ಬ್ರೇಕಿಂಗ್ ನ್ಯೂಸ್
11-05-24 12:25 pm Mangalore Correspondent ಕರಾವಳಿ
ಮಂಗಳೂರು, ಮೇ.11: ಮಂಗಳೂರು ಮಹಾನಗರಕ್ಕೆ ನೀರು ಪೂರೈಸುವ ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ಎಂಟು ವರ್ಷದಲ್ಲೇ ಅತಿ ಕನಿಷ್ಠ ಮಟ್ಟಕ್ಕೆ ಇಳಿಕೆಯಾಗಿದೆ. ಡ್ಯಾಮ್ ನಲ್ಲಿ ಶುಕ್ರವಾರ ನೀರಿನ ಮಟ್ಟ 3.86 ಮೀಟರ್ ಗೆ ಇಳಿದಿದ್ದು ಮಳೆ ಬಾರದೇ ಇದ್ದರೆ ನೀರು ಪೂರೈಕೆ ಕಡಿತಗೊಳ್ಳುವ ಸಾಧ್ಯತೆಯಿದೆ.
ಮೇ ತಿಂಗಳ ಹೊತ್ತಿಗೆ ಪ್ರತಿ ವರ್ಷ ಒಂದೆರಡು ಬಾರಿ ಮುಂಗಾರು ಪೂರ್ವ ಮಳೆ ಬಂದು ನೀರಿನ ಮಟ್ಟ ಏರಿಕೆಯಾಗುತ್ತಿತ್ತು. ಈ ಬಾರಿ ಕೆಲವು ಕಡೆ ಮಳೆಯಾದರೂ ತುಂಬೆಯಲ್ಲಿ ನೀರು ಹೆಚ್ಚುವಷ್ಟು ಮಳೆ ಆಗಿಲ್ಲ. ಹೀಗಾಗಿ ಮಂಗಳೂರಿಗೆ ನೀರುಣಿಸಲು ಮಹಾನಗರ ಪಾಲಿಕೆ ಹೆಣಗಾಡುತ್ತಿದ್ದು ಕೆಳಭಾಗದ ಅಡ್ಯಾರ್ ನಲ್ಲಿ ಹೊಸತಾಗಿ ಮಾಡಿರುವ ಅಣೆಕಟ್ಟಿನಿಂದ ನೀರನ್ನು ಏಳು ಪಂಪ್ ಗಳ ಮೂಲಕ ಮೇಲಕ್ಕೆ ಎತ್ತಿ ಡ್ಯಾಮಿಗೆ ತುಂಬುವ ಪ್ರಯತ್ನ ಮಾಡುತ್ತಿದ್ದಾರೆ.
ಈ ಹಿಂದಿನ ದಾಖಲೆಗಳನ್ನು ನೋಡಿದರೆ, 2017ರಲ್ಲಿ ಮೇ 10ರಂದು ತುಂಬೆ ಡ್ಯಾಮ್ ನಲ್ಲಿ 4.84 ಮೀ., 2018ರಲ್ಲಿ 5.86 ಮೀಟರ್, 2019ರಲ್ಲಿ 4.14 ಮೀಟರ್, 2020ರಲ್ಲಿ 4.93 ಮೀಟರ್, 2021ರಲ್ಲಿ 6 ಮೀಟರ್, 2022 ರಲ್ಲಿ 6 ಮೀ., 2023 ರಲ್ಲಿ 3.88 ಮೀಟರ್, 2024 ರಲ್ಲಿ 3.86 ಮೀಟರ್ ಗೆ ನೀರಿನ ಮಟ್ಟ ಇಳಿಕೆಯಾಗಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಸಲ 0.2 ಮೀಟರ್ ನಷ್ಟು ಕಡಿಮೆಯಾಗಿದ್ದು ಮಳೆ ಬಾರದಿದ್ದರೆ ಕುಡಿಯುವ ನೀರಿಗೆ ತೊಂದರೆ ಎದುರಾಗಬಹುದು.
ಒಂದು ವಾರದಿಂದ ಮಂಗಳೂರಿಗೆ ಎರಡು ದಿನಕ್ಕೊಮ್ಮೆ ನೀರು ಪೂರೈಕೆ ಮಾಡಲಾಗುತ್ತಿದೆ. ಜೊತೆಗೆ, ನೀರು ತಲುಪದೇ ಇರುವ ಅಪಾರ್ಟ್ಮೆಂಟ್, ಹೊಟೇಲ್ ಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಡ್ಯಾಮ್ ನಲ್ಲಿ ಅಡಿಭಾಗದ ಮೂರು ಮೀಟರ್ ವರೆಗೆ ಕೆಸರು ತುಂಬಿಕೊಂಡಿರುವುದರಿಂದ ಬಿಸಿಲಿನ ಧಗೆಯಿಂದಾಗಿ ಇದಕ್ಕಿಂತ ಹೆಚ್ಚು ನೀರು ಕೆಳಗಿಳಿದರೆ ಪಂಪಿಂಗ್ ಕೂಡ ಕಷ್ಟವಾಗಬಹುದು. ಒಂದೆರಡು ವಾರ ನೀರನ್ನು ಅತ್ಯಂತ ಮಿತವಾಗಿ ಬಳಸಿ ಉಳಿಸಿಕೊಳ್ಳುವುದಷ್ಟೇ ಸದ್ಯಕ್ಕೆ ಉಳಿದಿರುವ ದಾರಿ.
The district administration and the Mangaluru City Corporation have decided to introduce water rationing in the city, as water levels in the city's only water source, the Thumbe reservoir, has fallen, officials have said.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm