ಬ್ರೇಕಿಂಗ್ ನ್ಯೂಸ್
29-04-24 08:05 pm Mangalore Correspondent ಕರಾವಳಿ
ಉಳ್ಳಾಲ, ಎ.29: ಉಳ್ಳಾಲ ತಾಲೂಕು ವ್ಯಾಪ್ತಿಯ ತೊಕ್ಕೊಟ್ಟು ಸಮೀಪದ ಕಲ್ಲಾಪು ಹೃದಯ ಭಾಗದಲ್ಲಿ ನಿರ್ಮಾಣಗೊಂಡ " ಸೂಪರ್ ಗೋಲ್ಡ್ & ಡೈಮಂಡ್ಸ್" ನೂತನ ಚಿನ್ನಾಭರಣ ಮಳಿಗೆ ಎ.30ರ ಮಂಗಳವಾರ ಬೆಳಗ್ಗೆ 9 ಗಂಟೆಗೆ ಉದ್ಘಾಟನೆಗೊಳ್ಳಲಿದ್ದು, ಸ್ಥಳೀಯ ಶಾಸಕರು, ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ನೂತನ ಮಳಿಗೆಯನ್ನ ಉದ್ಘಾಟಿಸಲಿದ್ದಾರೆ ಎಂದು ಸುಪರ್ ಗೋಲ್ಡ್ ಸಂಸ್ಥೆಯ ಮುಖ್ಯಸ್ಥ ಟಿ.ಎಂ. ಬಾವಾ ಹೇಳಿದರು.
ತೊಕ್ಕೊಟ್ಟು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ನೂತನ "ಸೂಪರ್ ಗೋಲ್ಡ್ & ಡೈಮಂಡ್ಸ್ " ಮಳಿಗೆಯ ಉದ್ಘಾಟನಾ ಸಮಾರಂಭದಲ್ಲಿ ತೊಕ್ಕೊಟ್ಟಿನ ಸಂತ ಸೆಬಾಸ್ಟಿಯನ್ ಚರ್ಚ್ ಧರ್ಮಗುರು ಸಿಫ್ರಿಯನ್ ಡಿ ಸೋಜ, ಉಳ್ಳಾಲ ದರ್ಗಾ ಅಧ್ಯಕ್ಷ ಹನೀಫ್ ಹಾಜಿ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಎಸಿಪಿ ಧನ್ಯಾ ನಾಯಕ್ ಸಹಿತ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದರು.




ಒಂದು ಉದ್ಯಮದಲ್ಲಿ 45 ವರ್ಷಗಳ ಅನುಭವ ಹೊಂದಿರುವ ಯುನಿಟಿ ಹಾಲ್ ಮತ್ತು ಸೂಪರ್ ಗ್ರೂಪ್ ಇವುಗಳ ನೇತೃತ್ವದಲ್ಲಿ ಅಸ್ತಿತ್ವಕ್ಕೆ ಬಂದಿರುವ ಈ ಮಳಿಗೆಯಲ್ಲಿ ಮದುವೆ ಇನ್ನಿತರ ಸಮಾರಂಭಗಳಿಗೆ ಬಳಕೆಗೆ ಯೋಗ್ಯವಾದ ನವೀನ ಮಾದರಿಯ ಚಿನ್ನ ಮತ್ತು ವಜ್ರದ ಆಭರಣಗಳು ಲಭ್ಯವಿದೆ. 1985 ರಲ್ಲಿ ಐದು ಜನ ಪಾಲುದಾರಿಕೆಯಲ್ಲಿ ಸೂಪರ್ ಬಝಾರ್ ಆರಂಭಿಸಲಾಯಿತು. 15 ವರ್ಷಗಳ ಬಳಿಕ ಫರಂಗಿಪೇಟೆ, ಕೈಕಂಬದಲ್ಲಿ ಸೂಪರ್ ಬಝಾರ್ ಆರಂಭಿಸುವ ಮೂಲಕ ಶುರು ಮಾಡಿದ ಉದ್ಯಮ ಯಶಸ್ವಿ ಕಂಡು ಈಗ 25 ಸಂಸ್ಥೆ ರಚನೆ ಆಗಿದೆ ಎಂದು ಹೇಳಿದರು.
2016ರಲ್ಲಿ ತೊಕ್ಕೊಟ್ಟಿನಲ್ಲಿ ಚಿನ್ನಾಭರಣ ಮಾರಾಟದ ಮಳಿಗೆ ಆರಂಭಿಸಿ ತಯಾರಿ ವೆಚ್ಚ ಕಡಿಮೆ ಮಾಡಿ ಗ್ರಾಹಕರಿಗೆ ನೀಡುವ ಮೂಲಕ ಯಶಸ್ಸು ಕಂಡಿದ್ದೇವೆ. ಇದೀಗ ಕಲ್ಲಾಪು ಬಳಿ ನಿರ್ಮಾಣಗೊಂಡ ಸ್ವಂತ ಕಟ್ಟಡದಲ್ಲಿ ಚಿನ್ನದ ಮಳಿಗೆ ಆರಂಭಿಸಿದ್ದೇವೆ. ಈ ಕಟ್ಟಡದಲ್ಲಿ ಚಿನ್ನಾಭರಣ ವೀಕ್ಷಣೆಗೆ ಹಾಗೂ ವಾಹನ ನಿಲುಗಡೆಗೆ ವಿಶಾಲವಾದ ಸ್ಥಳಾವಕಾಶ ಇದೆ. ಚಿನ್ನ ಮತ್ತು ವಜ್ರದ ಆಭರಣಗಳ ವೀಕ್ಷಣೆ ಹಾಗೂ ಖರೀದಿಗೆ ಪ್ರತ್ಯೇಕ ವ್ಯವಸ್ಥೆ ಇರಲಿದೆ. ವಧುವಿನ ವಿವಾಹ ಕಾರ್ಯಕ್ಕೆ ಆಕರ್ಷಣೆಯ ವಿವಿಧ ವಿನ್ಯಾಸಗಳ ಆಭರಣಗಳು ಯೋಗ್ಯ ದರದಲ್ಲಿ ಲಭಿಸುವ ಜೊತೆಗೆ ಗ್ರಾಹಕರಿಗೆ ಪ್ರತಿ ಗಂಟೆಗೊಮ್ಮೆ ಲಕ್ಕಿ ಡ್ರಾ ನಡೆಯಲಿದೆ. ಇದರಲ್ಲಿ ವಿಜೇತರಾದವರಿಗೆ ಚಿನ್ನದ ನಾಣ್ಯ ಲಭಿಸಲಿದೆ. ಒಂದೇ ಬಾರಿ ಖರೀದಿಸಲು ಕಷ್ಟವಾಗುವ ಗ್ರಾಹಕರಿಗೆ ಸ್ಕೀಂನ ಮೂಲಕ ಮಾಸಿಕ ಕಂತು ಪಾವತಿ ಮಾಡಿ ಚಿನ್ನಾಭರಣ ಖರೀದಿಸಲು ಅವಕಾಶ ಇದೆ. ಈ ರೀತಿ ಖರೀದಿ ಮಾಡುವವರಿಗೂ ಸಂಸ್ಥೆ ವತಿಯಿಂದ ರಿಯಾಯಿತಿ ಕೊಡುಗೆಗಳು ಲಭಿಸಲಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾರ್ಕೆಟಿಂಗ್ ಮೆನೇಜರ್ ಕಲಂದರ್, ಮೊಹಮ್ಮದ್ ನದೀಂ, ಪಾಲುದಾರರಾದ ಸೀದಿಯಬ್ಬ, ತಯ್ಯುಬ್, ಫೈಝಲ್, ಹಸನಬ್ಬ, ಮೊಹಮ್ಮದ್ ಉಪಸ್ಥಿತರಿದ್ದರು.
Thokottu kalapu to have Super Gold and diamonds showroom in Mangalore, opening on April 30. All types of varieties of gold and diamonds will be available here.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm