ಬ್ರೇಕಿಂಗ್ ನ್ಯೂಸ್
05-05-24 08:53 pm Mangalore Correspondent ಕರಾವಳಿ
ಉಳ್ಳಾಲ, ಮೇ.5: ಕೋಟೆಕಾರು ಗ್ರಾಮದ ಕಾರಣಿಕದ ಕೊಂಡಾಣ ಕ್ಷೇತ್ರಕ್ಕೆ ಸಂಬಂಧಿಸಿದ ಕೋಟೆಕಾರಿನ ತಾರಿಪಡ್ಪು ವೈದ್ಯನಾಥ ಕ್ಷೇತ್ರದ ವಲಸರಿ ಜಾತ್ರೆಯಲ್ಲಿ ಕೊಂಡಾಣ ಕ್ಷೇತ್ರದ ಭಂಡಾರಮನೆ ಪುಡಿಗೈದ ಪ್ರಕರಣದ ಐವರು ಆರೋಪಿಗಳು ಭಾಗವಹಿಸಬಾರದೆಂದು ಜಿಲ್ಲಾ ಧರ್ಮದಾಯ ಧತ್ತಿ ಇಲಾಖೆಯ ಸಹಾಯ ಆಯುಕ್ತರು ನಿರ್ಬಂಧ ಹೇರಿದ್ದು, ಅಹಿತಕರ ಘಟನೆ ನಡೆಯದಂತೆ ಜಾತ್ರೆಗೆ ಬಿಗು ಪೊಲೀಸ್ ಬಂದೋಬಸ್ತು ಕಲ್ಪಿಸಲಾಗಿದೆ.
ಕೊಂಡಾಣ ಪಿಲಿಚಾಮುಂಡಿ, ಬಂಟ, ವೈದ್ಯನಾಥ, ಮುಂಡತ್ತಾಯ ಕ್ಷೇತ್ರದ ಗುರಿಕಾರರೆನ್ನುವ, ಕ್ಷೇತ್ರದ ನೂತನ ಭಂಡಾರ ಮನೆ ಧ್ವಂಸ ಪ್ರಕರಣದ ಪ್ರಮುಖ ಆರೋಪಿ ಮುತ್ತಣ್ಣ ಶೆಟ್ಟಿ ಮತ್ತು ಸಹವರ್ತಿಗಳಾದ ಧೀರಜ್, ಶಿವರಾಜ್ ಶೆಟ್ಟಿ, ನವೀನ್ ಕುಮಾರ್, ಶಿವಪ್ರಸಾದ್ ಆಚಾರ್ಯ ಎಂಬ ಐವರು ತಾರಿಪಡ್ಪುವಿನ ವೈದ್ಯನಾಥ ಕ್ಷೇತ್ರದ ವಲಸರಿ ಜಾತ್ರೆಯಲ್ಲಿ ಭಾಗವಹಿಸದಂತೆ ಜಿಲ್ಲಾ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ಧತ್ತಿ ಇಲಾಖೆಯ ಸಹಾಯಕ ಆಯುಕ್ತರು ನಿರ್ಬಂಧ ಹೇರಿದ್ದಾರೆ.



ಕಳೆದ ಮಾರ್ಚ್ ತಿಂಗಳ 3ರ ಭಾನುವಾರ ಬೆಳಗ್ಗೆ ಕೊಂಡಾಣ ಕ್ಷೇತ್ರದಲ್ಲಿ ನಿರ್ಮಾಣ ಹಂತದಲ್ಲಿದ್ದ ನೂತನ ಭಂಡಾರ ಮನೆಯನ್ನ ಕಿಡಿಗೇಡಿಗಳು ಜೆಸಿಬಿ ಬಳಸಿ ಏಕಾಏಕಿ ಕೆಡವಿ ಹಾಕಿದ್ದರು. ಉಳ್ಳಾಲ ಪೊಲೀಸರು ಆರೋಪಿಗಳಾದ ಮುತ್ತಣ್ಣ ಶೆಟ್ಟಿ, ಧೀರಜ್, ಶಿವರಾಜ್ ಶೆಟ್ಟಿ, ಶಿವಪ್ರಸಾದ್ ಆಚಾರ್ಯ, ನವೀನ್ ಕುಮಾರ್ ಎಂಬುವವರನ್ನು ಬಂಧಿಸಿದ್ದರು. ಆರೋಪಿಗಳು ಪೊಲೀಸರ ವಿಚಾರಣೆಯಲ್ಲಿ ತಾವೇ ದುಷ್ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದರು. ಕೊಂಡಾಣ ಕ್ಷೇತ್ರವು 16 ಗುರಿಕಾರರನ್ನು ಹೊಂದಿದೆ. ಅನಧಿಕೃತ ಮತ್ತು ಯಾವುದೇ ಅನುಮತಿಯಿಲ್ಲದೆ ನಿರ್ಮಿಸುತ್ತಿರುವ ಹೊಸ ಭಂಡಾರ ಮನೆಗೆ ಕ್ಷೇತ್ರಕ್ಕೆ ಸಂಬಂಧಿಸಿದ ಯಾವುದೇ ಗುರಿಕಾರರು ಒಪ್ಪಿಗೆ ನೀಡಲಿಲ್ಲ. ಹೀಗಾಗಿ ಕಟ್ಟಡವನ್ನು ತಾವೇ ಕೆಡವಲು ನಿರ್ಧರಿಸಿರುವುದಾಗಿ ಬಂಧಿತ ಆರೋಪಿಗಳು ಪೊಲೀಸರಿಗೆ ಹೇಳಿಕೆ ನೀಡಿದ್ದರು.
ಭಾನುವಾರ ಕೊಂಡಾಣ ಕ್ಷೇತ್ರದ ಅಧೀನಕ್ಕೊಳಪಟ್ಟ ಕೋಟೆಕಾರಿನ ತಾರಿಪಡ್ಪು ವೈದ್ಯನಾಥ ಕ್ಷೇತ್ರದಲ್ಲಿ ವಲಸರಿ ಜಾತ್ರೆ ನಡೆದಿದೆ. ಕೊಂಡಾಣ ಕ್ಷೇತ್ರದ ಭಂಡಾರಮನೆ ಧ್ವಂಸ ಪ್ರಕರಣದ ಐವರು ಆರೋಪಿಗಳು ವಲಸರಿ ಜಾತ್ರೆ ಸೇರಿದಂತೆ ಕೊಂಡಾಣ ಕ್ಷೇತ್ರಕ್ಕೆ ಸಂಬಂಧಿಸಿದ ಜಾತ್ರೆ, ಉತ್ಸವಗಳಲ್ಲಿ ಭಾಗವಹಿಸದಂತೆ ಜಿಲ್ಲಾ ಧರ್ಮದಾಯ ಧತ್ತಿ ಇಲಾಖೆಯ ಸಹಾಯಕ ಆಯುಕ್ತರು ಆರೋಪಿಗಳಿಗೆ ಶನಿವಾರ ಪ್ರತ್ಯೇಕವಾಗಿ ನೋಟೀಸು ಜಾರಿ ಮಾಡಿದ್ದರು. ಹೀಗಾಗಿ ವೈದ್ಯನಾಥನ ವಲಸರಿ ಜಾತ್ರಾ ಮಹೋತ್ಸವದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗು ಪೊಲೀಸ್ ಬಂದೋಬಸ್ತು ಏರ್ಪಡಿಸಲಾಗಿದೆ.
Mangalore Kotekar Vaidyanatha valasari fair, no entry for five accused who destroyed the house of Kondana temple.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm