ಬ್ರೇಕಿಂಗ್ ನ್ಯೂಸ್
02-12-20 07:19 pm Mangaluru Correspondent ಕರಾವಳಿ
ಉಳ್ಳಾಲ, ಡಿ. 2: ಎರಡು ದಿನಗಳ ಹಿಂದೆ ಉಳ್ಳಾಲ ಬೈಲಿನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ನೀರಿನ ಟ್ಯಾಂಕರ್ ಅಡಿಗೆ ಬಿದ್ದು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಐದು ವರ್ಷದ ಮಗು ಕೃಷ್ಣ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ.

ಮೂಲತಃ ಉತ್ತರ ಪ್ರದೇಶ ಮೂಲದ, ಉಳ್ಳಾಲಬೈಲು ಬಾಕಿಮಾರ್ ನಲ್ಲಿ ಬಾಡಿಗೆ ನಿವಾಸದಲ್ಲಿರುವ ಶರವಣ್ ಕುಮಾರ್ ಮತ್ತು ಪಿಂಕಿ ದಂಪತಿಗಳ ಕೊನೆಯ ಪುತ್ರ ಕೃಷ್ಣ ಮೃತಪಟ್ಟ ದುರ್ದೈವಿ.
ಸೋಮವಾರ ಸಂಜೆ ತಾಯಿ ಮತ್ತು ಸಹೋದರ ಸಹೋದರಿಯರೊಂದಿಗೆ ರಸ್ತೆ ದಾಟುತ್ತಿದ್ದ ವೇಳೆ ಟ್ಯಾಂಕರ್ ಹರಿದ ಪರಿಣಾಮ ಮಗುವಿನ ಸೊಂಟದ ಕೆಳಗಿನ ಎರಡೂ ಕಾಲುಗಳು ತುಂಡಾಗಿ ಗಂಭೀರ ಸ್ಥಿತಿಯಲ್ಲಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಾಯಿ ಮಕ್ಕಳ ಕುಟುಂಬವು ಉಳ್ಳಾಲ ಬೀಚ್ ಗೆ ವಿಹಾರಕ್ಕೆಂದು ತೆರಳಿ ಹಿಂದಿರುಗುವಾಗ ದುರ್ಘಟನೆ ನಡೆದಿತ್ತು. ಬಾಲಕನಿಗೆ ಎರಡು ದಿವಸ ಚಿಕಿತ್ಸೆ ನೀಡಿದರೂ ಯಾವುದೇ ಫಲ ನೀಡದ ಹಿನ್ನೆಲೆ ಇಂದು ಸಂಜೆ ಕೃಷ್ಣ ಮೃತಪಟ್ಟಿದ್ದಾನೆ.



ಬಾಡಿಗೆ ಮನೆ ಬದಲಿಸಲು ತಯಾರಾಗಿದ್ದರು;
ಉತ್ತರ ಪ್ರದೇಶ ಮೂಲದ ಶರವಣ್, ಪಿಂಕಿ ದಂಪತಿಗಳಿಗೆ 5 ಮಕ್ಕಳು. ಕೊನೆಯ ಕಾರ್ತಿಕ್ ಮತ್ತು ಕೃಷ್ಣ ಎಂಬ ಮಕ್ಕಳು ಅವಳಿ ಜವಳಿಯಾಗಿದ್ದರು. ತಂದೆ ಮಂಗಳೂರಿನಲ್ಲಿ ಪಾನ್ ಸ್ಟಾಲ್ ಹೊಂದಿದ್ದು ತೀರಾ ಬಡ ಕುಟುಂಬ. ಕುಟುಂಬ ಕಳೆದ 15 ವರ್ಷಗಳಿಂದ ಮಂಗಳೂರಿನಲ್ಲೇ ನೆಲೆಸಿದ್ದು ಈ ವಾರ ಉಳ್ಳಾಲದ ಬೈಲ್ ಬಾಕಿಮಾರ್ ಮನೆಯಿಂದ ಬೇರೆಡೆ ಬಿಡಾರ ಸ್ಥಳಾಂತರಕ್ಕೆ ಸಿದ್ಧತೆ ನಡೆಸಿದ್ದರೆನ್ನಲಾಗಿದೆ.
ಮೃತದೇಹವನ್ನು ದಕ್ಷಿಣ ಸಂಚಾರಿ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
Also Read: ಉಳ್ಳಾಲ : ರಸ್ತೆ ದಾಟುತ್ತಿದ್ದ ಮಗುವಿನ ಮೇಲೆ ಹರಿದ ಟ್ಯಾಂಕರ್ !!
Young little boy who was hit by a water tanker in Ullal and who was in serious condition has breathed his last in the private hospital at Ullal.
24-03-26 02:55 pm
HK News Staffer
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
24-03-26 04:43 pm
HK News Staffer
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
24-03-26 09:29 pm
HK News Staffer
ಟ್ಯಾಕ್ಸಿ ಕಾರುಗಳಿಗೆ ಪ್ಯಾನಿಕ್ ಬಟನ್ ಹಣ ಮಾಡುವ ದಂಧ...
24-03-26 08:29 pm
ಲಕ್ಷ್ಮೀ ಲಾಕೆಟ್ ಸರ ಎಂದು ನಂಬಿಸಿ ಮಹಿಳೆಯಿಂದ ಅಸಲಿ...
24-03-26 05:34 pm
ಸಜಿಪನಡು ತಲೆಮೊಗರು ಮಸೀದಿಯಲ್ಲಿ ಗಲಾಟೆ ; ಆಡಳಿತ ವಿಚ...
24-03-26 11:55 am
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm