ಬ್ರೇಕಿಂಗ್ ನ್ಯೂಸ್
10-05-24 12:39 pm Mangalore Correspondent ಕರಾವಳಿ
ಉಳ್ಳಾಲ, ಮೇ.10: ನಿಯಂತ್ರಣ ತಪ್ಪಿದ ಕಾರೊಂದು ಚುರುಮುರಿ ವ್ಯಾಪಾರದ ಗೂಡಂಗಡಿಗೆ ಢಿಕ್ಕಿ ಹೊಡೆದು ಅಂಗಡಿಯನ್ನ ಉಡೀಸ್ ಮಾಡಿದ್ದಲ್ಲದೆ, ಮರಕ್ಕೆ ಢಿಕ್ಕಿ ಹೊಡೆದು ನಜ್ಜುಗುಜ್ಜಾಗಿದ್ದು , ಕಾರಿನ ಧಾವಂತಕ್ಕೆ ಬೀದಿ ನಾಯಿಯೊಂದು ಬಲಿಯಾದ ಘಟನೆ ರಾ.ಹೆ.66 ರ ಅಂಬಿಕಾ ರೋಡ್ ಎಂಬಲ್ಲಿ ನಿನ್ನೆ ಮಧ್ಯರಾತ್ರಿ ನಡೆದಿದ್ದು, ಕಾರಿನಲ್ಲಿದ್ದ ಮೂವರು ಸವಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪಾಂಡೇಶ್ವರದ ಮೂವರು ಯುವಕರು ನಿನ್ನೆ ಮಧ್ಯರಾತ್ರಿ 12.30 ರ ವೇಳೆಗೆ ಮಂಗಳೂರಿನಿಂದ ಮಂಜೇಶ್ವರದ ಹೊಸಂಗಡಿಗೆ ಸ್ವಿಪ್ಟ್ ಕಾರಲ್ಲಿ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ನಿಯಂತ್ರಣ ತಪ್ಪಿದ ಕಾರು ಮೊದಲು ಚುರುಮುರಿ ಗೂಡಂಗಡಿಗೆ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಗೂಡಂಗಡಿ ದೂರಕ್ಕೆ ಎಸೆಯಲ್ಪಟ್ಟಿದೆ. ನಂತರ ಕಾರು ಅಲ್ಲೇ ಇದ್ದ ಮರವೊಂದಕ್ಕೆ ಢಿಕ್ಕಿ ಹೊಡೆದು ನಿಂತಿದೆ. ಕಾರಿನ ಸಹ ಸವಾರನೋರ್ವ ಗಂಭೀರ ಗಾಯಗೊಂಡಿದ್ದು ಉಳಿದಿಬ್ಬರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ.





ಘಟನೆಯಿಂದ ತೊಕ್ಕೊಟ್ಟು ನಿವಾಸಿ ಗಣೇಶ್ ಎಂಬವರ ಚುರುಮುರಿ ಅಂಗಡಿ ಸಂಪೂರ್ಣ ನಜ್ಜು ಗುಜ್ಜಾಗಿ ಸುಮಾರು ಮೂವತ್ತು ಸಾವಿರದಷ್ಟು ನಷ್ಟ ಉಂಟಾಗಿದೆ. ಒಂದು ವೇಳೆ ಹಗಲಲ್ಲಿ ಈ ಘಟನೆ ನಡೆದಿದ್ದರೆ ಚುರುಮುರಿ ಅಂಗಡಿಯ ಗಣೇಶ್ ಅವರ ಪ್ರಾಣ ಉಳಿಯುತ್ತಿರಲಿಲ್ಲ. ಕಾರಿನ ಧಾವಂತಕ್ಕೆ ಬೀದಿಯಲ್ಲಿದ್ದ ಶ್ವಾನವೊಂದು ಬಲಿಯಾಗಿದೆ. ಟ್ರಾಫಿಕ್ ಪೊಲೀಸರು ಸಮರ್ಪಕ ತನಿಖೆ ನಡೆಸಿ ಕಾರು ಚಾಲಕನ ನಿರ್ಲಕ್ಷ್ಯದ ಚಾಲನೆಯ ವಿರುದ್ಧ ಕ್ರಮ ಕೈಗೊಳ್ಳಬೇಕಾಗಿ ಸ್ಥಳೀಯರು ಆಗ್ರಹಿಸಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Mangalore Car accident at Thokotuu, rams shops, dog killed. Three Youths from Pandeshwar were going towards Manjeshwara in the swift car. As the car lost control he rammed a petty shop and then killed a dog.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm