ಬ್ರೇಕಿಂಗ್ ನ್ಯೂಸ್
04-05-24 11:20 am Bangalore Correspondent ಕರಾವಳಿ
ಸುಳ್ಯ, ಮೇ.4: ಹತ್ತು ದಿನಗಳ ಹಿಂದಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಮನೆಯಂಗಳದಲ್ಲೇ ಸಿಡಿಲು ಬಡಿದು ಸಾವನ್ನಪ್ಪಿದ ಘಟನೆ ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ನಡೆದಿದೆ.
ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮ ಸುಂದರ್ (34) ಮೃತ ದುರ್ದೈವಿ. ಶುಕ್ರವಾರ ಸಂಜೆ ಸುಳ್ಯ ಮತ್ತು ಕಡಬ ತಾಲೂಕಿನ ವಿವಿಧ ಕಡೆ ಮಳೆಯಾಗಿತ್ತು. ಮಳೆ ಆರಂಭಕ್ಕೂ ಮೊದಲು ಸಿಡಿಲು, ಮಿಂಚು ಸಹಿತ ಗಾಳಿ ಬೀಸಿತ್ತು. ಮಳೆಗೆ ಅಡಿಕೆ ಒದ್ದೆಯಾಗುತ್ತದೆ ಎಂದು ಸೋಮಸುಂದರ್ ಮನೆಯಂಗಳದಲ್ಲಿ ಹಾಕಿದ್ದ ಅಡಿಕೆಯನ್ನು ರಾಶಿ ಮಾಡುತ್ತಿದ್ದರು. ಇದೇ ಇವರಿಗೆ ಸಿಡಿಲು ಬಡಿದಿದ್ದು ತೀವ್ರ ಶಾಕ್ ಆಗಿದ್ದರು.
ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಕೂಡಲೇ ಕಡಬ ಸಮುದಾಯ ಆಸ್ಪತ್ರೆಗೆ ಕರೆದೊಯ್ದರೂ ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಇವರು ಸುಬ್ರಹ್ಮಣ್ಯದಲ್ಲಿ ಕಾರು ವಾಷಿಂಗ್ ಉದ್ಯಮ ನಡೆಸಿಕೊಂಡಿದ್ದರು. ಹತ್ತು ದಿನಗಳ ಹಿಂದೆ ಮದುವೆಯಾಗಿದ್ದು ಹೊಸ ಬಾಳಿನ ಹೊಂಗನಸಿನಲ್ಲಿದ್ದರು. ಅಷ್ಟರಲ್ಲೇ ವಿಧಿಯ ಕರಾಳ ಆಟಕ್ಕೆ ತುತ್ತಾಗಿದ್ದಾರೆ. ಮೃತರು ತಾಯಿ, ತಂಗಿ ಮತ್ತು ಪತ್ನಿಯನ್ನು ಅಗಲಿದ್ದಾರೆ.
A youth, who had entered wedlock 10 days ago, died after being struck by lightning in the courtyard of his house at Subramanya in Kadaba taluk.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm