ಬ್ರೇಕಿಂಗ್ ನ್ಯೂಸ್
05-05-24 08:53 pm Mangalore Correspondent ಕರಾವಳಿ
ಉಳ್ಳಾಲ, ಮೇ.5: ಕೋಟೆಕಾರು ಗ್ರಾಮದ ಕಾರಣಿಕದ ಕೊಂಡಾಣ ಕ್ಷೇತ್ರಕ್ಕೆ ಸಂಬಂಧಿಸಿದ ಕೋಟೆಕಾರಿನ ತಾರಿಪಡ್ಪು ವೈದ್ಯನಾಥ ಕ್ಷೇತ್ರದ ವಲಸರಿ ಜಾತ್ರೆಯಲ್ಲಿ ಕೊಂಡಾಣ ಕ್ಷೇತ್ರದ ಭಂಡಾರಮನೆ ಪುಡಿಗೈದ ಪ್ರಕರಣದ ಐವರು ಆರೋಪಿಗಳು ಭಾಗವಹಿಸಬಾರದೆಂದು ಜಿಲ್ಲಾ ಧರ್ಮದಾಯ ಧತ್ತಿ ಇಲಾಖೆಯ ಸಹಾಯ ಆಯುಕ್ತರು ನಿರ್ಬಂಧ ಹೇರಿದ್ದು, ಅಹಿತಕರ ಘಟನೆ ನಡೆಯದಂತೆ ಜಾತ್ರೆಗೆ ಬಿಗು ಪೊಲೀಸ್ ಬಂದೋಬಸ್ತು ಕಲ್ಪಿಸಲಾಗಿದೆ.
ಕೊಂಡಾಣ ಪಿಲಿಚಾಮುಂಡಿ, ಬಂಟ, ವೈದ್ಯನಾಥ, ಮುಂಡತ್ತಾಯ ಕ್ಷೇತ್ರದ ಗುರಿಕಾರರೆನ್ನುವ, ಕ್ಷೇತ್ರದ ನೂತನ ಭಂಡಾರ ಮನೆ ಧ್ವಂಸ ಪ್ರಕರಣದ ಪ್ರಮುಖ ಆರೋಪಿ ಮುತ್ತಣ್ಣ ಶೆಟ್ಟಿ ಮತ್ತು ಸಹವರ್ತಿಗಳಾದ ಧೀರಜ್, ಶಿವರಾಜ್ ಶೆಟ್ಟಿ, ನವೀನ್ ಕುಮಾರ್, ಶಿವಪ್ರಸಾದ್ ಆಚಾರ್ಯ ಎಂಬ ಐವರು ತಾರಿಪಡ್ಪುವಿನ ವೈದ್ಯನಾಥ ಕ್ಷೇತ್ರದ ವಲಸರಿ ಜಾತ್ರೆಯಲ್ಲಿ ಭಾಗವಹಿಸದಂತೆ ಜಿಲ್ಲಾ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ಧತ್ತಿ ಇಲಾಖೆಯ ಸಹಾಯಕ ಆಯುಕ್ತರು ನಿರ್ಬಂಧ ಹೇರಿದ್ದಾರೆ.



ಕಳೆದ ಮಾರ್ಚ್ ತಿಂಗಳ 3ರ ಭಾನುವಾರ ಬೆಳಗ್ಗೆ ಕೊಂಡಾಣ ಕ್ಷೇತ್ರದಲ್ಲಿ ನಿರ್ಮಾಣ ಹಂತದಲ್ಲಿದ್ದ ನೂತನ ಭಂಡಾರ ಮನೆಯನ್ನ ಕಿಡಿಗೇಡಿಗಳು ಜೆಸಿಬಿ ಬಳಸಿ ಏಕಾಏಕಿ ಕೆಡವಿ ಹಾಕಿದ್ದರು. ಉಳ್ಳಾಲ ಪೊಲೀಸರು ಆರೋಪಿಗಳಾದ ಮುತ್ತಣ್ಣ ಶೆಟ್ಟಿ, ಧೀರಜ್, ಶಿವರಾಜ್ ಶೆಟ್ಟಿ, ಶಿವಪ್ರಸಾದ್ ಆಚಾರ್ಯ, ನವೀನ್ ಕುಮಾರ್ ಎಂಬುವವರನ್ನು ಬಂಧಿಸಿದ್ದರು. ಆರೋಪಿಗಳು ಪೊಲೀಸರ ವಿಚಾರಣೆಯಲ್ಲಿ ತಾವೇ ದುಷ್ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದರು. ಕೊಂಡಾಣ ಕ್ಷೇತ್ರವು 16 ಗುರಿಕಾರರನ್ನು ಹೊಂದಿದೆ. ಅನಧಿಕೃತ ಮತ್ತು ಯಾವುದೇ ಅನುಮತಿಯಿಲ್ಲದೆ ನಿರ್ಮಿಸುತ್ತಿರುವ ಹೊಸ ಭಂಡಾರ ಮನೆಗೆ ಕ್ಷೇತ್ರಕ್ಕೆ ಸಂಬಂಧಿಸಿದ ಯಾವುದೇ ಗುರಿಕಾರರು ಒಪ್ಪಿಗೆ ನೀಡಲಿಲ್ಲ. ಹೀಗಾಗಿ ಕಟ್ಟಡವನ್ನು ತಾವೇ ಕೆಡವಲು ನಿರ್ಧರಿಸಿರುವುದಾಗಿ ಬಂಧಿತ ಆರೋಪಿಗಳು ಪೊಲೀಸರಿಗೆ ಹೇಳಿಕೆ ನೀಡಿದ್ದರು.
ಭಾನುವಾರ ಕೊಂಡಾಣ ಕ್ಷೇತ್ರದ ಅಧೀನಕ್ಕೊಳಪಟ್ಟ ಕೋಟೆಕಾರಿನ ತಾರಿಪಡ್ಪು ವೈದ್ಯನಾಥ ಕ್ಷೇತ್ರದಲ್ಲಿ ವಲಸರಿ ಜಾತ್ರೆ ನಡೆದಿದೆ. ಕೊಂಡಾಣ ಕ್ಷೇತ್ರದ ಭಂಡಾರಮನೆ ಧ್ವಂಸ ಪ್ರಕರಣದ ಐವರು ಆರೋಪಿಗಳು ವಲಸರಿ ಜಾತ್ರೆ ಸೇರಿದಂತೆ ಕೊಂಡಾಣ ಕ್ಷೇತ್ರಕ್ಕೆ ಸಂಬಂಧಿಸಿದ ಜಾತ್ರೆ, ಉತ್ಸವಗಳಲ್ಲಿ ಭಾಗವಹಿಸದಂತೆ ಜಿಲ್ಲಾ ಧರ್ಮದಾಯ ಧತ್ತಿ ಇಲಾಖೆಯ ಸಹಾಯಕ ಆಯುಕ್ತರು ಆರೋಪಿಗಳಿಗೆ ಶನಿವಾರ ಪ್ರತ್ಯೇಕವಾಗಿ ನೋಟೀಸು ಜಾರಿ ಮಾಡಿದ್ದರು. ಹೀಗಾಗಿ ವೈದ್ಯನಾಥನ ವಲಸರಿ ಜಾತ್ರಾ ಮಹೋತ್ಸವದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗು ಪೊಲೀಸ್ ಬಂದೋಬಸ್ತು ಏರ್ಪಡಿಸಲಾಗಿದೆ.
Mangalore Kotekar Vaidyanatha valasari fair, no entry for five accused who destroyed the house of Kondana temple.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm