ಬ್ರೇಕಿಂಗ್ ನ್ಯೂಸ್
08-05-24 04:54 pm Mangalore Correspondent ಕರಾವಳಿ
ಮಂಗಳೂರು, ಮೇ 8: ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಎಸ್ಐಟಿ ತನಿಖೆಯಿಂದ ನ್ಯಾಯ ಸಿಗುವ ನಿರೀಕ್ಷೆ ಇಲ್ಲ. ಎಸ್ಐಟಿ ತನಿಖೆ ಬಗ್ಗೆ ನಮಗೆ ವಿಶ್ವಾಸವಿಲ್ಲ. ವಿಡಿಯೋ ಪ್ರಜ್ವಲ್ ರೇವಣ್ಣ ಅವರದ್ದೇ ಆಗಿದ್ದಲ್ಲಿ ಶಿಕ್ಷೆಯಾಗಲಿ. ಪ್ರಜ್ವಲ್ ರೇವಣ್ಣ ಪಾತ್ರದಷ್ಟೇ ವಿಡಿಯೋ ಹರಿಯ ಬಿಟ್ಟವರ ಪಾತ್ರವೂ ಇದೆ. ಇದೆಲ್ಲದರ ತನಿಖೆ ಆಗಬೇಕಿದ್ದರೆ ಸಿಬಿಐಗೆ ಕೊಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಅಕ್ಷಿತ್ ಸುವರ್ಣ ಹೇಳಿದ್ದಾರೆ.
ಪ್ರಜ್ವಲ್ ಪ್ರಕರಣವನ್ನು ಸಿಬಿಐಗೆ ವಹಿಸಲು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ ಬಳಿಕ ಅವರು ಮಾತನಾಡಿದರು. ಪ್ರಕರಣದಲ್ಲಿ ಮಹಿಳೆಯರ ಮುಖ ಬ್ಲರ್ ಮಾಡದೆ ವಿಡಿಯೋ ಹರಿಯ ಬಿಟ್ಟಿದ್ದಾರೆ. ಇದನ್ನ ನಾವು ಖಂಡಿಸುತ್ತೇವೆ, ತುಂಬಾ ಮಹಿಳೆಯರು ಇದ್ದಾರೆ. ಅವರ ಕುಟುಂಬ ಮತ್ತು ಸಂಸಾರಕ್ಕೆ ಇದು ದೊಡ್ಡ ಹೊಡೆತ. ಯಾರು ವಿಡಿಯೋ ಹರಿಯ ಬಿಟ್ಟಿದ್ದಾರೋ ಅವರ ವಿರುದ್ಧ ಕಠಿಣ ಕ್ರಮವಾಗಬೇಕು ಎಂದವರು ಆಗ್ರಹಿಸಿದರು.


ಎಸ್ಐಟಿ ಒಂದು ಭಾಗದ ವಿಚಾರಣೆಯನ್ನು ಮಾತ್ರ ಮಾಡಿದ್ದಾರೆ. ಯಾರು ಹಂಚಿಕೆ ವೈರಲ್ ಮಾಡುತ್ತಿದ್ದರೋ ಅವರನ್ನ ವಿಚಾರಣೆ ಮಾಡುತ್ತಿಲ್ಲ. ಇದಕ್ಕಾಗಿ ಪ್ರಕರಣವನ್ನ ಸಿಬಿಐಗೆ ವಹಿಸಬೇಕು. ತಪ್ಪು ಮಾಡಿದವರಿಗೆಲ್ಲ ಶಿಕ್ಷೆಯಾಗಬೇಕು ಎಂದು ಅಕ್ಷಿತ್ ಸುವರ್ಣ ಆಗ್ರಹಿಸಿದರು. ನಿಯೋಗದಲ್ಲಿ ಯುವ ಜನತಾದಳ (ಜಾ) ದ.ಕ ಜಿಲ್ಲೆ ಇದರ ಮಂಗಳೂರು ಉತ್ತರ ವಿಧಾನಸಭಾ ಅಧ್ಯಕ್ಷ ರತೀಶ್ ಕರ್ಕೇರ, ಜಿಲ್ಲಾ ಹಿರಿಯ ಉಪಾಧ್ಯಕ್ಷ ಮೊಹಮ್ಮದ್ ಅಸಿಫ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಿತೇಶ್ ರೈ, ಮಂಗಳೂರು ದಕ್ಷಿಣ ಕ್ಷೇತ್ರ ಅಧ್ಯಕ್ಷ ಸತ್ತಾರ್ ಬಂದರು ಹಾಗೂ ಪಧಾದಿಕಾರಿಗಳಾದ ನಿತೇಶ್ ಪೂಜಾರಿ, ವಿನೀತ್, ರಿನಿತ್, ನಿಶಾಂತ್ ಮುಂತಾದವರು ಪಾಲ್ಗೊಂಡಿದ್ದರು.
Mangalore Jds Akshith Suvarna demands CBI probe in Prajwal Revanna sex case. We don't trust in SIT giving justice he added. A memorandum was submitted to DC of Mangalore demanding for justice.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm