ಬ್ರೇಕಿಂಗ್ ನ್ಯೂಸ್
10-05-24 09:22 pm Mangalore Correspondent ಕರಾವಳಿ
ಮಂಗಳೂರು, ಮೇ.10: ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಸಿಬಂದಿ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ವಿಮಾನ ಸಮುದ್ರದ ಮೇಲಿರುವಾಗ ಹೊರಗೆ ಹಾರುತ್ತೇನೆಂದು ಹೇಳಿ ಭಯ ಹುಟ್ಟಿಸಿದ ಬಗ್ಗೆ ಬಜ್ಪೆ ಠಾಣೆಯಲ್ಲಿ ಏರ್ ಇಂಡಿಯಾ ಸಿಬಂದಿ ದೂರು ನೀಡಿದ್ದಾರೆ.
ಏರ್ ಇಂಡಿಯಾ ಎಕ್ಸ್ ಪ್ರೆಸ್ ನಲ್ಲಿ ಸೆಕ್ಯೂರಿಟಿ ಕೋ- ಆಡಿನೇಟರ್ ಆಗಿರುವ ಸಿದ್ದಾರ್ಥದಾಸ್ ಈ ಬಗ್ಗೆ ಮೊಹಮ್ಮದ್ ಬಿಸಿ ಎಂಬವರ ವಿರುದ್ಧ ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಮೊಹಮ್ಮದ್ ಬಿ.ಸಿ. ಎಂಬವರು ಮೇ 8ರಂದು ರಾತ್ರಿ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ದುಬೈನಿಂದ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಮರುದಿನ ಬೆಳಗ್ಗೆ 7.30 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿದ್ದರು. ದುಬೈನಿಂದ ವಿಮಾನ ಹೊರಟ ನಂತರ ಮೊಹಮ್ಮದ್ ಶೌಚಾಲಯಕ್ಕೆ ತೆರಳಿದ್ದು ನಂತರ ಹೊರಬಂದು ವಿಮಾನದ ಪ್ರಯಾಣಿಕರಲ್ಲದ ಕೃಷ್ಣ ಎಂಬವರ ಬಗ್ಗೆ ಸಿಬಂದಿ ಬಳಿ ವಿಚಾರಿಸಿದ್ದರು. ಅಸಂಬದ್ಧ ಪ್ರಶ್ನೆಗಳನ್ನು ಕೇಳಿ, ವಿಮಾನದ ಸಿಬ್ಬಂದಿ ವರ್ಗದವರಿಗೆ ತೊಂದರೆ ನೀಡಿದ್ದರು.
ವಿಮಾನದಲ್ಲಿ ಪರಿಚಾರಕ ಸಿಬ್ಬಂದಿ ಆತನ ಹತ್ತಿರವಿದ್ದರೂ ಪದೇ - ಪದೇ ಕಾಲಿಂಗ್ ಬಟನ್ ಪ್ರೆಸ್ ಮಾಡಿ ತೊಂದರೆ ಪಡಿಸಿದ್ದಾನೆ. ನಂತರ ತಾನು ವಿಮಾನದಲ್ಲಿದ್ದ ಲೈಫ್ ಜಾಕೆಟ್ ಅನ್ನು ತೆಗೆದು ಸಿಬ್ಬಂದಿಯವರ ಕೈಗೆ ನೀಡಿ, ವಿಮಾನ ಇಳಿದ ನಂತರ ಇದನ್ನು ಬಳಸುವುದಾಗಿ ತಿಳಿಸಿರುತ್ತಾನೆ. ವಿಮಾನ ಸಮುದ್ರದ ಮೇಲಿರುವಾಗ ತಾನು ವಿಮಾನದಿಂದ ಹೊರಗಿಳಿಯಬೇಕು, ಹಾರಬೇಕು ಎಂದು ಹೇಳಿ ತನ್ನ ಮತ್ತು ಇತರ ಪ್ರಯಾಣಿಕರ ಸುರಕ್ಷತೆಗೆ ಧಕ್ಕೆ ತರುವ ರೀತಿಯಲ್ಲಿ ವರ್ತಿಸಿರುತ್ತಾನೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ.
Dubai Mangalore flight passenger threatens crew of jumping from flight, case filed at Bajpe police station. The incident was reported on May 8th.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am