ಬ್ರೇಕಿಂಗ್ ನ್ಯೂಸ್
01-05-24 08:55 pm Mangalore Correspondent ಕರಾವಳಿ
ಉಳ್ಳಾಲ, ಮೇ 1: ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿದ್ದ ಐದು ತಿಂಗಳ ಹಸುಗೂಸಿನ ಶಸ್ತ್ರಚಿಕಿತ್ಸೆಗೆ 50 ಲಕ್ಷದ ಅವಶ್ಯಕತೆ ಇದೆ ಎಂದು ಎರಡು ದಿನಗಳ ಹಿಂದಷ್ಟೆ ಸಾಮಾಜಿಕ ಜಾಲತಾಣಗಳಲ್ಲಿ ಮಗುವಿನ ಹೆತ್ತವರು ಮಾಡಿದ್ದ ಮನವಿಗೆ ದೇಶ, ವಿದೇಶದಿಂದ ಅಭೂತಪೂರ್ವ ಸ್ಪಂದನೆ ನೀಡಿದ್ದು, ಕೇವಲ 48 ಗಂಟೆಗಳಲ್ಲಿ 60.62 ಲಕ್ಷ ರೂ. ಸಂಗ್ರಹವಾಗಿದೆ. ಚಿಕಿತ್ಸೆಗೆ ಬೇಕಾದ ಹಣ ಸಂಗ್ರಹ ಆಗಿರುವುದರಿಂದ ಮುಂದೆ ಬ್ಯಾಂಕ್ ಖಾತೆಗೆ ಯಾರೂ ಹಣ ವರ್ಗಾಯಿಸುವುದು ಬೇಡ ಎಂದು ಮಗುವಿನ ಹೆತ್ತವರಾದ ಕೊಣಾಜೆ ನಿವಾಸಿ ಸಂತೋಷ್ ಮೊಂತೇರೋ ಮತ್ತು ಪ್ರಿಯಾ ಅವರು ತಿಳಿಸಿದ್ದಾರೆ.
ಉಳ್ಳಾಲ ಪ್ರೆಸ್ಕ್ಲಬ್ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಾಮಾಜಿಕ ಕಾರ್ಯಕರ್ತ ಫಯಾಝ್ ಮಾಡೂರು ಈ ಬಗ್ಗೆ ಮಾಹಿತಿ ನೀಡಿದರು. ಐದು ತಿಂಗಳ ಮಗು ಪ್ರಿಯೋನ್ ಸ್ಯಾಮ್ ಚಿಕಿತ್ಸೆಗೆ ಸಂಬಂಧಿಸಿದಂತೆ ಆತನ ಹೆತ್ತವರು ತನ್ನ ಬಳಿಗೆ ಬಂದು ಸಹಕರಿಸುವಂತೆ ಹೇಳಿದ್ದರು. ಅವರ ಒಪ್ಪಿಗೆಯ ಮೇರೆಗೆ ಮಗುವಿನ ತಾಯಿ ಪ್ರಿಯಾ ಅವರು ಮಗುವಿನ ಸ್ಥಿತಿಯ ಕುರಿತು ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಯಿಂದ ವಿಡಿಯೋ ರೆಕಾರ್ಡ್ ಮಾಡಿ ನಮ್ಮ ಫೇಸ್ಬುಕ್ ಪೇಜ್ ಸೇರಿದಂತೆ ವಾಟ್ಸಪ್ ಗ್ರೂಪ್ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿದ್ದರು. ಪೋಸ್ಟ್ ಹಂಚಿದ 48 ಗಂಟೆಗಳಲ್ಲೇ ದೇಶ, ವಿದೇಶದಿಂದ ಉತ್ತಮ ಸ್ಪಂದನೆ ಸಿಕ್ಕಿದ್ದು ಒಂದು ರೂ.ನಿಂದ ಒಂದು ಲಕ್ಷ ರೂಪಾಯಿ ವರೆಗಿನ ದಾನಿಗಳಿಂದ ಸಹಾಯಹಸ್ತ ಮಗುವಿನ ತಾಯಿ ಮತ್ತು ತಂದೆಯ ಬ್ಯಾಂಕ್ ಖಾತೆಗೆ ಹರಿದು ಬಂದಿದ್ದು ಒಟ್ಟು 60.62 ಲಕ್ಷ ರೂ. ಸಂಗ್ರಹಣೆಯಾಗಿದೆ.
ಹಣ ಸಂಗ್ರಹಕ್ಕೆ ಕ್ಯಾಥೋಲಿಕ್ ಸಂಘಟನೆಗಳು ಸೇರಿದಂತೆ ಎಲ್ಲಾ ಜಾತಿ ಧರ್ಮದ ಸಂಘ ಸಂಸ್ಥೆಗಳು, ದಾನಿಗಳು ಸಹಾಯಹಸ್ತ ನೀಡಿದ್ದು ಕಡಿಮೆ ಅವಧಿಯಲ್ಲಿ ಇಷ್ಟೊಂದು ದೊಡ್ಡ ಮೊತ್ತ ಸಂಗ್ರಹವಾಗಿರುವುದು ವಿಶೇಷ ಎಂದು ಫಯಾಝ್ ತಿಳಿಸಿದರು.
ನಾರಾಯಣ ಹೃದಯಾಲಯದಲ್ಲಿ ಮಗುವಿಗೆ ಒಂದು ಹಂತದ ಶಸ್ತ್ರಚಿಕಿತ್ಸೆ ನಡೆದಿದ್ದು, ಮಗು ಆರೋಗ್ಯವಾಗಿದೆ. ಮಗುವಿನ ಚಿಕಿತ್ಸೆಗೆ ಬೇಕಾದ ಹಣ ಜಮಾವಣೆಗೊಂಡ ಕಾರಣ ದಾನಿಗಳು ಇನ್ನು ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸುವುದು ಬೇಡ. ಮಗುವಿನ ಚಿಕಿತ್ಸೆಗೆ ಸ್ಪಂದಿಸಿದ ಎಲ್ಲಾ ದಾನಿಗಳಿಗೂ ಮಗುವಿನ ಹೆತ್ತವರು ತುಂಬು ಹೃದಯದಿಂದ ಕೃತಜ್ಞತೆ ಅರ್ಪಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಗುವಿನ ಹೆತ್ತವರಾದ ಸಂತೋಷ್ ಮೊಂತೇರೋ, ಪ್ರಿಯಾ, ನೌಫಾಲ್ ದೇರಳಕಟ್ಟೆ, ಮೆರ್ಸಿ ಫ್ರೆಂಡ್ಸ್ ಅಸೈಗೋಳಿ ಇದರ ಗೌರವಾಧ್ಯಕ್ಷ ಐವನ್ ಮೊಂತೇರೋ ಉಪಸ್ಥಿತರಿದ್ದರು.
Mangalore Konje Baby seeking medical help goes viral on social media, 60 lakhs donations received to parents Santosh monterio and Priya after a video in which mother is crying for help to save her 5 month old baby for treatment which was estimated 50 lakhs but after her video went viral parents received 60 lakhs.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm