ಬ್ರೇಕಿಂಗ್ ನ್ಯೂಸ್
04-05-24 09:50 pm Mangalore Correspondent ಕರಾವಳಿ
ಮಂಗಳೂರು, ಮೇ.4: ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಶನಿವಾರ ಈ ಬೇಸಿಗೆಯ ಅತಿ ಉಷ್ಣತೆ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಮತ್ತು ಕಡಬದಲ್ಲಿ ಅತಿ ಹೆಚ್ಚು ಉಷ್ಣತೆ ದಾಖಲಾದ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ 36.6 ಡಿಗ್ರಿ ಸೆಲ್ಸಿಯಸ್, ಮಂಗಳೂರಿನಲ್ಲಿ 36.4 ಡಿಗ್ರಿ, ಕಡಬದಲ್ಲಿ 37.9 ಡಿಗ್ರಿ, ಉಪ್ಪಿನಂಗಡಿಯಲ್ಲಿ 37.5 ಡಿಗ್ರಿ, ಬೆಳ್ತಂಗಡಿಯಲ್ಲಿ 36.2 ಡಿಗ್ರಿ ಸೆಲ್ಸಿಯಸ್ ಉಷ್ಣತೆ ದಾಖಲಾಗಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ 38.9 ಡಿಗ್ರಿ ಸೆಂಟಿಗ್ರೇಡ್ ತಾಪಮಾನ ಕಂಡುಬಂದಿದೆ. ಕಾರ್ಕಳದಲ್ಲಿ 36.6 ಡಿಗ್ರಿ, ಬ್ರಹ್ಮಾವರ 33.2 ಡಿಗ್ರಿ, ಕೋಟ 36.3, ಉಡುಪಿ 35.2, ಕುಂದಾಪುರ 34.9, ಬೈಂದೂರು 33.9, ಕಾಪು ಭಾಗದಲ್ಲಿ 36.5 ಡಿಗ್ರಿ ತಾಪಮಾನ ದಾಖಲಾಗಿದೆ. ಇದೇ ವೇಳೆ, ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮುರಕೋಡು ಎಂಬಲ್ಲಿ 40 ಡಿಗ್ರಿ ಸೆಲ್ಸಿಯಸ್ ತಾಪಮಾನ ಕಂಡುಬಂದಿದ್ದು, ಕರಾವಳಿಯಲ್ಲಿ ಶನಿವಾರ ದಾಖಲಾದ ಅತಿ ಹೆಚ್ಚು ಉಷ್ಣತೆಯಾಗಿದೆ.
ಅತಿ ಹೆಚ್ಚು ತಾಪಮಾನದ ಕಾರಣ ಮಹಾರಾಷ್ಟ್ರದ ಕರಾವಳಿ ಭಾಗದಲ್ಲಿ ಸೈಕ್ಲೋನ್ ಮಾದರಿಯ ವಾತಾವರಣ ಕಂಡುಬಂದಿದ್ದು, ಇದರ ಪರಿಣಾಮವಾಗಿ ಕರ್ನಾಟಕ ರಾಜ್ಯದ ಹಲವೆಡೆ ಮೇ 6ರಿಂದ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 6 ಮತ್ತು 7ರಂದು ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಕೊಡಗು, ಚಿಕ್ಕಬಳ್ಳಾಪುರ ಭಾಗದಲ್ಲಿ ಸಿಡಿಲು ಮಿಂಚು ಸಹಿತ ಮಳೆಯಾಗಲಿದೆ.
Coastal Dakshina Kannada and Udupi districts recorded the highest temperature of this summer on Saturday. Meteorological department has informed about highest temperature recorded in Uppinangadi and Kadaba of Puttur taluk of Dakshina Kannada district.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am