ಬ್ರೇಕಿಂಗ್ ನ್ಯೂಸ್
21-04-24 10:10 pm Mangalore Correspondent ಕರಾವಳಿ
ಮಂಗಳೂರು, ಎ.21: ಅದು ಜಗತ್ತಿನ ಬೇರೆಲ್ಲೂ ಇಲ್ಲದ ಅತ್ಯಂತ ಅಪರೂಪದ ಮಹಾಶಿವನ ಆಲಯ. ಹಣೆಯ ಮೇಲೆ ಶಿವಲಿಂಗವನ್ನು ಹೊತ್ತ ನಂದಿಯ ರೂಪದ ವಿಗ್ರಹಕ್ಕೆ ಆರಾಧನೆ ನಡೆಯುವ ಏಕೈಕ ದೇವಸ್ಥಾನ. ಅರ್ಥಾತ್ ಬಸವನ ರೂಪದ ಮಹಾದೇವನೇ ಅಲ್ಲಿನ ಆರಾಧ್ಯ ಮೂರ್ತಿ. ಸುಮಾರು 800 ವರ್ಷಗಳ ಪ್ರಾಚೀನ ಇತಿಹಾಸವುಳ್ಳ, ಪಶ್ಚಿಮ ಘಟ್ಟದ ತಪ್ಪಲಿನ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕುಲ್ಕುಂದ ‘’ಬಸವನಮೂಲ’’ ಎಂದೇ ಪ್ರಸಿದ್ಧಿಯಾಗಿರುವ ಬಸವೇಶ್ವರ ದೇವಸ್ಥಾನದಲ್ಲಿ ಶಿವನಿಗೆ ಅತಿ ಪ್ರಿಯ ಎನ್ನಲಾದ ಸಾಮೂಹಿಕ ಅತಿರುದ್ರ ಮಹಾಯಾಗ ನಡೆಸಲು ನಿಶ್ಚಯಿಸಲಾಗಿದೆ.
ತಾರಕಾಸುರನ ವಧೆಗಾಗಿ ಸುಬ್ರಹ್ಮಣ್ಯ ಸ್ವಾಮಿ ಮಹಾದೇವನ ಕುರಿತು ತಪಸ್ಸು ಮಾಡಿದಾಗ, ಸಾಕ್ಷಾತ್ ಮಹಾದೇವನೇ ನಂದಿ ರೂಪದಲ್ಲಿ ಒಲಿದ ಸ್ಥಳ ಇದು ಎನ್ನುವುದು ಇಲ್ಲಿನ ಐತಿಹ್ಯ. ಅರಣ್ಯ ಮಧ್ಯದ ಇಂತಹ ಅದ್ಭುತ ಪ್ರದೇಶದಲ್ಲಿ ಲೋಕಕಲ್ಯಾಣ ಸಲುವಾಗಿ ವಿಶೇಷ ರೀತಿಯ ಅತಿರುದ್ರ ಯಾಗ ನಡೆಸಲು ಭಗವದ್ಬಕ್ತರು ಸೇರಿ ಸಂಕಲ್ಪಿಸಿದ್ದಾರೆ. ಲಕ್ಷಕ್ಕೂ ಹೆಚ್ಚು ಮಂದಿ ಸಂಕಲ್ಪದ ಮೂಲಕ ಅತಿರುದ್ರ ಮಹಾಯಾಗ ನಡೆಸಬೇಕೆಂದು ನಿಶ್ಚಯಿಸಿದ್ದು, ಇದಕ್ಕಾಗಿ ಸಾಮೂಹಿಕ ಸಹಭಾಗಿತ್ವಕ್ಕೆ ಯೋಜನೆ ಹಮ್ಮಿಕೊಳ್ಳಲಾಗಿದೆ.


ಆನ್ಲೈನ್ ನೋಂದಣಿಗೆ ಅವಕಾಶ
ಅತಿರುದ್ರ ಮಹಾಯಾಗವನ್ನು ಹಣ ಇದ್ದವರು ಮಾತ್ರ ಕೈಗೊಳ್ಳಲು ಸಾಧ್ಯ. ಜನಸಾಮಾನ್ಯರಿಗೂ ಅತಿರುದ್ರ ಮಹಾಯಾಗದ ಪ್ರಸಾದ ಸಿಗಬೇಕು ಮತ್ತು ಶಿವನ ಅನುಗ್ರಹ ಲಭಿಸಬೇಕೆಂದು ಬಸವನಮೂಲ ಬಸವೇಶ್ವರ ದೇವಸ್ಥಾನದಲ್ಲಿ 2025ರ ನವೆಂಬರ್ 17ರಂದು ಅತಿರುದ್ರ ಮಹಾಯಾಗ ನಡೆಸಲಾಗುತ್ತಿದ್ದು, ಬಡವ, ಬಲ್ಲಿದರೆಲ್ಲರೂ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಅತಿರುದ್ರ ಮಹಾಯಾಗ ಮಾಡುವ ಪ್ರತಿಯೊಬ್ಬ ಭಕ್ತನ ಹೆಸರಿನಲ್ಲಿಯೂ ರುದ್ರಾಕ್ಷಿಯನ್ನು ಸಂಕಲ್ಪಿಸಿ ಭಕ್ತರ ವಿಳಾಸಕ್ಕೆ ಕಳುಹಿಸಿಕೊಡಲಾಗುವುದು. ಅತಿ ಹೆಚ್ಚು ಜನರು ಸೇರಬೇಕು ಮತ್ತು ಸರ್ವರಿಗೂ ಶಿವನ ಅನುಗ್ರಹ ಲಭಿಸುವ ದೃಷ್ಟಿಯಿಂದ ಅತಿರುದ್ರ ಯಾಗ ಸೇವೆಗೆ ಕೇವಲ ರೂ. 353 ನಿಗದಿ ಪಡಿಸಲಾಗಿದ್ದು, ಆನ್ಲೈನ್ / ವಾಟ್ಸಪ್ ಮೂಲಕವೂ ನೋಂದಣಿಗೆ ಅವಕಾಶ ಇದೆ.
ಇದೇ ಮೇ 6ರಂದು ಸಂಕಲ್ಪ ಆರಂಭ
ಆರಂಭಿಕವಾಗಿ ಯಾಗ ನೋಂದಣಿ ನೆರವೇರಿಸುವ 14,641 ಭಕ್ತರ ಹೆಸರಲ್ಲಿ ಇದೇ ಮೇ 6ರಂದು ಬಸವನಮೂಲ ಬಸವೇಶ್ವರ ಕ್ಷೇತ್ರದಲ್ಲಿ ಯಾಗ ಸಂಕಲ್ಪ ನೆರವೇರಲಿದ್ದು, ಅಷ್ಟೂ ಮಂದಿ ಇಚ್ಛಿಸಿದಲ್ಲಿ ಕ್ಷೇತ್ರದಲ್ಲಿ ಸಾಮೂಹಿಕ ಸಂಕಲ್ಪ ಕೈಗೊಳ್ಳಲು ಅವಕಾಶ ಮಾಡಲಾಗಿದೆ. ಅತಿರುದ್ರ ಯಾಗ ನಡೆಸುವುದಕ್ಕೂ ಮುನ್ನ ಮಹಾರುದ್ರ ಯಾಗವನ್ನು ಇದೇ ಕಾರ್ತಿಕ ಮಾಸದಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಅತಿರುದ್ರ ಮಹಾಯಾಗ ಅತ್ಯಂತ ಅಪರೂಪದ ಕೈಂಕರ್ಯವಾಗಿದ್ದು, ಯಾಗಕ್ಕೆ ನೋಂದಾಯಿಸಿದ ಭಕ್ತರ ಹೆಸರಲ್ಲಿ ಬೆಳಗ್ಗೆ ಎಂಟು ಗಂಟೆಗೆ ಸಂಕಲ್ಪ ನೆರವೇರಲಿದೆ. ಇದನ್ನು ಯೌಟ್ಯೂಬ್ ಲೈವ್ ಮುಖಾಂತರ ಪ್ರತಿಯೊಬ್ಬರಿಗೂ ನೋಡುವ ವ್ಯವಸ್ಥೆ ಮಾಡಲಾಗಿದೆ. ದೂರದ ಊರಿನಲ್ಲಿ ಇರುವ ಭಕ್ತರೂ ಈ ಸೇವೆ ಮಾಡಬಹುದಾಗಿದ್ದು, ಆನ್ಲೈನಲ್ಲಿ ನೋಂದಣಿ ಮಾಡಿದವರಿಗೆ ಯಾಗದ ಪ್ರಸಾದರೂಪವಾಗಿ ರುದ್ರಾಕ್ಷಿ, ರಕ್ಷೆ ಮತ್ತು ಭಸ್ಮವನ್ನು ಪೋಸ್ಟ್ ಮೂಲಕ ತಲುಪಿಸಲಾಗುವುದು. ಶಿವನ ಪ್ರೀತ್ಯರ್ಥ ಮೊದಲ ಬಾರಿಗೆ ಅತಿರುದ್ರ ಮಹಾಯಾಗ ನೆರವೇರಲಿದ್ದು, ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ವ್ಯವಸ್ಥೆ ಮಾಡಲಾಗುತ್ತಿದೆ. ಆನ್ಲೈನ್ ನೋಂದಣಿ ಮಾಡಿಕೊಳ್ಳಲು ಈ ಲಿಂಕ್ https://zfrmz.com/kjITqzcjpoyBbRLIVS4w ಬಳಸಬಹುದು.
Mass Atirudra Mahayaga at Basavanamula'' Basaveshwara Temple; Preparation for a rare Sankalpa at the place where Lord Shiva has appeared in the form of Nandi, online registration is also available for Atirudra Mahayaga service.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am