ಬ್ರೇಕಿಂಗ್ ನ್ಯೂಸ್
02-12-20 07:19 pm Mangaluru Correspondent ಕರಾವಳಿ
ಉಳ್ಳಾಲ, ಡಿ. 2: ಎರಡು ದಿನಗಳ ಹಿಂದೆ ಉಳ್ಳಾಲ ಬೈಲಿನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ನೀರಿನ ಟ್ಯಾಂಕರ್ ಅಡಿಗೆ ಬಿದ್ದು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಐದು ವರ್ಷದ ಮಗು ಕೃಷ್ಣ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ.

ಮೂಲತಃ ಉತ್ತರ ಪ್ರದೇಶ ಮೂಲದ, ಉಳ್ಳಾಲಬೈಲು ಬಾಕಿಮಾರ್ ನಲ್ಲಿ ಬಾಡಿಗೆ ನಿವಾಸದಲ್ಲಿರುವ ಶರವಣ್ ಕುಮಾರ್ ಮತ್ತು ಪಿಂಕಿ ದಂಪತಿಗಳ ಕೊನೆಯ ಪುತ್ರ ಕೃಷ್ಣ ಮೃತಪಟ್ಟ ದುರ್ದೈವಿ.
ಸೋಮವಾರ ಸಂಜೆ ತಾಯಿ ಮತ್ತು ಸಹೋದರ ಸಹೋದರಿಯರೊಂದಿಗೆ ರಸ್ತೆ ದಾಟುತ್ತಿದ್ದ ವೇಳೆ ಟ್ಯಾಂಕರ್ ಹರಿದ ಪರಿಣಾಮ ಮಗುವಿನ ಸೊಂಟದ ಕೆಳಗಿನ ಎರಡೂ ಕಾಲುಗಳು ತುಂಡಾಗಿ ಗಂಭೀರ ಸ್ಥಿತಿಯಲ್ಲಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಾಯಿ ಮಕ್ಕಳ ಕುಟುಂಬವು ಉಳ್ಳಾಲ ಬೀಚ್ ಗೆ ವಿಹಾರಕ್ಕೆಂದು ತೆರಳಿ ಹಿಂದಿರುಗುವಾಗ ದುರ್ಘಟನೆ ನಡೆದಿತ್ತು. ಬಾಲಕನಿಗೆ ಎರಡು ದಿವಸ ಚಿಕಿತ್ಸೆ ನೀಡಿದರೂ ಯಾವುದೇ ಫಲ ನೀಡದ ಹಿನ್ನೆಲೆ ಇಂದು ಸಂಜೆ ಕೃಷ್ಣ ಮೃತಪಟ್ಟಿದ್ದಾನೆ.



ಬಾಡಿಗೆ ಮನೆ ಬದಲಿಸಲು ತಯಾರಾಗಿದ್ದರು;
ಉತ್ತರ ಪ್ರದೇಶ ಮೂಲದ ಶರವಣ್, ಪಿಂಕಿ ದಂಪತಿಗಳಿಗೆ 5 ಮಕ್ಕಳು. ಕೊನೆಯ ಕಾರ್ತಿಕ್ ಮತ್ತು ಕೃಷ್ಣ ಎಂಬ ಮಕ್ಕಳು ಅವಳಿ ಜವಳಿಯಾಗಿದ್ದರು. ತಂದೆ ಮಂಗಳೂರಿನಲ್ಲಿ ಪಾನ್ ಸ್ಟಾಲ್ ಹೊಂದಿದ್ದು ತೀರಾ ಬಡ ಕುಟುಂಬ. ಕುಟುಂಬ ಕಳೆದ 15 ವರ್ಷಗಳಿಂದ ಮಂಗಳೂರಿನಲ್ಲೇ ನೆಲೆಸಿದ್ದು ಈ ವಾರ ಉಳ್ಳಾಲದ ಬೈಲ್ ಬಾಕಿಮಾರ್ ಮನೆಯಿಂದ ಬೇರೆಡೆ ಬಿಡಾರ ಸ್ಥಳಾಂತರಕ್ಕೆ ಸಿದ್ಧತೆ ನಡೆಸಿದ್ದರೆನ್ನಲಾಗಿದೆ.
ಮೃತದೇಹವನ್ನು ದಕ್ಷಿಣ ಸಂಚಾರಿ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
Also Read: ಉಳ್ಳಾಲ : ರಸ್ತೆ ದಾಟುತ್ತಿದ್ದ ಮಗುವಿನ ಮೇಲೆ ಹರಿದ ಟ್ಯಾಂಕರ್ !!
Young little boy who was hit by a water tanker in Ullal and who was in serious condition has breathed his last in the private hospital at Ullal.
08-05-26 08:05 pm
HK News Staffer
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
ಇರು ಅಂದ್ರೆ ಇರ್ತೀನಿ, ಹೈಕಮಾಂಡ್ ಮಾತನ್ನಷ್ಟೇ ಕೇಳ್ತ...
06-05-26 07:41 pm
ಗದಗದತ್ತ ಹೊರಟಿದ್ದ ಪಲ್ಲಕ್ಕಿ ಬಸ್ಸಿಗೆ ಬೆಂಕಿ ; ನಡು...
05-05-26 03:52 pm
09-05-26 12:06 pm
HK News Staffer
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
ಒಬ್ಬನಿಗಾಗಿ ಒಂದೂವರೆ ಗಂಟೆ ಕಾದು ನಿಂತ ವಿಮಾನ; ಇತರ...
08-05-26 12:06 pm
09-05-26 02:15 pm
HK News Staffer
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
ಚೆನ್ನಾಗಿದ್ದ ಕಾಂಕ್ರೀಟ್ ರಸ್ತೆಗೆ ಡಾಂಬರ್ ಶಾಕ್ ! ಕ...
07-05-26 07:40 pm
09-05-26 09:54 am
HK News Staffer
ಕಡಬದ ಮನೆಯೊಂದರಲ್ಲಿ ಬೆಂಗಳೂರಿನ 23 ಜನ ಪ್ರವಾಸಿಗರು...
08-05-26 07:02 pm
ಬಸ್ ಚಲಿಸುತ್ತಿರುವಾಗಲೇ ಡ್ರೈವರ್ ಗೆ ಹೃದಯಾಘಾತ; ಪ್...
08-05-26 06:20 pm
ಪೋಕ್ಸೋ ಕೇಸ್ ಭಯಕ್ಕೆ ಠಾಣೆಯಲ್ಲೇ ಕೀ ನುಂಗಿದ ಆರೋಪಿ...
08-05-26 06:12 pm
ಬೆಂಗಳೂರಿನ ಆಸ್ಪತ್ರೆಯ ಒಳಗೇ ಆಭರಣ ದರೋಡೆ ! ರೋಗಿಯ 9...
07-05-26 08:00 pm