ಬ್ರೇಕಿಂಗ್ ನ್ಯೂಸ್
29-04-24 09:41 pm Mangaluru Correspondent ಕರಾವಳಿ
ಉಳ್ಳಾಲ, ಎ.29: ಗುರುಪುರದಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ಆಟೋ ರಿಕ್ಷಾ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಸೋಮೇಶ್ವರ ಪುರಸಭೆ ಸದಸ್ಯೆಯ ಪತಿ ಮೃತಪಟ್ಟ ಘಟನೆ ನಡೆದಿದೆ.
ಕುಂಪಲ ಹನುಮಾನ್ ನಗರ ನಿವಾಸಿ ಅಶೋಕ್ ಶೆಟ್ಟಿ(53) ಮೃತ ವ್ಯಕ್ತಿ. ಸೋಮೇಶ್ವರ ಪುರಸಭೆಯ ಬಿಜೆಪಿ ಸದಸ್ಯೆ ಮಾಲತಿ ನಾಯ್ಕ್ ಅವರ ಪತಿಯಾಗಿರುವ ಅಶೋಕ್ ಅವರು ಹಿಂದೆ ಬಸ್ಸು ಚಾಲಕರಾಗಿದ್ದು ಇತ್ತೀಚೆಗೆ ಆಟೋ ರಿಕ್ಷಾ ಚಲಾಯಿಸುತ್ತಿದ್ದರು. ಭಾನುವಾರ ರಾತ್ರಿ ಅವರು ಹಿರಿಯ ಮಗಳನ್ನ ಕಾರ್ಕಳದ ಅಳಿಯನ ಮನೆಗೆ ಆಟೋ ರಿಕ್ಷಾದಲ್ಲೇ ಬಿಟ್ಟು ಹಿಂದಿರುಗುತ್ತಿದ್ದ ವೇಳೆ ಗುರುಪುರದಲ್ಲಿ ಅಪಘಾತ ಸಂಭವಿಸಿದೆ. ತಡರಾತ್ರಿ ಅಪಘಾತ ಸಂಭವಿಸಿದ್ದರಿಂದ ಯಾರೂ ಅಶೋಕ್ ಅವರನ್ನ ಗಮನಿಸಿಲ್ಲ. ಬಳಿಕ ರಕ್ತದ ಮಡುವಿನಲ್ಲಿದ್ದ ಅಶೋಕ್ ಅವರನ್ನ ಯಾರೋ ಗಮನಿಸಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದು ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ಅಶೋಕ್ ಅವರು ಮೂವರು ಪುತ್ರಿಯರು, ಪತ್ನಿಯನ್ನ ಅಗಲಿದ್ದಾರೆ.


ಕುಂಪಲದಲ್ಲಿ ಒಂದೇ ದಿನ ಎರಡು ಸಾವು;
ಕುಂಪಲ ಹನುಮಾನ್ ನಗರದ ಅಶೋಕ್ ಅವರು ಭಾನುವಾರ ರಾತ್ರಿ ಅಪಘಾತಕ್ಕೀಡಾಗಿ ಸೋಮವಾರ ಸಂಜೆ ವೇಳೆ ಮೃತ ಪಟ್ಟಿದ್ದರೆ, ಸೋಮವಾರ ಬೆಳಗ್ಗೆ ಅಶೋಕ್ ಅವರ ಎದುರು ಮನೆ ನಿವಾಸಿ ಯೋಗೀಶ್ ಅವರು ನೇಣು ಬಿಗಿದು ಆತ್ಮಹತ್ಯೆಗೈದಿದ್ದು ಒಂದೇ ದಿನದಲ್ಲಿ ಕುಂಪಲದ ಹನುಮಾನ್ ನಗರ ಪ್ರದೇಶದಲ್ಲಿ ಎರಡು ಸಾವು ಸಂಭವಿಸಿದೆ.
Mangalore In an auto accident in Gurupura, a Someshwara town municipal council member's husband was killed. The deceased has been identified as Ashok Shetty from Kumpala.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am