ಬ್ರೇಕಿಂಗ್ ನ್ಯೂಸ್
11-05-24 12:25 pm Mangalore Correspondent ಕರಾವಳಿ
ಮಂಗಳೂರು, ಮೇ.11: ಮಂಗಳೂರು ಮಹಾನಗರಕ್ಕೆ ನೀರು ಪೂರೈಸುವ ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ಎಂಟು ವರ್ಷದಲ್ಲೇ ಅತಿ ಕನಿಷ್ಠ ಮಟ್ಟಕ್ಕೆ ಇಳಿಕೆಯಾಗಿದೆ. ಡ್ಯಾಮ್ ನಲ್ಲಿ ಶುಕ್ರವಾರ ನೀರಿನ ಮಟ್ಟ 3.86 ಮೀಟರ್ ಗೆ ಇಳಿದಿದ್ದು ಮಳೆ ಬಾರದೇ ಇದ್ದರೆ ನೀರು ಪೂರೈಕೆ ಕಡಿತಗೊಳ್ಳುವ ಸಾಧ್ಯತೆಯಿದೆ.
ಮೇ ತಿಂಗಳ ಹೊತ್ತಿಗೆ ಪ್ರತಿ ವರ್ಷ ಒಂದೆರಡು ಬಾರಿ ಮುಂಗಾರು ಪೂರ್ವ ಮಳೆ ಬಂದು ನೀರಿನ ಮಟ್ಟ ಏರಿಕೆಯಾಗುತ್ತಿತ್ತು. ಈ ಬಾರಿ ಕೆಲವು ಕಡೆ ಮಳೆಯಾದರೂ ತುಂಬೆಯಲ್ಲಿ ನೀರು ಹೆಚ್ಚುವಷ್ಟು ಮಳೆ ಆಗಿಲ್ಲ. ಹೀಗಾಗಿ ಮಂಗಳೂರಿಗೆ ನೀರುಣಿಸಲು ಮಹಾನಗರ ಪಾಲಿಕೆ ಹೆಣಗಾಡುತ್ತಿದ್ದು ಕೆಳಭಾಗದ ಅಡ್ಯಾರ್ ನಲ್ಲಿ ಹೊಸತಾಗಿ ಮಾಡಿರುವ ಅಣೆಕಟ್ಟಿನಿಂದ ನೀರನ್ನು ಏಳು ಪಂಪ್ ಗಳ ಮೂಲಕ ಮೇಲಕ್ಕೆ ಎತ್ತಿ ಡ್ಯಾಮಿಗೆ ತುಂಬುವ ಪ್ರಯತ್ನ ಮಾಡುತ್ತಿದ್ದಾರೆ.
ಈ ಹಿಂದಿನ ದಾಖಲೆಗಳನ್ನು ನೋಡಿದರೆ, 2017ರಲ್ಲಿ ಮೇ 10ರಂದು ತುಂಬೆ ಡ್ಯಾಮ್ ನಲ್ಲಿ 4.84 ಮೀ., 2018ರಲ್ಲಿ 5.86 ಮೀಟರ್, 2019ರಲ್ಲಿ 4.14 ಮೀಟರ್, 2020ರಲ್ಲಿ 4.93 ಮೀಟರ್, 2021ರಲ್ಲಿ 6 ಮೀಟರ್, 2022 ರಲ್ಲಿ 6 ಮೀ., 2023 ರಲ್ಲಿ 3.88 ಮೀಟರ್, 2024 ರಲ್ಲಿ 3.86 ಮೀಟರ್ ಗೆ ನೀರಿನ ಮಟ್ಟ ಇಳಿಕೆಯಾಗಿದೆ. ಕಳೆದ ಬಾರಿಗೆ ಹೋಲಿಸಿದರೆ ಈ ಸಲ 0.2 ಮೀಟರ್ ನಷ್ಟು ಕಡಿಮೆಯಾಗಿದ್ದು ಮಳೆ ಬಾರದಿದ್ದರೆ ಕುಡಿಯುವ ನೀರಿಗೆ ತೊಂದರೆ ಎದುರಾಗಬಹುದು.
ಒಂದು ವಾರದಿಂದ ಮಂಗಳೂರಿಗೆ ಎರಡು ದಿನಕ್ಕೊಮ್ಮೆ ನೀರು ಪೂರೈಕೆ ಮಾಡಲಾಗುತ್ತಿದೆ. ಜೊತೆಗೆ, ನೀರು ತಲುಪದೇ ಇರುವ ಅಪಾರ್ಟ್ಮೆಂಟ್, ಹೊಟೇಲ್ ಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಡ್ಯಾಮ್ ನಲ್ಲಿ ಅಡಿಭಾಗದ ಮೂರು ಮೀಟರ್ ವರೆಗೆ ಕೆಸರು ತುಂಬಿಕೊಂಡಿರುವುದರಿಂದ ಬಿಸಿಲಿನ ಧಗೆಯಿಂದಾಗಿ ಇದಕ್ಕಿಂತ ಹೆಚ್ಚು ನೀರು ಕೆಳಗಿಳಿದರೆ ಪಂಪಿಂಗ್ ಕೂಡ ಕಷ್ಟವಾಗಬಹುದು. ಒಂದೆರಡು ವಾರ ನೀರನ್ನು ಅತ್ಯಂತ ಮಿತವಾಗಿ ಬಳಸಿ ಉಳಿಸಿಕೊಳ್ಳುವುದಷ್ಟೇ ಸದ್ಯಕ್ಕೆ ಉಳಿದಿರುವ ದಾರಿ.
The district administration and the Mangaluru City Corporation have decided to introduce water rationing in the city, as water levels in the city's only water source, the Thumbe reservoir, has fallen, officials have said.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm