ಬ್ರೇಕಿಂಗ್ ನ್ಯೂಸ್
29-04-24 11:05 am Mangalore Correspondent ಕರಾವಳಿ
ಉಳ್ಳಾಲ,ಎ. 29: ಎರಡು ಪುಟ್ಟ ಮಕ್ಕಳ ತಂದೆ ನೇಣು ಬಿಗಿದು ಆತ್ಮಹತ್ಯೆಗೈದಿರುವ ಘಟನೆ ಕುಂಪಲ ಹನುಮಾನ್ ನಗರ ಎಂಬಲ್ಲಿ ಇಂದು ಬೆಳ್ಳಂಬೆಳಗ್ಗೆ ನಡೆದಿದೆ. ಸ್ವಸಹಾಯ ಸಂಘದ ನಲ್ವತ್ತು ಸಾವಿರ ರೂಪಾಯಿ ಬಾಕಿ ಹಣದ ವಿಚಾರದಲ್ಲಿ ಆತ್ಮಹತ್ಯೆ ನಡೆದಿರುವುದಾಗಿ ಆರೋಪ ಕೇಳಿ ಬಂದಿದೆ.
ಕುಂಪಲ ಹನುಮಾನ್ ನಗರ ನಿವಾಸಿ ಯೋಗೀಶ್(44) ಆತ್ಮಹತ್ಯೆಗೈದ ದುರ್ದೈವಿ. ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಯೋಗೀಶ್ ಇಂದು ಬೆಳಗ್ಗೆ ತಮ್ಮ ಮನೆಗೆ ತಾಗಿಕೊಂಡಿರುವ ಶೌಚಾಲಯದ ಮರದ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ.



ಯೋಗೀಶ್ ಸ್ವಸಹಾಯ ಗುಂಪೊಂದರ ಸದಸ್ಯರಾಗಿದ್ದು ಸಂಘದ ನಲ್ವತ್ತು ಸಾವಿರ ರೂಪಾಯಿಗಳನ್ನ ಬ್ಯಾಂಕಿಗೆ ಕಟ್ಟದೆ ಖರ್ಚು ಮಾಡಿದ್ದರು ಎನ್ನಲಾಗಿದೆ. ಈ ಬಗ್ಗೆ ಸಂಘದ ಉಳಿದ ಸದಸ್ಯರು ಭಾನುವಾರ ಬೆಳಗ್ಗೆ ಮತ್ತು ಸಂಜೆ ಯೋಗೀಶ್ ಅವರ ಮನೆಗೆ ತೆರಳಿ ಹಣ ಕಟ್ಟುವಂತೆ ಪೀಡಿಸಿದ್ದರೆಂದು ಆರೋಪ ಇದೆ. ಇದೇ ಅವಮಾನದಲ್ಲಿ ಯೋಗೀಶ್ ಆತ್ಮಹತ್ಯೆಗೈದಿರುವುದಾಗಿ ಹೇಳಲಾಗುತ್ತಿದೆ. ಬರೀ ನಲ್ವತ್ತು ಸಾವಿರ ರೂಪಾಯಿ ವಿಚಾರದಲ್ಲಿ ಆತ್ಮಹತ್ಯೆಗೈದರೆ ಕೋಟಿ ಸಾಲ ವೀರರ ಕತೆಯೇನಾಗಬೇಕು, ಸಾವಿಗೆ ಇನ್ಯಾವುದೋ ಕಾರಣವಿರಬಹುದೆಂದು ಯೋಗೀಶ್ ಆಪ್ತರು ಹೇಳಿದ್ದಾರೆ. ಆರ್ ಬಿಐ ನ ನಿಯಮ ಉಲ್ಲಂಘಿಸಿ ಜನಸಾಮಾನ್ಯರಿಂದ ಚಕ್ರ ಬಡ್ಡಿ ಪೀಕಿಸುತ್ತಿರುವ ಸ್ವಸಹಾಯ ಸಂಘಗಳಿಗೂ ಲಗಾಮು ಹಾಕುವ ಕಾರ್ಯ ನಡೆಯಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ. ಉಳ್ಳಾಲ ಠಾಣಾ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ.
ಯೋಗೀಶ್ ಪತ್ನಿ ಆತ್ಮಹತ್ಯೆಗೆ ಯತ್ನ
ಯೋಗೀಶ್ ಸಾವನ್ನಪ್ಪಿದ್ದನ್ನು ಕಂಡ ಪತ್ನಿಯೂ ನೇಣು ಬಿಗಿದು ಆತ್ಮ ಹತ್ಯೆಗೈಯಲು ಮುಂದಾಗಿದ್ದಾರೆ. ಘಟನಾ ಸ್ಥಳದಲ್ಲಿ ನೆರೆದಿದ್ದ ಸ್ಥಳೀಯರು ಆಕೆಯನ್ನ ತಡೆದು ಸಂತೈಸಿದ್ದಾರೆ. ಮೃತ ಯೋಗೀಶ್ ಇಬ್ಬರು ಪುಟ್ಟ ಗಂಡು ಮಕ್ಕಳು, ಪತ್ನಿ, ತಾಯಿಯನ್ನು ಅಗಲಿದ್ದಾರೆ.
Mangalore 44 year old man in kumpala commits suicide in the toilet. The deceased has been identified as Yogish. Some finance matter has lead him to take this extreme step.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am