ಬ್ರೇಕಿಂಗ್ ನ್ಯೂಸ್
26-04-24 01:47 pm Mangalore Correspondent ಕರಾವಳಿ
ಮಂಗಳೂರು, ಎ.26: ಪ್ರಧಾನಿ ನರೇಂದ್ರ ಮೋದಿ ಪಾಲಿಗೆ ನಾರಿಶಕ್ತಿಯೇ ಪರಮೋಚ್ಛ. ನವರಾತ್ರಿ ದಿನಗಳಲ್ಲಿ ಮೋದಿಯವರು ನವದುರ್ಗೆಯರನ್ನು ಆರಾಧಿಸಿ ಒಂಬತ್ತು ದಿನಗಳಲ್ಲಿ ಅನ್ನಾಹಾರ ತ್ಯಜಿಸಿ ಕೇವಲ ನೀರು ಕುಡಿದು ನವರಾತ್ರಿ ಆಚರಿಸುವುದನ್ನು ವಾಡಿಕೆ ಮಾಡಿಕೊಂಡಿದ್ದಾರೆ. ಪ್ರಧಾನಿ ಮೋದಿ ನಾರಿಶಕ್ತಿಗೆ ನೀಡುವ ಮನ್ನಣೆಯನ್ನು ಗುರುತಿಸಿ ಈ ಬಾರಿ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ, ಮೋದಿ ಪರವಾಗಿ ನಾರಿಶಕ್ತಿ ಒಗ್ಗೂಡುವಂತೆ ಕರೆ ನೀಡಿದ್ದರು. ಇದಕ್ಕೆ ಮಂಗಳೂರಿನಲ್ಲಿ ಒಳ್ಳೆಯ ಸ್ಪಂದನೆ ಸಿಕ್ಕಿದೆ.
ಎಲ್ಲ ಮತಗಟ್ಟೆಗಳಲ್ಲೂ ನವದುರ್ಗೆಯರಾಗಿ ಮಹಿಳೆಯರು ಮೊದಲು ಬಂದು ಮತ ಚಲಾಯಿಸಿದ್ದಾರೆ. ಇದರ ಫೋಟೋಗಳನ್ನು ಜಾಲತಾಣದಲ್ಲಿ ಶೇರ್ ಮಾಡಿದ್ದು, ಬಿಜೆಪಿ ಅಭ್ಯರ್ಥಿ ನೀಡಿರುವ ಕರೆಗೆ ಅಭೂತಪೂರ್ವ ಸ್ಪಂದನೆ ಸಿಕ್ಕಿರುವುದು ಕಂಡುಬಂದಿದೆ. ನವದುರ್ಗೆಯರ ರೂಪದಲ್ಲಿ ಮತಗಟ್ಟೆಗೆ ಮೊದಲು ಬಂದು ಮತ ಚಲಾಯಿಸಬೇಕು, ಆಮೂಲಕ ಮೋದಿ ಮತ್ತೊಮ್ಮೆ ಪ್ರಧಾನಿಯಾಗುವಂತೆ ಆಶೀರ್ವಾದ ಮಾಡಬೇಕು ಎಂದು ಬ್ರಿಜೇಶ್ ಚೌಟ ಕರೆ ನೀಡಿದ್ದರು.
















ಮಂಗಳೂರಿನ ಕಪಿತಾನಿಯೋ ಶಾಲೆಯ ಮತಗಟ್ಟೆಯಲ್ಲಿ ಒಂಬತ್ತು ಮಂದಿ ಮಹಿಳೆಯರು ಬೆಳಗ್ಗೆ 6.30ರ ವೇಳೆಗೇ ಬಂದು ಕುಳಿತುಕೊಂಡಿದ್ದರು. ಮತಗಟ್ಟೆ ತೆರೆಯುವ ಮೊದಲೇ ಸೀರೆಯುಟ್ಟ ನಾರಿಯರು ಹೊರಗಿನ ಅಂಗಣದಲ್ಲಿ ಕುಳಿತು ವಿಜಯದ ನಗೆ ಬೀರಿದ್ದಾರೆ. ಆಮೂಲಕ ನಾರಿಶಕ್ತಿಯ ಸಾಥ್ ನರೇಂದ್ರ ಮೋದಿ ಪರವಾಗಿದೆ ಎನ್ನುವ ಸಂದೇಶವನ್ನು ಮಹಿಳೆಯರು ನೀಡಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಕ್ಯಾ.ಬ್ರಿಜೇಶ್ ಚೌಟ, ಜಿಲ್ಲೆಯಾದ್ಯಂತ ನಾರಿಶಕ್ತಿಯರಿಂದ ಉತ್ತಮ ಸ್ಪಂದನೆ ಸಿಕ್ಕಿದ್ದು, ಮೊದಲ ಬಾರಿಗೆ ಮತಗಟ್ಟೆಗೆ ಬಂದು ಮೋದಿಯವರಿಗೆ ಆಶೀರ್ವದಿಸಿದ್ದಾರೆ. ಅವರಿಗೆಲ್ಲ ಆಭಾರಿಯಾಗಿದ್ದೇನೆ ಎಂದು ಹೇಳಿದ್ದಾರೆ.
ಸಾಮಾನ್ಯವಾಗಿ ಮಹಿಳೆಯರು ಬೆಳಗ್ಗೆ ಎಂದಿನ ತಮ್ಮ ಕೆಲಸ ಮುಗಿಸಿ ಮತಗಟ್ಟೆಗೆ ತೆರಳುವುದು ರೂಢಿ. ಆದರೆ, ಬ್ರಿಜೇಶ್ ಚೌಟರು ನವದುರ್ಗೆಯರ ರೂಪದಲ್ಲಿ ಬನ್ನಿ ಎನ್ನುವ ಕೋರಿಕೆ ಇಟ್ಟಿದ್ದನ್ನು ಮಹಿಳೆಯರು ಪುರಸ್ಕರಿಸಿದ್ದಾರೆ. ಆಮೂಲಕ ಮತದಾನ ಕೇಂದ್ರಗಳಲ್ಲಿ ಮಹಿಳೆಯರು ಬೆಳಗ್ಗೆಯೇ ಹೊಸ ಸಂಚಲನ ಮೂಡಿಸಿದ್ದಾರೆ.
For Prime Minister Narendra Modi, Nari Shakti is supreme. During Navratri, Modi worships Goddess Navadurga, gives up food for nine days and drinks only water to celebrate Navratri. This time, BJP candidate K Brijesh Chowta had called for nari shakti to unite in favour of Modi, recognising the recognition given to him by Prime Minister Narendra Modi. It has received a good response in Mangalore.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 07:06 pm
Mangaluru Staffer
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm