ಬ್ರೇಕಿಂಗ್ ನ್ಯೂಸ್
23-05-24 07:02 pm HK NEWS ಕರಾವಳಿ
ಉಡುಪಿ, ಮೇ 23: 24 ಗಂಟೆಯೊಳಗಾಗಿ ರಘುಪತಿ ಭಟ್ ಅವರು ವಿಧಾನಪರಿಷತ್ ಚುನಾವಣಾ ಕಣದಿಂದ ನಿವೃತ್ತರಾಗದಿದ್ದರೆ ಪಕ್ಷದಿಂದ ಶಿಸ್ತುಕ್ರಮ ಅನಿವಾರ್ಯ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಘುಪತಿ ಭಟ್ ಅವರು ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಚುನಾವಣಾ ಕಣಕ್ಕೆ ಇಳಿದಿದ್ದಾರೆ. ಅವರ ಜೊತೆ ನಾನು ಮಾತನಾಡಿದ್ದೇನೆ. ಪಕ್ಷದ ಅಧಿಕೃತ ಅಭ್ಯರ್ಥಿಯ ಗೆಲುವಿಗೆ ಏನು ಬೇಕೋ ಅದನ್ನೆಲ್ಲ ನಾವು ಪಕ್ಷದ ವತಿಯಿಂದ ಮಾಡುತ್ತೇವೆ. ರಘುಪತಿ ಭಟ್ ಆಗಲಿ ಯಾರೇ ಆಗಲಿ, ಪಕ್ಷಕ್ಕೆ ಮುಜುಗರ ತರುವ ಕೆಲಸವನ್ನು ಯಾರೇ ಮಾಡಿದರೂ ಪಕ್ಷ ಶಿಸ್ತುಕ್ರಮ ತೆಗೆದುಕೊಳ್ಳುತ್ತದೆ. ಅವರಿಗೆ ಇನ್ನೂ ಕಾಲಾವಕಾಶ ಇದೆ, ಅವರು ಕಣದಿಂದ ನಿವೃತ್ತಿ ಆಗಬೇಕು ಎಂದು ಒತ್ತಾಯಿಸಿದ್ದಾರೆ.
ಪಕ್ಷದಿಂದ ರಘುಪತಿ ಭಟ್ ಉಚ್ಚಾಟನೆಗೆ ತೀವ್ರ ಆಗ್ರಹ ;
ಬಿಜೆಪಿ ಅಭ್ಯರ್ಥಿಯ ವಿರುದ್ಧ ಬಂಡಾಯ ಸಾರಿರುವ ಬಿಜೆಪಿಯ ಮಾಜಿ ಶಾಸಕರಾದ ರಘುಪತಿ ಭಟ್ ಅವರನ್ನು ಪಕ್ಷದಿಂದ ಕೂಡಲೇ ಉಚ್ಚಾಟಿಸುವಂತೆ ಜಿಲ್ಲಾ ಬಿಜೆಪಿ ಮುಖಂಡರು ಪಕ್ಷದ ರಾಜ್ಯ ಸಮಿತಿಗೆ ಶಿಫಾರಸು ಮಾಡಿದೆ.
ಪಕ್ಷದ ವಿರುದ್ಧ ಬಂಡಾಯ ಎದ್ದಿರುವ ಅವರು ಬಿಜೆಪಿ ಕಾರ್ಯಕರ್ತರ ಅಭ್ಯರ್ಥಿ ಎಂದು ಬಿಂಬಿಸಿಕೊಳ್ಳುತ್ತಿರುವುದರಿಂದ ಕಾರ್ಯಕರ್ತರಲ್ಲಿ ಗೊಂದಲ ಸೃಷ್ಟಿಯಾಗಿದೆ. ಮತದಾರರಲ್ಲೂ ಗೊಂದಲ ಸೃಷ್ಟಿಸುವುದು ಸರಿಯಲ್ಲ. ಹಾಗಾಗಿ ಅವರನ್ನು ಉಚ್ಛಾಟಿಸುವಂತೆ ಶಿಫಾರಸು ಮಾಡಲಾಗಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್
ಬಿಜೆಪಿ ವಿರುದ್ಧ ರಘುಪತಿ ಭಟ್ ಬಹಿರಂಗ ಅಸಮಾಧಾನ ;
ಶಿಕ್ಷಕರ ಕ್ಷೇತ್ರದ ಟಿಕೆಟ್ ಘೋಷಣೆಯಾಗುತ್ತಿದ್ದಂತೆ ರಘುಪತಿ ಭಟ್ ಬಹಿರಂಗವಾಗಿ ಬಿಜೆಪಿ ವಿರುದ್ಧ ಅಸಮಾಧಾನ ಹೊರ ಹಾಕಿದ್ದರು. ಶಿಕ್ಷಕರ ಕ್ಷೇತ್ರದ ಟಿಕೆಟ್ ಜೆಡಿಎಸ್ ಪಕ್ಷದ ಚಿಕ್ಕಮಗಳೂರು ಅಭ್ಯರ್ಥಿಗೆ ನೀಡಿ ಪದವೀಧರ ಕ್ಷೇತ್ರದ ಟಿಕೆಟ್ ಶಿವಮೊಗ್ಗದ ಬಿಜೆಪಿ ಅಭ್ಯರ್ಥಿಗೆ ನೀಡಲಾಗಿದೆ. ಇದು ನಾಲ್ಕು ದಶಕಗಳಿಂದ ಬಿಜೆಪಿ ಸಂಪ್ರದಾಯ ಮುರಿದು ಕರಾವಳಿ ಭಾಗಕ್ಕೆ ನೀಡುತ್ತಿದ್ದ ಶಿಕ್ಷಕರ ಕ್ಷೇತ್ರದ ಟಿಕೆಟ್ ನೀಡದೆ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಭಾಗದ ವಿದ್ಯಾವಂತ, ಪ್ರಜ್ಞಾವಂತ ಮತದಾರರಿಗೆ ಅನ್ಯಾಯ ಮಾಡಿದ ಹಾಗಾಗಿದೆ.
1994 ರಿಂದಲೂ ಭಾರತೀಯ ಜನತಾ ಪಾರ್ಟಿಯ ಸಕ್ರಿಯ ಕಾರ್ಯಕರ್ತನಾಗಿ, ಪದಾಧಿಕಾರಿಯಾಗಿ ವಿವಿಧ ಸ್ಥರಗಳಲ್ಲಿ ಕೆಲಸ ಮಾಡಿದ್ದೇನೆ. ವಿಧಾನ ಸಭೆಗೆ ಸ್ಪರ್ಧಿಸಿದ 3 ಬಾರಿಯೂ ಗೆದ್ದಿರುತ್ತೇನೆ. ಆದರೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ನನಗೆ ಯಾವುದೇ ಮಾಹಿತಿ ನೀಡದೆ ನನ್ನನ್ನು ಬದಲಾಯಿಸಲಾಯಿತು. ಈಗ ವಿಧಾನ ಪರಿಷತ್ ಟಿಕೆಟ್ ಘೋಷಣೆಯಾಗಿದೆ.
ಆದರೆ ನಾಲ್ಕು ದಶಕಗಳಿಂದ ಬಿಜೆಪಿ ಸಂಪ್ರದಾಯ ಮುರಿದು ಕರಾವಳಿ ಭಾಗಕ್ಕೆ ನೀಡುತ್ತಿದ್ದ ಶಿಕ್ಷಕರ ಕ್ಷೇತ್ರ ನೀಡದೆ ಮಾಡಿದ ಅನ್ಯಾಯಕ್ಕೆ ನ್ಯಾಯ ಕೊಡುವವರು ಯಾರು? ಪಕ್ಷ ತೆಗೆದುಕೊಂಡಿರುವ ಈ ನಿಲುವಿಂದ ವಿಚಲಿತನಾಗಿದ್ದೇನೆ. ಇದು ಪಕ್ಷದ ಪ್ರತಿಯೊಬ್ಬ ಸಾಮಾನ್ಯ ಕಾರ್ಯಕರ್ತ ಮತ್ತು ಪಕ್ಷದ ಅಭಿಮಾನಿಗಳು ಚಿಂತಿಸುವ ಕಾಲ ಎಂದು ರಘುಪತಿ ಭಟ್ ಬಿಜೆಪಿ ವಿರುದ್ಧ ಬೇಸರ ಹೊರಹಾಕಿದ್ದರು.
Sunil kumar warns of action against candidate Raghupathi Bhat if he doesnt quit vidhan Parishad elections
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am