ಬ್ರೇಕಿಂಗ್ ನ್ಯೂಸ್
31-05-24 10:49 pm Mangalore Correspondent ಕರಾವಳಿ
ಮಂಗಳೂರು, ಮೇ 31: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಮೇಲೆ ಹಿಂದುತ್ವವಾದಿ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರನ್ನು ದಮನಿಸುವ ಕಾರ್ಯ ನಡೆಯುತ್ತಿದೆ. ಕಾಂಗ್ರೆಸ್ ನೀತಿ ಇದೇ ರೀತಿ ಮುಂದುವರಿದರೆ ರಾಜ್ಯಾದ್ಯಂತ ಹೋರಾಟ ರೂಪಿಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ರಾಜ್ಯ ಸರಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಶಾಂತಿ ಕಾಪಾಡಬೇಕಾಗಿರುವ ಸರಕಾರ ಮತ್ತು ಪೊಲೀಸ್ ಇಲಾಖೆ ಶಾಂತಿ ಕದಡುವ ಕೆಲಸ ಮಾಡುತ್ತಿದೆ. ಪೊಲೀಸರು ಸ್ವಾತಂತ್ರ್ಯ ಕಳಕೊಂಡು ಯಾರದ್ದೋ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ರಸ್ತೆಯಲ್ಲಿ ನಮಾಜ್ ಮಾಡಿದ್ದಕ್ಕೆ ಕೇಸು ದಾಖಲಿಸಿದ್ದ ಅದೇ ಪೊಲೀಸರು ಮೇಲಿನಿಂದ ಒತ್ತಡ ಬರುತ್ತಲೇ ಕೇಸು ಹಿಂಪಡೆಯುತ್ತಾರೆ. ಅಲ್ಲದೆ, ಈ ಬಗ್ಗೆ ಕ್ರಮಕ್ಕೆ ಆಗ್ರಹಿಸಿದ್ದ ಹಿಂದು ಸಂಘಟನೆ ಮುಖಂಡ ಶರಣ್ ಪಂಪ್ವೆಲ್ ಜಾಮೀನು ರಹಿತ ಕೇಸು ದಾಖಲಿಸಿದ್ದಾರೆ. ಕೇಸ್ ದಾಖಲಿಸಿರುವುದನ್ನು ಕೂಡಲೇ ರದ್ದುಗೊಳಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಯುವ ಜನರನ್ನು ಒಗ್ಗೂಡಿಸಿ, ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಪೊಲೀಸರು ಕಾಂಗ್ರೆಸ್ ನಾಯಕರ ಒತ್ತಡದಿಂದ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದವರು ಮನವಿ ಸಲ್ಲಿಸಿದ ಬೆನ್ನಲ್ಲೇ ನಮಾಜ್ ಪ್ರಕರಣಕ್ಕೆ ಸಂಬಂಧಿಸಿ ಇಲಾಖೆ ಬಿ ರಿಪೋರ್ಟ್ ಸಲ್ಲಿಸಿದೆ. ಆದರೆ, ಈ ರೀತಿ ರಸ್ತೆ ಮೇಲೆ ನಮಾಜ್ ಮಾಡಿರುವುದು ತಪ್ಪು, ಇದೇ ರೀತಿ ಮುಂದುವರಿದಲ್ಲಿ ಹನುಮಾನ್ ಚಾಲೀಸಾ ಪಠಿಸುವುದಾಗಿ ಹೇಳಿರುವ ಶರಣ್ ಪಂಪ್ವೆಲ್ ಮೇಲೆ ಪ್ರಕರಣ ದಾಖಲಿಸಿದ್ದಾರೆ. ರಸ್ತೆಯಲ್ಲಿ ನಮಾಜ್ ಕುರಿತಂತೆ ಮಸೀದಿ ಕಾರ್ಯದರ್ಶಿಯೇ ಇದು ಸರಿಯಲ್ಲ ಎಂದು ಒಪ್ಪಿಕೊಂಡಿದ್ದಾರೆ. ಇದೀಗ ಕೇಸು ಹಿಂಪಡೆದು ಆ ರೀತಿ ಮಾಡಿದ್ದು ಸರಿ ಎಂದು ಪೊಲೀಸರು ಪರೋಕ್ಷವಾಗಿ ಒಪ್ಪಿಕೊಂಡ ರೀತಿ ಆಗಿದೆ. ಇದರಿಂದ ಪೊಲೀಸರು ಅಪನಂಬಿಕೆ ಎದುರಿಸುವಂತಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಪಕ್ಷದ ಮುಖಂಡರಾದ ನಿತಿನ್ ಕುಮಾರ್, ಜಗದೀಶ್ ಶೇಣವ, ಪ್ರೇಮಾನಂದ ಶೆಟ್ಟಿ, ಅರುಣ್ ಜಿ. ಶೇಟ್, ನಂದನ್ ಮಲ್ಯ ಉಪಸ್ಥಿತರಿದ್ದರು.
Namaz in road mangalore, BJP Satish Kumapla slams police department, congress government is trying to disturb peace in Karnataka he added.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
18-09-26 07:30 pm
HK News Staffer
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
CM Dk Shivakumar, Mangalore: ಕದ್ರಿ ದೇವಸ್ಥಾನದಲ...
18-09-26 03:39 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am