ಬ್ರೇಕಿಂಗ್ ನ್ಯೂಸ್
08-05-24 03:20 pm Mangalore Correspondent ಕರಾವಳಿ
ಮಂಗಳೂರು, ಮೇ 8: ನಗರದ ಹಂಪನಕಟ್ಟೆ ಬಳಿಯ ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಆಟೋ ಚಾಲಕರು ಮತ್ತು ರೈಲು ಪ್ರಯಾಣಿಕರ ಮಧ್ಯೆ ಹೊಯ್ ಕೈ ನಡೆದಿದ್ದು ತಳ್ಳಾಟ ನಡೆಸುತ್ತಿರುವ ವಿಡಿಯೋ ವೈರಲ್ ಆಗಿದೆ. ಮಹಿಳೆಯರು ಎಂಬುದನ್ನೂ ಗಮನಿಸದೆ ಆಟೋ ಚಾಲಕರು ಅಸಭ್ಯವಾಗಿ ವರ್ತಿಸಿದ್ದಾರೆಂಬ ಆಕ್ಷೇಪ ಕೇಳಿಬಂದಿದೆ.
ಸೆಂಟ್ರಲ್ ರೈಲ್ವೇ ನಿಲ್ದಾಣದ ಹೊರಗೆ ವಾಗ್ವಾದ ಘಟನೆ ನಡೆದಿದ್ದು ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮಂಗಳವಾರ ಬೆಳಗ್ಗೆ ಚೆನ್ನೈನಿಂದ ದಂಪತಿ ಬಂದಿದ್ದು, ಅವರನ್ನು ದ್ವಿಚಕ್ರ ವಾಹನದಲ್ಲಿ ಕರೆದೊಯ್ಯಲು ಇಬ್ಬರು ಬಂದಿದ್ದರು. ರೈಲ್ವೇ ನಿಲ್ದಾಣದಲ್ಲಿ ನಿಗದಿತ ಸ್ಥಳಗಳಲ್ಲಿ ಮಾತ್ರ ವಾಹನ ಪಾರ್ಕಿಂಗ್ ಮಾಡಬೇಕು. ನಿಲ್ದಾಣದ ಮುಂದಿನ ಮುಖ್ಯ ಗೇಟ್ ಬಳಿ ಪಿಕಪ್ ಮತ್ತು ಡ್ರಾಪ್ ಗೆ ಮಾತ್ರ ಅನುಮತಿಯಿದ್ದು ಖಾಲಿ ವಾಹನ ತರುವುದಕ್ಕೆ ಅವಕಾಶ ಇಲ್ಲ.





ಇದೇ ವಿಚಾರದಲ್ಲಿ ರೈಲು ಪ್ರಯಾಣಿಕರನ್ನು ಕರೆದೊಯ್ಯಲು ಬಂದಿದ್ದ ಇಬ್ಬರು ಮತ್ತು ಪಾರ್ಕಿಂಗ್ ನೋಡಿಕೊಳ್ಳುವ ಚಂದನ್ ಎಂಬ ವ್ಯಕ್ತಿ ನಡುವೆ ವಾಗ್ವಾದ ನಡೆದಿದೆ. ಇದೇ ವೇಳೆ, ಪಾರ್ಕಿಂಗ್ ನೋಡಿಕೊಳ್ಳುವ ಚಂದನ್ ಪರವಾಗಿ ಆಟೋರಿಕ್ಷಾ ಚಾಲಕರು ಮಧ್ಯಪ್ರವೇಶಿಸಿದ್ದಾರೆ. ಆನಂತರ ವಾಗ್ವಾದ ತಾರಕಕ್ಕೇರಿದ್ದು, ಪ್ರಯಾಣಿಕರ ಜೊತೆಗೆ ಆಟೋ ಚಾಲಕರು ಜಗಳ ನಡೆಸಿದ್ದಾರೆ. ಹೊಡೆದಾಟದ ವಿಡಿಯೋ ಸಾರ್ವಜನಿಕರ ಮೊಬೈಲಿನಲ್ಲಿ ಸೆರೆಯಾಗಿದೆ.
ಈ ಬಗ್ಗೆ ಪೊಲೀಸ್ - ಮಾಧ್ಯಮ ವಾಟ್ಸಪ್ ಗ್ರೂಪಿನಲ್ಲಿ ಪ್ರತಿಕ್ರಿಯೆ ಹಾಕಿರುವ ಮಂಗಳೂರು ಪೊಲೀಸ್ ಕಮಿಷನರ್, ಆಟೋ ಚಾಲಕರ ಗುರುತು ಪತ್ತೆಹಚ್ಚಲಾಗಿದೆ. ಪ್ರಯಾಣಿಕರ ಗುರುತನ್ನೂ ಪರಿಶೀಲನೆ ಮಾಡಲಾಗುತ್ತಿದೆ. ಈ ವಿಷಯದಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
Fight between auto drivers and passenger go viral in #Mangalore #railwaystation pic.twitter.com/XxbCHbk94e
— Headline Karnataka (@hknewsonline) May 8, 2024
Fight between auto drivers and passenger go viral in Mangalore railway station over parking issues.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm