ಬ್ರೇಕಿಂಗ್ ನ್ಯೂಸ್
13-05-24 07:27 pm Udupi Correspondent ಕರಾವಳಿ
ಉಡುಪಿ, ಮೇ 13: ವಿಧಾನ ಪರಿಷತ್ ಚುನಾವಣೆಯಲ್ಲಿ ಟಿಕೆಟ್ ಸಿಗದ ಬೇಸರದಲ್ಲಿದ್ದ ಮಾಜಿ ಶಾಸಕ ರಘುಪತಿ ಭಟ್ ಬಂಡಾಯದ ಬಾವುಟ ಹಾರಿಸಿದ್ದಾರೆ. ನಾನು ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ. ಬಿಜೆಪಿ ಕಾರ್ಯಕರ್ತರ ಧ್ವನಿಯಾಗಿ ಕೆಲಸ ಮಾಡಲಿದ್ದೇನೆ ಎಂದು ಮಾಜಿ ಶಾಸಕ ರಘುಪತಿ ಭಟ್ ಘೋಷಣೆ ಮಾಡಿದ್ದಾರೆ.
ಬಿಜೆಪಿ ಪಕ್ಷ ಉಚ್ಛಾಟನೆ ಮಾಡಿದರೂ ನಾನು ಬಿಜೆಪಿ ಕಾರ್ಯಕರ್ತ. ನನಗೆ ಬಿ ಫಾರಂ ಕೊಡಿ, ಭೌಗೋಳಿಕವಾಗಿ ಕರಾವಳಿಗೆ ಮಾನ್ಯತೆ ಕೊಡಿ. ಕರಾವಳಿಯನ್ನು ಏನು ಮಾಡಿದರೂ ನಡೆಯುತ್ತದೆ ಎಂಬ ಭಾವನೆ ನಿಮ್ಮಲ್ಲಿದ್ದರೆ ಬಿಟ್ಟುಬಿಡಿ. ಟಿಕೆಟ್ ಘೋಷಣೆ ಬದಲಾವಣೆ ಮಾಡಿ, ನನಗೆ ಅವಕಾಶ ಕೊಡಲಿ ಎಂದು ಭಟ್ ಹೇಳಿದ್ದಾರೆ.
ನಾನು ಮೇ 16ರಂದು ನಾಮಪತ್ರ ಸಲ್ಲಿಕೆ ಮಾಡುತ್ತೇನೆ. ಪಕ್ಷದ ಕಾರ್ಯಕರ್ತರಿಗೆ ಬಹಳ ನೋವಾಗಿದೆ, ಒತ್ತಾಯ ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತರ ಪ್ರತಿನಿಧಿಯಾಗಿ ಸ್ಪರ್ಧೆ ಮಾಡ್ತೇನೆ. ಇದು ಬಂಡಾಯವಲ್ಲ, ಪಕ್ಷದ ವಿರುದ್ಧ ಸ್ಪರ್ಧೆ ಮಾಡುತ್ತಿಲ್ಲ. ಕರಾವಳಿ ಭಾಗದ ಧ್ವನಿಯಾಗಿ, ಕೆಲಸ ಮಾಡಬೇಕೆಂದು ನಿರ್ಧರಿಸಿದ್ದೇನೆ.
ಕರಾವಳಿ ಭಾಗವನ್ನು ಬಿಜೆಪಿ ನಿರ್ಲಕ್ಷ್ಯ ಮಾಡಿದೆ. ನೈರುತ್ಯ ಪದವೀಧರ ಕ್ಷೇತ್ರಕ್ಕೆ ಆಕಾಂಕ್ಷಿಯಾಗಿ ಕೆಲಸ ಮಾಡಿದ್ದೆ. ಕಳೆದ ಚುನಾವಣೆಯಲ್ಲಿ ಮಾಹಿತಿ ನೀಡದೆ ಶಾಸಕನಾಗಿದ್ದ ನನಗೆ ಟಿಕೆಟ್ ತಪ್ಪಿಸಲಾಗಿತ್ತು. ರಾಜಕೀಯ ನಿವೃತ್ತಿ ತೆಗೆದುಕೊಳ್ಳುವ ಆಲೋಚನೆ ಮಾಡಿದ್ದೆ. ಆರ್ ಎಸ್ ಎಸ್, ಪಕ್ಷದ ನಾಯಕರ ಬಳಿ ನಿವೃತ್ತಿ ಬಗ್ಗೆ ಹೇಳಿದ್ದೆ. ಪದವೀಧರ ಕ್ಷೇತ್ರದ ಬೇಡಿಕೆ ಇಟ್ಟಾಗ ಭರವಸೆಯ ಮಾತುಗಳನ್ನಾಡಿದ್ದರು.
ಎಲ್ಲಾ ಸ್ತರದ ನಾಯಕರಲ್ಲಿ ಪರಿಷತ್ತಿನ ಟಿಕೆಟ್ ಕೇಳಿದ್ದೆ. ದಕ್ಷಿಣ ಕನ್ನಡ, ಉಡುಪಿಯಲ್ಲಿ 38 ಸಾವಿರ ಮತದಾರರ ಸೇರ್ಪಡೆ ಮಾಡಿದ್ದೇವೆ. ಟಿಕೆಟ್ ಈಗ ಶಿವಮೊಗ್ಗದ ಡಾ. ಧನಂಜಯ ಸರ್ಜಿಗೆ ಘೋಷಣೆಯಾಗಿದೆ. ಒಂದು ವರ್ಷದ ಹಿಂದೆ ಪಕ್ಷಕ್ಕೆ ಬಂದ ಹೊಸಬರಿಗೆ ಟಿಕೆಟ್ ಕೊಡಲಾಗಿದೆ. ನನ್ನ ಮನಸ್ಸಿನ ಬೇಸರ ಫೇಸ್ ಬುಕ್ ನಲ್ಲಿ ಹೇಳಿಕೊಂಡಿದ್ದೆ. ಧನಂಜಯ ಸರ್ಜಿ ಸಂಘ ಪರಿವಾರದ ವಿರುದ್ಧ ಕೆಲಸ ಮಾಡಿದವರು. ಯಾವ ಕಾರಣಕ್ಕೆ ಟಿಕೆಟ್ ಕೊಟ್ಟಿದ್ದೀರಿ ಎಂದು ಯಾರೂ ಸ್ಪಷ್ಟಪಡಿಸಿಲ್ಲ. ಜಾತಿ, ಹಣದ ಬಲದಿಂದ ನೈರುತ್ಯ ಪದವೀಧರ ಕ್ಷೇತ್ರದ ಟಿಕೆಟ್ ಹಂಚಿಕೆಯಾಗಿದೆ.
ಬಸವರಾಜ ಬೊಮ್ಮಾಯಿ, ಅಶೋಕ್, ನಳಿನ್ ಕಟೀಲ್ ಇದ್ದ ಸಭೆಯಲ್ಲೇ ಕ್ಷೇತ್ರದ ಬೇಡಿಕೆ ಇಟ್ಟಿದ್ದೆ. ಬಿಎಸ್ ಯಡಿಯೂರಪ್ಪ, ವಿಜಯೇಂದ್ರ ಅವರಿಗೂ ಮಾಹಿತಿ ನೀಡಿದ್ದೆ. ಸಭೆಯಲ್ಲಿ ನನಗೆ ಸೂಕ್ತ ಸ್ಥಾನಮಾನದ ಭರವಸೆ ನೀಡಲಾಗಿತ್ತು. ಪಕ್ಷದಿಂದ ಆದ ನೋವುಗಳನ್ನೆಲ್ಲಾ ಹೇಳಿದ್ದೇನೆ. ಯಾರು ನನ್ನ ಟಿಕೆಟ್ ತಪ್ಪಿಸಿದ್ದಾರೋ ಗೊತ್ತಿಲ್ಲ. ಇದು ಚಿಹ್ನೆ ಇಲ್ಲದ ಚುನಾವಣೆ. ಹಾಗಾಗಿ ನನ್ನ ಸ್ಪರ್ಧೆಯಿಂದ ಪಕ್ಷಕ್ಕೆ ತೊಂದರೆ ಆಗುವುದಿಲ್ಲ. ಈ ಭಾಗದ ಕಾರ್ಯಕರ್ತರು, ಮತದಾರರ ಪರವಾಗಿ ಸ್ಪರ್ಧಿಸುತ್ತೇನೆ ಎಂದು ಹೇಳಿದ್ದಾರೆ.
Udupi former MLA Raghupati bhat quits BJP stands independent. I am troubled by the party's decision" said former MLA Raghupati Bhat after the announcement of BJP tickets of teachers and graduate constituencies.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am