ಬ್ರೇಕಿಂಗ್ ನ್ಯೂಸ್
08-05-24 04:54 pm Mangalore Correspondent ಕರಾವಳಿ
ಮಂಗಳೂರು, ಮೇ 8: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಎಸ್ಐಟಿ ತನಿಖೆಯಿಂದ ನ್ಯಾಯ ಸಿಗುವ ನಿರೀಕ್ಷೆ ಇಲ್ಲ. ಎಸ್ಐಟಿ ತನಿಖೆ ಬಗ್ಗೆ ನಮಗೆ ವಿಶ್ವಾಸವಿಲ್ಲ. ವಿಡಿಯೋ ಪ್ರಜ್ವಲ್ ರೇವಣ್ಣ ಅವರದ್ದೇ ಆಗಿದ್ದಲ್ಲಿ ಶಿಕ್ಷೆಯಾಗಲಿ. ಪ್ರಜ್ವಲ್ ರೇವಣ್ಣ ಪಾತ್ರದಷ್ಟೇ ವಿಡಿಯೋ ಹರಿಯ ಬಿಟ್ಟವರ ಪಾತ್ರವೂ ಇದೆ. ಇದೆಲ್ಲದರ ತನಿಖೆ ಆಗಬೇಕಿದ್ದರೆ ಸಿಬಿಐಗೆ ಕೊಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಅಕ್ಷಿತ್ ಸುವರ್ಣ ಹೇಳಿದ್ದಾರೆ.
ಪ್ರಜ್ವಲ್ ಪ್ರಕರಣವನ್ನು ಸಿಬಿಐಗೆ ವಹಿಸಲು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ ಬಳಿಕ ಅವರು ಮಾತನಾಡಿದರು. ಪ್ರಕರಣದಲ್ಲಿ ಮಹಿಳೆಯರ ಮುಖ ಬ್ಲರ್ ಮಾಡದೆ ವಿಡಿಯೋ ಹರಿಯ ಬಿಟ್ಟಿದ್ದಾರೆ. ಇದನ್ನ ನಾವು ಖಂಡಿಸುತ್ತೇವೆ, ತುಂಬಾ ಮಹಿಳೆಯರು ಇದ್ದಾರೆ. ಅವರ ಕುಟುಂಬ ಮತ್ತು ಸಂಸಾರಕ್ಕೆ ಇದು ದೊಡ್ಡ ಹೊಡೆತ. ಯಾರು ವಿಡಿಯೋ ಹರಿಯ ಬಿಟ್ಟಿದ್ದಾರೋ ಅವರ ವಿರುದ್ಧ ಕಠಿಣ ಕ್ರಮವಾಗಬೇಕು ಎಂದವರು ಆಗ್ರಹಿಸಿದರು.
ಎಸ್ಐಟಿ ಒಂದು ಭಾಗದ ವಿಚಾರಣೆಯನ್ನು ಮಾತ್ರ ಮಾಡಿದ್ದಾರೆ. ಯಾರು ಹಂಚಿಕೆ ವೈರಲ್ ಮಾಡುತ್ತಿದ್ದರೋ ಅವರನ್ನ ವಿಚಾರಣೆ ಮಾಡುತ್ತಿಲ್ಲ. ಇದಕ್ಕಾಗಿ ಪ್ರಕರಣವನ್ನ ಸಿಬಿಐಗೆ ವಹಿಸಬೇಕು. ತಪ್ಪು ಮಾಡಿದವರಿಗೆಲ್ಲ ಶಿಕ್ಷೆಯಾಗಬೇಕು ಎಂದು ಅಕ್ಷಿತ್ ಸುವರ್ಣ ಆಗ್ರಹಿಸಿದರು. ನಿಯೋಗದಲ್ಲಿ ಯುವ ಜನತಾದಳ (ಜಾ) ದ.ಕ ಜಿಲ್ಲೆ ಇದರ ಮಂಗಳೂರು ಉತ್ತರ ವಿಧಾನಸಭಾ ಅಧ್ಯಕ್ಷ ರತೀಶ್ ಕರ್ಕೇರ, ಜಿಲ್ಲಾ ಹಿರಿಯ ಉಪಾಧ್ಯಕ್ಷ ಮೊಹಮ್ಮದ್ ಅಸಿಫ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಿತೇಶ್ ರೈ, ಮಂಗಳೂರು ದಕ್ಷಿಣ ಕ್ಷೇತ್ರ ಅಧ್ಯಕ್ಷ ಸತ್ತಾರ್ ಬಂದರು ಹಾಗೂ ಪಧಾದಿಕಾರಿಗಳಾದ ನಿತೇಶ್ ಪೂಜಾರಿ, ವಿನೀತ್, ರಿನಿತ್, ನಿಶಾಂತ್ ಮುಂತಾದವರು ಪಾಲ್ಗೊಂಡಿದ್ದರು.
Mangalore Jds Akshith Suvarna demands CBI probe in Prajwal Revanna sex case. We don't trust in SIT giving justice he added. A memorandum was submitted to DC of Mangalore demanding for justice.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
20-04-25 12:51 pm
Mangalore Correspondent
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm