ಬ್ರೇಕಿಂಗ್ ನ್ಯೂಸ್
02-12-20 07:19 pm Mangaluru Correspondent ಕರಾವಳಿ
ಉಳ್ಳಾಲ, ಡಿ. 2: ಎರಡು ದಿನಗಳ ಹಿಂದೆ ಉಳ್ಳಾಲ ಬೈಲಿನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ನೀರಿನ ಟ್ಯಾಂಕರ್ ಅಡಿಗೆ ಬಿದ್ದು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಐದು ವರ್ಷದ ಮಗು ಕೃಷ್ಣ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ.

ಮೂಲತಃ ಉತ್ತರ ಪ್ರದೇಶ ಮೂಲದ, ಉಳ್ಳಾಲಬೈಲು ಬಾಕಿಮಾರ್ ನಲ್ಲಿ ಬಾಡಿಗೆ ನಿವಾಸದಲ್ಲಿರುವ ಶರವಣ್ ಕುಮಾರ್ ಮತ್ತು ಪಿಂಕಿ ದಂಪತಿಗಳ ಕೊನೆಯ ಪುತ್ರ ಕೃಷ್ಣ ಮೃತಪಟ್ಟ ದುರ್ದೈವಿ.
ಸೋಮವಾರ ಸಂಜೆ ತಾಯಿ ಮತ್ತು ಸಹೋದರ ಸಹೋದರಿಯರೊಂದಿಗೆ ರಸ್ತೆ ದಾಟುತ್ತಿದ್ದ ವೇಳೆ ಟ್ಯಾಂಕರ್ ಹರಿದ ಪರಿಣಾಮ ಮಗುವಿನ ಸೊಂಟದ ಕೆಳಗಿನ ಎರಡೂ ಕಾಲುಗಳು ತುಂಡಾಗಿ ಗಂಭೀರ ಸ್ಥಿತಿಯಲ್ಲಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಾಯಿ ಮಕ್ಕಳ ಕುಟುಂಬವು ಉಳ್ಳಾಲ ಬೀಚ್ ಗೆ ವಿಹಾರಕ್ಕೆಂದು ತೆರಳಿ ಹಿಂದಿರುಗುವಾಗ ದುರ್ಘಟನೆ ನಡೆದಿತ್ತು. ಬಾಲಕನಿಗೆ ಎರಡು ದಿವಸ ಚಿಕಿತ್ಸೆ ನೀಡಿದರೂ ಯಾವುದೇ ಫಲ ನೀಡದ ಹಿನ್ನೆಲೆ ಇಂದು ಸಂಜೆ ಕೃಷ್ಣ ಮೃತಪಟ್ಟಿದ್ದಾನೆ.



ಬಾಡಿಗೆ ಮನೆ ಬದಲಿಸಲು ತಯಾರಾಗಿದ್ದರು;
ಉತ್ತರ ಪ್ರದೇಶ ಮೂಲದ ಶರವಣ್, ಪಿಂಕಿ ದಂಪತಿಗಳಿಗೆ 5 ಮಕ್ಕಳು. ಕೊನೆಯ ಕಾರ್ತಿಕ್ ಮತ್ತು ಕೃಷ್ಣ ಎಂಬ ಮಕ್ಕಳು ಅವಳಿ ಜವಳಿಯಾಗಿದ್ದರು. ತಂದೆ ಮಂಗಳೂರಿನಲ್ಲಿ ಪಾನ್ ಸ್ಟಾಲ್ ಹೊಂದಿದ್ದು ತೀರಾ ಬಡ ಕುಟುಂಬ. ಕುಟುಂಬ ಕಳೆದ 15 ವರ್ಷಗಳಿಂದ ಮಂಗಳೂರಿನಲ್ಲೇ ನೆಲೆಸಿದ್ದು ಈ ವಾರ ಉಳ್ಳಾಲದ ಬೈಲ್ ಬಾಕಿಮಾರ್ ಮನೆಯಿಂದ ಬೇರೆಡೆ ಬಿಡಾರ ಸ್ಥಳಾಂತರಕ್ಕೆ ಸಿದ್ಧತೆ ನಡೆಸಿದ್ದರೆನ್ನಲಾಗಿದೆ.
ಮೃತದೇಹವನ್ನು ದಕ್ಷಿಣ ಸಂಚಾರಿ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
Also Read: ಉಳ್ಳಾಲ : ರಸ್ತೆ ದಾಟುತ್ತಿದ್ದ ಮಗುವಿನ ಮೇಲೆ ಹರಿದ ಟ್ಯಾಂಕರ್ !!
Young little boy who was hit by a water tanker in Ullal and who was in serious condition has breathed his last in the private hospital at Ullal.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am