ಬ್ರೇಕಿಂಗ್ ನ್ಯೂಸ್
08-05-24 04:54 pm Mangalore Correspondent ಕರಾವಳಿ
ಮಂಗಳೂರು, ಮೇ 8: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಎಸ್ಐಟಿ ತನಿಖೆಯಿಂದ ನ್ಯಾಯ ಸಿಗುವ ನಿರೀಕ್ಷೆ ಇಲ್ಲ. ಎಸ್ಐಟಿ ತನಿಖೆ ಬಗ್ಗೆ ನಮಗೆ ವಿಶ್ವಾಸವಿಲ್ಲ. ವಿಡಿಯೋ ಪ್ರಜ್ವಲ್ ರೇವಣ್ಣ ಅವರದ್ದೇ ಆಗಿದ್ದಲ್ಲಿ ಶಿಕ್ಷೆಯಾಗಲಿ. ಪ್ರಜ್ವಲ್ ರೇವಣ್ಣ ಪಾತ್ರದಷ್ಟೇ ವಿಡಿಯೋ ಹರಿಯ ಬಿಟ್ಟವರ ಪಾತ್ರವೂ ಇದೆ. ಇದೆಲ್ಲದರ ತನಿಖೆ ಆಗಬೇಕಿದ್ದರೆ ಸಿಬಿಐಗೆ ಕೊಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಅಕ್ಷಿತ್ ಸುವರ್ಣ ಹೇಳಿದ್ದಾರೆ.
ಪ್ರಜ್ವಲ್ ಪ್ರಕರಣವನ್ನು ಸಿಬಿಐಗೆ ವಹಿಸಲು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ ಬಳಿಕ ಅವರು ಮಾತನಾಡಿದರು. ಪ್ರಕರಣದಲ್ಲಿ ಮಹಿಳೆಯರ ಮುಖ ಬ್ಲರ್ ಮಾಡದೆ ವಿಡಿಯೋ ಹರಿಯ ಬಿಟ್ಟಿದ್ದಾರೆ. ಇದನ್ನ ನಾವು ಖಂಡಿಸುತ್ತೇವೆ, ತುಂಬಾ ಮಹಿಳೆಯರು ಇದ್ದಾರೆ. ಅವರ ಕುಟುಂಬ ಮತ್ತು ಸಂಸಾರಕ್ಕೆ ಇದು ದೊಡ್ಡ ಹೊಡೆತ. ಯಾರು ವಿಡಿಯೋ ಹರಿಯ ಬಿಟ್ಟಿದ್ದಾರೋ ಅವರ ವಿರುದ್ಧ ಕಠಿಣ ಕ್ರಮವಾಗಬೇಕು ಎಂದವರು ಆಗ್ರಹಿಸಿದರು.


ಎಸ್ಐಟಿ ಒಂದು ಭಾಗದ ವಿಚಾರಣೆಯನ್ನು ಮಾತ್ರ ಮಾಡಿದ್ದಾರೆ. ಯಾರು ಹಂಚಿಕೆ ವೈರಲ್ ಮಾಡುತ್ತಿದ್ದರೋ ಅವರನ್ನ ವಿಚಾರಣೆ ಮಾಡುತ್ತಿಲ್ಲ. ಇದಕ್ಕಾಗಿ ಪ್ರಕರಣವನ್ನ ಸಿಬಿಐಗೆ ವಹಿಸಬೇಕು. ತಪ್ಪು ಮಾಡಿದವರಿಗೆಲ್ಲ ಶಿಕ್ಷೆಯಾಗಬೇಕು ಎಂದು ಅಕ್ಷಿತ್ ಸುವರ್ಣ ಆಗ್ರಹಿಸಿದರು. ನಿಯೋಗದಲ್ಲಿ ಯುವ ಜನತಾದಳ (ಜಾ) ದ.ಕ ಜಿಲ್ಲೆ ಇದರ ಮಂಗಳೂರು ಉತ್ತರ ವಿಧಾನಸಭಾ ಅಧ್ಯಕ್ಷ ರತೀಶ್ ಕರ್ಕೇರ, ಜಿಲ್ಲಾ ಹಿರಿಯ ಉಪಾಧ್ಯಕ್ಷ ಮೊಹಮ್ಮದ್ ಅಸಿಫ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಿತೇಶ್ ರೈ, ಮಂಗಳೂರು ದಕ್ಷಿಣ ಕ್ಷೇತ್ರ ಅಧ್ಯಕ್ಷ ಸತ್ತಾರ್ ಬಂದರು ಹಾಗೂ ಪಧಾದಿಕಾರಿಗಳಾದ ನಿತೇಶ್ ಪೂಜಾರಿ, ವಿನೀತ್, ರಿನಿತ್, ನಿಶಾಂತ್ ಮುಂತಾದವರು ಪಾಲ್ಗೊಂಡಿದ್ದರು.
Mangalore Jds Akshith Suvarna demands CBI probe in Prajwal Revanna sex case. We don't trust in SIT giving justice he added. A memorandum was submitted to DC of Mangalore demanding for justice.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am