ಬ್ರೇಕಿಂಗ್ ನ್ಯೂಸ್
27-04-24 06:40 pm Mangalore Correspondent ಕರಾವಳಿ
ಮಂಗಳೂರು, ಎ.27: ಖ್ಯಾತ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಶಿಬರೂರು ಕೊಡಮಣಿತ್ತಾಯ ಕ್ಷೇತ್ರದಲ್ಲಿ ನಡೆಯುತ್ತಿರುವ ಬ್ರಹ್ಮಕುಂಭಾಭಿಷೇಕ, ಅಷ್ಟಪವಿತ್ರ ನಾಗಮಂಡಲ ಸೇವೆ ಉತ್ಸವದಲ್ಲಿ ಪಾಲ್ಗೊಂಡು ತುಳುವಿನಲ್ಲಿ ಮಾತನಾಡಿ ಭಾಷಾ ಪ್ರೀತಿಯನ್ನು ತೋರಿಸಿದ್ದಾರೆ.
ಸಂಜೆಯ ವೇಳೆಗೆ ಶಿಬರೂರಿಗೆ ಬಂದಿದ್ದು ಅವರನ್ನು ಪೂರ್ಣಕುಂಭ, ಕೊಂಬು ಕಹಳೆಯೊಂದಿಗೆ ಸ್ವಾಗತ ನೀಡಲಾಯಿತು. ಬ್ರಹ್ಮಕಲಶ ಸಲುವಾಗಿ ರಾತ್ರಿ ನಡೆದ ಸಮಾರಂಭದಲ್ಲಿ ಶಿಲ್ಪಾ ಶೆಟ್ಟಿ ತುಳುವಿನಲ್ಲಿ ಮಾತನಾಡಿದ್ದಾರೆ. ನಾನು ಕೂಡ ತುಳುವ ನಾಡಿನ ಹೆಣ್ಣು. ತುಳುವ ಹೆಣ್ಣು ಎಂಬ ಹೆಮ್ಮೆಯೂ ನನಗಿದೆ. ನಾನು ರಾಜ್ ಕುಂದ್ರಾ ಅವರನ್ನು ಮದುವೆಯಾದರೂ ನನ್ನ ಶೆಟ್ಟಿ ಸರ್ ನೇಮ್ ಬದಲು ಮಾಡಿಕೊಳ್ಳಲ್ಲ. ನನಗೆ ಶೆಟ್ಟಿ ಎನ್ನುವುದೇ ತುಳುನಾಡಿನ ಹೆಗ್ಗುರುತು. ನನ್ನ ತುಳು ಭಾಷೆಯಲ್ಲಿ ತಪ್ಪುಗಳಿದ್ದರೆ ಕ್ಷಮಿಸಿ. ಮುಂದೆಯೂ ಕೊಡಮಣಿತ್ತಾಯ ಕ್ಷೇತ್ರದ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ಕೊಡುತ್ತೇನೆ ಎಂದರು.





ನಟಿ ಶಿಲ್ಪಾ ಶೆಟ್ಟಿ, ಅವರ ಮಕ್ಕಳಾದ ವಿಯಾನ್, ಸಮಿಷಾ, ತಾಯಿ ಸುನಂದಾ ಶೆಟ್ಟಿ ಜೊತೆಯಲ್ಲಿದ್ದರು. ಕಟೀಲು ಮೂಲದ ಶಿಲ್ಪಾ ಶೆಟ್ಟಿ ಪ್ರತಿ ವರ್ಷ ಕುಟುಂಬದ ಕಾರ್ಯಕ್ರಮಗಳಿಗೆ ಬರುತ್ತಾರೆ. ಕಳೆದ ವರ್ಷ ಎಪ್ರಿಲ್ ನಲ್ಲಿ ಪತಿ ರಾಜ್ ಕುಂದ್ರಾ ಜೊತೆಗೆ ಊರಿಗೆ ಬಂದಿದ್ದ ಶಿಲ್ಪಾ ಶೆಟ್ಟಿ ಕಟೀಲು ದೇವಸ್ಥಾನಕ್ಕೆ ಭೇಟಿ ನೀಡಿ ಸೀರೆ ಹರಕೆಯಿತ್ತು ತೆರಳಿದ್ದರು.
ಇತ್ತೀಚೆಗೆ ನಟಿ ಶಿಲ್ಪಾ ಶೆಟ್ಟಿ ಮತ್ತು ಪತಿ ರಾಜ್ ಕುಂದ್ರಾಗೆ ಸೇರಿದ 97 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿದ್ದು ಸುದ್ದಿಯಾಗಿತ್ತು.
Actress Shilpa Shetty visits Shibaroor Kodamanithaya temple in Mangalore with family. She said i am proud to be a Tuluva girl, I have never changed the surname Shetty she added. She came along with her son Viyan and her mother Sunanda Shetty.
15-02-26 10:38 pm
HK News Desk
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
16-02-26 11:13 pm
Mangaluru Staffer
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm