ಬ್ರೇಕಿಂಗ್ ನ್ಯೂಸ್
25-04-24 08:45 pm Udupi Correspondent ಕರಾವಳಿ
ಉಡುಪಿ, ಏ.25: ಸದ್ಯ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿ ಯಲ್ಲಿರುವುದರಿಂದ ಹೆಚ್ಚಿನ ಯಾವುದೇ ರಕ್ತ ದಾನ ಶಿಬಿರ ನಡೆಯುತ್ತಿಲ್ಲದ ಕಾರಣ ಕಸ್ತೂರ್ಬಾ ಆಸ್ಪತ್ರೆಯಲ್ಲಿ ರಕ್ತದ ತೀವ್ರ ಕೊರತೆ ಉಂಟಾಗಿದೆ ಎಂದು ಪ್ರಕಟಣೆ ಯೊಂದರಲ್ಲಿ ತಿಳಿಸಿರುವ ಕೆಎಂಸಿಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, 'ರಕ್ತದಾನ ಮಾಡಿ ಜೀವ ಉಳಿಸಿ' ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ರಕ್ತದ ಕೊರತೆಯಿಂದ ಕೆಲವೊಂದು ಕಾಯಿಲೆಗಳಿಗೆ ಮತ್ತು ಅಪಘಾತ ಸಂದರ್ಭದಲ್ಲಿ ತುರ್ತು ಶಸ್ತ್ರಚಿಕಿತ್ಸೆಗಳನ್ನು ಮುಂದೂ ಡುವ ಪ್ರಮೇಯ ತಲೆದೋರಿದೆ. ಆದ್ದರಿಂದ ಈ ಬಿಕ್ಕಟ್ಟನ್ನು ನಿವಾರಿಸಲು ಮತ್ತು ಜೀವ ಉಳಿಸಲು ಸಾರ್ವಜನಿಕರು ರಕ್ತದಾನ ಮಾಡುವಂತೆ ಮನವಿ ಮಾಡಿದ್ದಾರೆ.
ನಿಮ್ಮ ಕೊಡುಗೆ ಗಮನಾರ್ಹ ವ್ಯತ್ಯಾಸವನ್ನು ಮಾಡಬಹುದು. ದಯವಿಟ್ಟು ರಕ್ತದಾನ ಮಾಡಿ ಮತ್ತು ಈ ತುರ್ತು ಅಗತ್ಯದ ಸಮಯದಲ್ಲಿ ನಮ್ಮ ಸಮುದಾಯಕ್ಕೆ ಸೇವೆ ಸಲ್ಲಿಸಲು ನಮಗೆ ಸಹಾಯ ಮಾಡಿ. ರಕ್ತ ನಿಧಿಯಲ್ಲಿ ಬೆಳಗ್ಗೆ 7ಗಂಟೆಯಿಂದ ರಾತ್ರಿ 7ಗಂಟೆಯವರೆಗೆ ರಕ್ತ ದಾನ ಮಾಡಬಹುದು.
ಹೆಚ್ಚಿನ ಮಾಹಿತಿಗೆ ರಕ್ತನಿಧಿ ದೂರವಾಣಿ ಸಂಖ್ಯೆ: 0820-2923191 ಸಂಪರ್ಕಿಸುವಂತೆ' ಪ್ರಕಟಣೆಯಲ್ಲಿ ಡಾ.ಅವಿನಾಶ್ ಶೆಟ್ಟಿ ಮನವಿ ಮಾಡಿದ್ದಾರೆ.
Manipal Kmc hospital requests public to donate blood due to scarcity of blood.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 07:26 pm
HK News Desk
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am