ಬ್ರೇಕಿಂಗ್ ನ್ಯೂಸ್
11-05-24 12:25 pm Mangalore Correspondent ಕರಾವಳಿ
ಮಂಗಳೂರು, ಮೇ.11: ಮಂಗಳೂರು ಮಹಾನಗರಕ್ಕೆ ನೀರು ಪೂರೈಸುವ ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ಎಂಟು ವರ್ಷದಲ್ಲೇ ಅತಿ ಕನಿಷ್ಠ ಮಟ್ಟಕ್ಕೆ ಇಳಿಕೆಯಾಗಿದೆ. ಡ್ಯಾಮ್ ನಲ್ಲಿ ಶುಕ್ರವಾರ ನೀರಿನ ಮಟ್ಟ 3.86 ಮೀಟರ್ ಗೆ ಇಳಿದಿದ್ದು ಮಳೆ ಬಾರದೇ ಇದ್ದರೆ ನೀರು ಪೂರೈಕೆ ಕಡಿತಗೊಳ್ಳುವ ಸಾಧ್ಯತೆಯಿದೆ.
ಮೇ ತಿಂಗಳ ಹೊತ್ತಿಗೆ ಪ್ರತಿ ವರ್ಷ ಒಂದೆರಡು ಬಾರಿ ಮುಂಗಾರು ಪೂರ್ವ ಮಳೆ ಬಂದು ನೀರಿನ ಮಟ್ಟ ಏರಿಕೆಯಾಗುತ್ತಿತ್ತು. ಈ ಬಾರಿ ಕೆಲವು ಕಡೆ ಮಳೆಯಾದರೂ ತುಂಬೆಯಲ್ಲಿ ನೀರು ಹೆಚ್ಚುವಷ್ಟು ಮಳೆ ಆಗಿಲ್ಲ. ಹೀಗಾಗಿ ಮಂಗಳೂರಿಗೆ ನೀರುಣಿಸಲು ಮಹಾನಗರ ಪಾಲಿಕೆ ಹೆಣಗಾಡುತ್ತಿದ್ದು ಕೆಳಭಾಗದ ಅಡ್ಯಾರ್ ನಲ್ಲಿ ಹೊಸತಾಗಿ ಮಾಡಿರುವ ಅಣೆಕಟ್ಟಿನಿಂದ ನೀರನ್ನು ಏಳು ಪಂಪ್ ಗಳ ಮೂಲಕ ಮೇಲಕ್ಕೆ ಎತ್ತಿ ಡ್ಯಾಮಿಗೆ ತುಂಬುವ ಪ್ರಯತ್ನ ಮಾಡುತ್ತಿದ್ದಾರೆ.
ಈ ಹಿಂದಿನ ದಾಖಲೆಗಳನ್ನು ನೋಡಿದರೆ, 2017ರಲ್ಲಿ ಮೇ 10ರಂದು ತುಂಬೆ ಡ್ಯಾಮ್ ನಲ್ಲಿ 4.84 ಮೀ., 2018ರಲ್ಲಿ 5.86 ಮೀಟರ್, 2019ರಲ್ಲಿ 4.14 ಮೀಟರ್, 2020ರಲ್ಲಿ 4.93 ಮೀಟರ್, 2021ರಲ್ಲಿ 6 ಮೀಟರ್, 2022 ರಲ್ಲಿ 6 ಮೀ., 2023 ರಲ್ಲಿ 3.88 ಮೀಟರ್, 2024 ರಲ್ಲಿ 3.86 ಮೀಟರ್ ಗೆ ನೀರಿನ ಮಟ್ಟ ಇಳಿಕೆಯಾಗಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಸಲ 0.2 ಮೀಟರ್ ನಷ್ಟು ಕಡಿಮೆಯಾಗಿದ್ದು ಮಳೆ ಬಾರದಿದ್ದರೆ ಕುಡಿಯುವ ನೀರಿಗೆ ತೊಂದರೆ ಎದುರಾಗಬಹುದು.
ಒಂದು ವಾರದಿಂದ ಮಂಗಳೂರಿಗೆ ಎರಡು ದಿನಕ್ಕೊಮ್ಮೆ ನೀರು ಪೂರೈಕೆ ಮಾಡಲಾಗುತ್ತಿದೆ. ಜೊತೆಗೆ, ನೀರು ತಲುಪದೇ ಇರುವ ಅಪಾರ್ಟ್ಮೆಂಟ್, ಹೊಟೇಲ್ ಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಡ್ಯಾಮ್ ನಲ್ಲಿ ಅಡಿಭಾಗದ ಮೂರು ಮೀಟರ್ ವರೆಗೆ ಕೆಸರು ತುಂಬಿಕೊಂಡಿರುವುದರಿಂದ ಬಿಸಿಲಿನ ಧಗೆಯಿಂದಾಗಿ ಇದಕ್ಕಿಂತ ಹೆಚ್ಚು ನೀರು ಕೆಳಗಿಳಿದರೆ ಪಂಪಿಂಗ್ ಕೂಡ ಕಷ್ಟವಾಗಬಹುದು. ಒಂದೆರಡು ವಾರ ನೀರನ್ನು ಅತ್ಯಂತ ಮಿತವಾಗಿ ಬಳಸಿ ಉಳಿಸಿಕೊಳ್ಳುವುದಷ್ಟೇ ಸದ್ಯಕ್ಕೆ ಉಳಿದಿರುವ ದಾರಿ.
The district administration and the Mangaluru City Corporation have decided to introduce water rationing in the city, as water levels in the city's only water source, the Thumbe reservoir, has fallen, officials have said.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am