ಬ್ರೇಕಿಂಗ್ ನ್ಯೂಸ್
08-05-24 10:37 pm Mangalore Correspondent ಕರಾವಳಿ
ಬೆಳ್ತಂಗಡಿ, ಮೇ.8: ಬಡವರ ಬಂಧು, ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ವಿಚಾರ ತಿಳಿಯುತ್ತಲೇ ಬೆಳ್ತಂಗಡಿಯಲ್ಲಿ ಗಾಢ ಶೋಕ ಮಡುಗಟ್ಟಿದೆ. ಜನರು ಬೀದಿ ಬೀದಿಯಲ್ಲಿ ನಿಂತು ಬಂಗೇರ ಅವರ ಗುಣಗಾನ ಮಾಡುತ್ತಿದ್ದಾರೆ. ಇನ್ನೊಂದೆಡೆ, ಅವರ ಅಂತಿಮ ಕಾರ್ಯ ನ ಭೂತೋ ಎನ್ನುವಂತೆ ಮಾಡಬೇಕು ಎನ್ನುವ ನೆಲೆಯಲ್ಲಿ ಚರ್ಚೆ ನಡೆಸುತ್ತಿದ್ದಾರೆ. ಬಡವ, ಬಲ್ಲಿದ, ಜಾತಿ ಭೇದ ಇಲ್ಲದೆ ಬಂಗೇರ ಅವರ ಅಭಿಮಾನಿಗಳಿದ್ದು ಬೆಂಗಳೂರಿನಿಂದ ರಾತ್ರಿ ಶವ ಕರೆತರುವಾಗಲೇ ಬೆಳ್ತಂಗಡಿ ತಾಲೂಕು ಪ್ರವೇಶ ಆಗುತ್ತಲೇ ಮೆರವಣಿಗೆಯಲ್ಲಿ ಎದುರುಗೊಳ್ಳಲು ಸಿದ್ಧತೆ ನಡೆಸಿದ್ದಾರೆ.
ಬೆಂಗಳೂರಿನಿಂದ ಚಾರ್ಮಾಡಿ ಮೂಲಕ ಪಾರ್ಥಿವ ಶರೀರ ಬರಲಿದ್ದು ನಸುಕಿನ 3 ಗಂಟೆಗೆ ಚಾರ್ಮಾಡಿಯಿಂದಲೇ ಕಾಲ್ನಡಿಗೆ ಮೆರವಣಿಗೆಯಲ್ಲಿ ತರಲು ಅಭಿಮಾನಿಗಳು ನಿರ್ಧರಿಸಿದ್ದಾರೆ. ಒಟ್ಟು ಕಾರ್ಯಕ್ರಮದ ಬಗ್ಗೆ ಬಂಗೇರ ಅಭಿಮಾನಿ ಸಮಿತಿ ಸಭೆ ಕರೆದು ಚರ್ಚೆ ನಡೆಸಿದ್ದಾರೆ. ಪಾರ್ಥಿವ ಶರೀರವನ್ನು ನೇರವಾಗಿ ಮನೆಗೆ ತಂದು ಅಂತಿಮ ವಿಧಿ ಪೂರೈಸಿ ಬೆಳಗ್ಗೆ 10.30 ಗಂಟೆಗೆ ಹಳೇಕೋಟೆ ಅವರ ಮನೆಯಿಂದ ತಾಲೂಕು ಕ್ರೀಡಾಂಗಣಕ್ಕೆ ಪಾರ್ಥಿವ ಶರೀರವನ್ನು ತಂದು ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ.
ಅಪರಾಹ್ನ ಬೆಳ್ತಂಗಡಿ ನಗರದಲ್ಲಿ ಪಾರ್ಥಿವ ಶರೀರದ ಅಂತಿಮ ಯಾತ್ರೆಯನ್ನು ಮೆರವಣಿಗೆ ಮೂಲಕ ನಡೆಸಿ, ಅಗಲಿದ ನಾಯಕನಿಗೆ ಗೌರವ ಸಲ್ಲಿಸಲಾಗುತ್ತದೆ. ನಂತರ ಅಂತ್ಯ ಸಂಸ್ಕಾರ ಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಹಳೇಕೋಟೆಯ ಮನೆಯ ಸಮೀಪ ನಡೆಸಲಾಗುವುದು. ಮೃತರ ಗೌರವಾರ್ಥ ಬೆಳ್ತಂಗಡಿ ಪೇಟೆಯ ಹೋಟೆಲ್, ಅಂಗಡಿ ಮುಂಗಟ್ಟುಗಳನ್ನು ಸ್ವಯಂಪ್ರೇರಿತ ಬಂದ್ ಮಾಡಿ ವಸಂತ ಬಂಗೇರರಿಗೆ ಗೌರವ ಸಲ್ಲಿಸಬೇಕು ಎಂದು ಅಭಿಮಾನಿಗಳ ಸಮಿತಿ ವಿನಂತಿಸಿದೆ.
ಮೃತರ ಅಂತಿಮ ದರ್ಶನಕ್ಕೆ ಮುಖ್ಯಮಂತ್ರಿ, ಉಪ ಮುಖ್ಯ ಮಂತ್ರಿ ಸೇರಿದಂತೆ ಸಚಿವರು, ಗಣ್ಯರು ಭಾಗವಹಿಸುವ ನಿರೀಕ್ಷೆ ಇದೆ. ಸಾರ್ವಜನಿಕರು, ಅವರ ಅಭಿಮಾನಿಗಳು, ವಿವಿಧ ಕ್ಷೇತ್ರದ ಗಣ್ಯರಿಗೆ ತಾಲೂಕು ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ವಸಂತ ಬಂಗೇರ ಅಭಿಮಾನಿ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
Mangalore Vasantha Bangera death, last rites in Belthangady. K. Vasantha Bangera, a prominent Congress leader known for his influence in Dakshina Kannada district, breathed his last at a private hospital in Bengaluru today, May 8, around 4 pm.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm