ಬ್ರೇಕಿಂಗ್ ನ್ಯೂಸ್
02-12-20 07:19 pm Mangaluru Correspondent ಕರಾವಳಿ
ಉಳ್ಳಾಲ, ಡಿ. 2: ಎರಡು ದಿನಗಳ ಹಿಂದೆ ಉಳ್ಳಾಲ ಬೈಲಿನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ನೀರಿನ ಟ್ಯಾಂಕರ್ ಅಡಿಗೆ ಬಿದ್ದು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಐದು ವರ್ಷದ ಮಗು ಕೃಷ್ಣ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ.
ಮೂಲತಃ ಉತ್ತರ ಪ್ರದೇಶ ಮೂಲದ, ಉಳ್ಳಾಲಬೈಲು ಬಾಕಿಮಾರ್ ನಲ್ಲಿ ಬಾಡಿಗೆ ನಿವಾಸದಲ್ಲಿರುವ ಶರವಣ್ ಕುಮಾರ್ ಮತ್ತು ಪಿಂಕಿ ದಂಪತಿಗಳ ಕೊನೆಯ ಪುತ್ರ ಕೃಷ್ಣ ಮೃತಪಟ್ಟ ದುರ್ದೈವಿ.
ಸೋಮವಾರ ಸಂಜೆ ತಾಯಿ ಮತ್ತು ಸಹೋದರ ಸಹೋದರಿಯರೊಂದಿಗೆ ರಸ್ತೆ ದಾಟುತ್ತಿದ್ದ ವೇಳೆ ಟ್ಯಾಂಕರ್ ಹರಿದ ಪರಿಣಾಮ ಮಗುವಿನ ಸೊಂಟದ ಕೆಳಗಿನ ಎರಡೂ ಕಾಲುಗಳು ತುಂಡಾಗಿ ಗಂಭೀರ ಸ್ಥಿತಿಯಲ್ಲಿ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಾಯಿ ಮಕ್ಕಳ ಕುಟುಂಬವು ಉಳ್ಳಾಲ ಬೀಚ್ ಗೆ ವಿಹಾರಕ್ಕೆಂದು ತೆರಳಿ ಹಿಂದಿರುಗುವಾಗ ದುರ್ಘಟನೆ ನಡೆದಿತ್ತು. ಬಾಲಕನಿಗೆ ಎರಡು ದಿವಸ ಚಿಕಿತ್ಸೆ ನೀಡಿದರೂ ಯಾವುದೇ ಫಲ ನೀಡದ ಹಿನ್ನೆಲೆ ಇಂದು ಸಂಜೆ ಕೃಷ್ಣ ಮೃತಪಟ್ಟಿದ್ದಾನೆ.
ಬಾಡಿಗೆ ಮನೆ ಬದಲಿಸಲು ತಯಾರಾಗಿದ್ದರು;
ಉತ್ತರ ಪ್ರದೇಶ ಮೂಲದ ಶರವಣ್, ಪಿಂಕಿ ದಂಪತಿಗಳಿಗೆ 5 ಮಕ್ಕಳು. ಕೊನೆಯ ಕಾರ್ತಿಕ್ ಮತ್ತು ಕೃಷ್ಣ ಎಂಬ ಮಕ್ಕಳು ಅವಳಿ ಜವಳಿಯಾಗಿದ್ದರು. ತಂದೆ ಮಂಗಳೂರಿನಲ್ಲಿ ಪಾನ್ ಸ್ಟಾಲ್ ಹೊಂದಿದ್ದು ತೀರಾ ಬಡ ಕುಟುಂಬ. ಕುಟುಂಬ ಕಳೆದ 15 ವರ್ಷಗಳಿಂದ ಮಂಗಳೂರಿನಲ್ಲೇ ನೆಲೆಸಿದ್ದು ಈ ವಾರ ಉಳ್ಳಾಲದ ಬೈಲ್ ಬಾಕಿಮಾರ್ ಮನೆಯಿಂದ ಬೇರೆಡೆ ಬಿಡಾರ ಸ್ಥಳಾಂತರಕ್ಕೆ ಸಿದ್ಧತೆ ನಡೆಸಿದ್ದರೆನ್ನಲಾಗಿದೆ.
ಮೃತದೇಹವನ್ನು ದಕ್ಷಿಣ ಸಂಚಾರಿ ಪೊಲೀಸರು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
Also Read: ಉಳ್ಳಾಲ : ರಸ್ತೆ ದಾಟುತ್ತಿದ್ದ ಮಗುವಿನ ಮೇಲೆ ಹರಿದ ಟ್ಯಾಂಕರ್ !!
Young little boy who was hit by a water tanker in Ullal and who was in serious condition has breathed his last in the private hospital at Ullal.
18-03-25 11:02 pm
Bangalore Correspondent
ಬಿಡದಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ...
18-03-25 10:34 pm
Bangalore JCB Accident, Two Killed; ರಸ್ತೆ ಕಾಮ...
18-03-25 02:30 pm
Tumkur Wedding News, Water: ನೀರಿನ ವಿಚಾರದಲ್ಲಿ...
18-03-25 01:08 pm
ಎಸ್.ಟಿ. ಸೋಮಶೇಖರ್, ಶಿವರಾಮ ಹೆಬ್ಬಾರ್ ಸದ್ಯದಲ್ಲೇ...
17-03-25 11:54 am
17-03-25 10:57 pm
HK News Desk
Case against Orry at Vaishno Devi: ವೈಷ್ಣೋದೇವಿ...
17-03-25 09:43 pm
Kerala Christan girls missing, PC George: ಕೊಟ...
13-03-25 03:49 pm
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
18-03-25 10:09 pm
Mangalore Correspondent
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
ಮಂಗಳೂರು- ಮುಂಬೈ ವಂದೇ ಭಾರತ್ ರೈಲು ಸನ್ನಿಹಿತ ; ಉಡು...
17-03-25 11:02 pm
Mangalore Accident, Kallapu: ನಿಯಂತ್ರಣ ತಪ್ಪಿ ಆ...
17-03-25 08:01 pm
18-03-25 06:31 pm
Mangalore Correspondent
Ccb Police Mangalore, Kali Yogesh, Underworld...
17-03-25 07:51 pm
Bangalore crime, Fraud, Bank Manager: ಮನೆ ಮಾರ...
16-03-25 10:39 pm
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am