ಬ್ರೇಕಿಂಗ್ ನ್ಯೂಸ್
09-05-24 10:04 pm Mangalore Correspondent ಕರಾವಳಿ
ಮಂಗಳೂರು, ಮೇ 9: ರೋಶನಿ ನಿಲಯದಲ್ಲಿ ಎಂಎಸ್ಸಿ ಕಲಿಯುತ್ತಿದ್ದು ಪರೀಕ್ಷೆ ಹಾಲ್ ನಿಂದಲೇ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜ್ ಅವರನ್ನು ಪೊಲೀಸರು ಸುಳ್ಯದಲ್ಲಿ ಪತ್ತೆ ಮಾಡಿದ್ದಾರೆ.
ಕ್ರಿಮಿನಾಲಜಿ ಮತ್ತು ಫಾರೆನ್ಸಿಕ್ ಸೈನ್ಸ್ ವಿಷಯದಲ್ಲಿ ಮೊದಲನೇ ವರ್ಷದ ಎಂಎಸ್ಸಿ ಕಲಿಯುತ್ತಿದ್ದ ವಿದ್ಯಾರ್ಥಿನಿ ಮೇ 7ರಂದು ಎರಡನೇ ಸೆಮಿಸ್ಟರ್ ಪರೀಕ್ಷೆ ಮುಗಿಸಿ ಹೊರಗೆ ಬಂದವಳು ನಾಪತ್ತೆಯಾಗಿದ್ದಳು. ಮನೆಯವರು ಪಾಂಡೇಶ್ವರ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಪುಸ್ತಕ ಮತ್ತು ಮೊಬೈಲನ್ನು ಕಾಲೇಜಿನಲ್ಲಿಯೇ ಬಿಟ್ಟು ತೆರಳಿದ್ದರಿಂದ ಭಾರೀ ಕುತೂಹಲ ಉಂಟಾಗಿತ್ತು.
ಪೊಲೀಸರು ಹುಡುಕಾಟ ನಡೆಸಿದ್ದರೂ ಯಾವುದೇ ಸುಳಿವು ದೊರಕಿರಲಿಲ್ಲ. ಮೇ 9ರಂದು ಪಾಂಡೇಶ್ವರ ಠಾಣೆಗೆ ವಿದ್ಯಾರ್ಥಿನಿ ಸುಳ್ಯ ತಾಲೂಕಿನ ಅರಂತೋಡಿನಲ್ಲಿ ಇದ್ದಾಳೆ ಎಂಬ ಮಾಹಿತಿ ದೊರಕಿತ್ತು. ಅಲ್ಲಿ ತೆರಳಿದ ಪೊಲೀಸರು ಆಕೆಯನ್ನು ಮಂಗಳೂರಿಗೆ ಕರೆತಂದು ಪೋಷಕರ ವಶಕ್ಕೆ ಒಪ್ಪಿಸಿದ್ದಾರೆ. ಎಂಎಸ್ಸಿ ಪರೀಕ್ಷೆಯನ್ನು ಎದುರಿಸುವುದು ಕಷ್ಟವಾಗಿತ್ತು. ತೀವ್ರ ಒತ್ತಡದಿಂದಾಗಿ ಸ್ವಲ್ಪ ವಿಶ್ರಾಂತಿ ಪಡೆಯಬೇಕೆಂದು ನಿರ್ಧರಿಸಿ ತೆರಳಿದ್ದಾಗಿ ಆಕೆ ಪೊಲೀಸರಿಗೆ ತಿಳಿಸಿದ್ದಾಳೆ. ಕಾಲೇಜಿನಿಂದ ಹೊರಬಂದು ಕಂಕನಾಡಿಯಲ್ಲಿ ಚಿಕ್ಕಮಗಳೂರಿಗೆ ತೆರಳುವ ಬಸ್ಸನ್ನು ಹತ್ತಿದ್ದಳು. ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಫ್ರೀ ಇರುವುದರಿಂದ ನೇರವಾಗಿ ಚಿಕ್ಕಮಗಳೂರು ತೆರಳಿದ್ದು, ಅಲ್ಲಿಂದ ಮೈಸೂರಿಗೆ ಹೋಗುವ ಬಸ್ ಹತ್ತಿದ್ದಾಳೆ. ಅಲ್ಲಿಂದ ಮತ್ತೆ ಮಡಿಕೇರಿಗೆ ಬಸ್ಸಿನಲ್ಲಿ ಬಂದು ಬಸ್ ನಿಲ್ದಾಣದಲ್ಲಿ ನಿಂತುಕೊಂಡಿದ್ದಳು.
ಅಲ್ಲಿದ್ದಾಗಲೇ ತಮಿಳು ಮಾತನಾಡುವ ಹುಡುಗಿಯೊಬ್ಬಳು ಪರಿಚಯ ಆಗಿದ್ದು, ಆಕೆಯ ಜೊತೆಗೆ ಬುಧವಾರ ಸುಳ್ಯಕ್ಕೆ ಬಂದಿದ್ದಾಳೆ. ಸುಳ್ಯದ ಅರಂತೋಡಿನಲ್ಲಿ ಆಕೆಯ ಮನೆಯಲ್ಲಿ ರಾತ್ರಿ ಉಳಿದುಕೊಂಡಿದ್ದಳು. ದೀಪಿಕಾಗೆ ತಮಿಳು ಬಿಟ್ಟರೆ ಕನ್ನಡ ಸರಿಯಾಗಿ ಬರುತ್ತಿರಲಿಲ್ಲ. ಮೂಲತಃ ತಮಿಳುನಾಡಿನವರಾಗಿದ್ದು, ತಂದೆ, ತಾಯಿ ಮಂಗಳೂರಿನಲ್ಲಿ ನೆಲೆಸಿದ್ದರಿಂದ ಇಲ್ಲಿಯೇ ಓದು ಪೂರೈಸಿದ್ದಳು. ಸುಳ್ಯದಲ್ಲಿ ಹುಡುಗಿ ಇರುವ ಬಗ್ಗೆ ಅವರ ಮನೆಯವರು ಪರಿಚಯದ ಮಂಗಳೂರಿನ ಪೊಲೀಸ್ ಸಿಬಂದಿ ಒಬ್ಬರಿಗೆ ತಿಳಿಸಿದ್ದರು. ಅದರಂತೆ, ಪಾಂಡೇಶ್ವರ ಠಾಣೆ ಪೊಲೀಸರು ತೆರಳಿ ಆಕೆಯನ್ನು ಮಂಗಳೂರಿಗೆ ಕರೆತಂದಿದ್ದಾರೆ.
Missing Elizabeth Deepika Ponnuraj missing found, uses free KSRTC bus. A student who went missing was found on May 8. An urgent appeal was issued regarding the disappearance of Elizabeth Deepika Ponnuraj (21).
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm