ಬಳಿಕ ಆತನ ಜೊತೆಗೆ ಕೆಲಸ ನಿರ್ವಹಿಸುತ್ತಿದ್ದವರು ಬಂದು ಗುರುತು ಹೇಳಿದ್ದಾರೆ.
ಕೋಡಿಕಲ್ ಕ್ರಾಸ್ ಆಗುವಲ್ಲಿ ಅತಿ ವೇಗದಿಂದ ಈ ಕಡೆಯಿಂದ ವಾಹನಗಳು ಸಾಗುವುದರಿಂದ ನಿರಂತರ ಅಪಘಾತಕ್ಕೆ ಕಾರಣವಾಗುತ್ತಿದೆ. ಅಸಮರ್ಪಕ ಹೆದ್ದಾರಿ ನಿರ್ಮಾಣವೂ ಇದಕ್ಕೆ ಕಾರಣ. ಯುವಕನಿಗೆ ಬೈಕ್ ತಾಗಿದ್ದರಿಂದ ಸವಾರನೂ ನೆಲಕ್ಕೆ ಬಿದ್ದು ಗಾಯಗೊಂಡಿದ್ದ. ಆದರೆ ಪಾದಚಾರಿ ಯುವಕನ ಮೇಲೆ ಹರಿದ ಟ್ಯಾಂಕರ್ ಲಾರಿ ಆತನ ಪ್ರಾಣ ಕಸಿದು ಬಿಟ್ಟಿದೆ. ಬೆಳಗ್ಗೆ ಆಗಿದ್ದರಿಂದ ಸ್ಥಳದಲ್ಲಿ ಪೊಲೀಸರೂ ಇಲ್ಲದೆ ಟ್ರಾಫಿಕ್ ಸರಿಪಡಿಸುವುದಕ್ಕೂ ಯಾರೂ ಇರಲಿಲ್ಲ. ಸ್ಥಳೀಯರೇ ಸೇರಿಕೊಂಡು ಟ್ರಾಫಿಕ್ ಸರಿಪಡಿಸಲು ಮುಂದಾಗಿದ್ದರು.
Mangalore accident worker from UP run over by tanker in Kulur. The deceased is identified as Guddu Yadav, 29, from Uttar Pradesh.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am