ಬ್ರೇಕಿಂಗ್ ನ್ಯೂಸ್
03-06-24 09:37 pm Mangalore Correspondent ಕರಾವಳಿ
ಪುತ್ತೂರು, ಜೂನ್ 3: ಸೋಮವಾರ ಸಂಜೆ ಪುತ್ತೂರು ಪೇಟೆಯಲ್ಲಿ ಮೇಘಸ್ಫೋಟ ಆದ ರೀತಿ ಮಳೆಯಾಗಿದೆ. ಸಂಜೆ 4 ಗಂಟೆಯಿಂದ 45 ನಿಮಿಷ ಕಾಲ ಭಾರೀ ಮಳೆ ಸುರಿದಿದ್ದು ಪುತ್ತೂರು ಪೇಟೆ ಇಡೀ ಮಳೆನೀರಿನಲ್ಲಿ ತೋಯ್ದು ಹೋಗಿದೆ. ಪುತ್ತೂರು ಪೇಟೆಯ ಜನರ ಪ್ರಕಾರ, ಇತ್ತೀಚಿನ ವರ್ಷಗಳಲ್ಲಿ ಕಂಡರಿಯದ ರೀತಿ ಮಳೆ ಆಗಿದ್ಯಂತೆ.
ಒಂದೇ ಸಮನೆ ಧೋ ಎಂದು ಮಳೆ ಸುರಿದಿದ್ದು, ರಸ್ತೆಯಲ್ಲಿ ನೀರು ನದಿಯಂತೆ ತುಂಬಿಕೊಂಡಿದೆ. ದರ್ಭೆಯಲ್ಲಿ ಆಟೋ ರಿಕ್ಷಾಗಳು, ದ್ವಿಚಕ್ರ ವಾಹನಗಳು ಸಾಗಲು ಸಾಧ್ಯವಾಗದೆ ನಿಂತುಬಿಟ್ಟಿದ್ದವು. ಕೋರ್ಟ್ ರೋಡಿನಲ್ಲಿ ತಗ್ಗಿನ ಪ್ರದೇಶದಲ್ಲಿದ್ದ ಜುವೆಲ್ಲರಿ ಅಂಗಡಿಗೆ ನೀರು ನುಗ್ಗಿದ್ದು ಮೊಣಕಾಲು ಮುಳುಗುವಷ್ಟು ಮಳೆ ನೀರು ಶೇಖರಗೊಂಡಿತ್ತು.




ಕೋರ್ಟ್ ರೋಡ್, ಮಹಾಲಿಂಗೇಶ್ವರ ದೇವಸ್ಥಾನ ಆಸುಪಾಸಿನಲ್ಲಿ ತಗ್ಗಿನ ಜಾಗದ ಹಲವಾರು ಅಂಗಡಿಗಳಿಗೆ ನೀರು ನುಗ್ಗಿದೆ. ದೇವಸ್ಥಾನ ಪರಿಸರದಲ್ಲಿ ಜನರ ಸಂಚಾರಕ್ಕೆ ತೊಡಕಾಗಿದೆ. ಆದರೆ ಅರ್ಧ ಗಂಟೆಯ ಮಳೆಯ ಬಳಿಕ ಮಳೆಯೇ ಬಂದಿಲ್ಲವೇನೋ ಎನ್ನುವಂತೆ ಹಠಾತ್ ನಿಂತುಬಿಟ್ಟಿದೆ. ಪುತ್ತೂರು ಆಸುಪಾಸಿನಲ್ಲಿ ಅಷ್ಟು ಮಳೆಯಾಗಿಲ್ಲ. ಒಂದೇ ಕಡೆ ಮಳೆಯಾಗಿರುವುದು ಭಾರೀ ವಿಶೇಷ ಅಂತ ಜನರು ಮಾತನಾಡಿಕೊಳ್ಳುತ್ತಿದ್ದಾರೆ.
ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಡೀ ದಿನ ಮೋಡ ಕವಿದ ವಾತಾವರಣ ಇತ್ತು. ಸಂಜೆಯ ಹೊತ್ತಿಗೆ ಕಪ್ಪಗಿನ ಮೋಡ ಆವರಿಸಿದ್ದರಿಂದ ಭಾರೀ ಮಳೆಯಾಗುತ್ತೆ ಅನ್ನುವ ಸುಳಿವು ನೀಡಿತ್ತು. ಆದರೆ ಮಂಗಳೂರಿನಲ್ಲಿ ಹನಿ ಹನಿ ಸುರಿದಿದ್ದು ನೆಲ ಒದ್ದೆಯಾಗುವಷ್ಟು ಮಾತ್ರ ಮಳೆಯಾಗಿದೆ.
Heavy rains in Puttur causes havoc, water enters shops, most of the shops were filled with shops causing huge damage to many business people.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 10:36 pm
HK News Staffer
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm
ಕಾರ್ಕಳದಲ್ಲಿ ಪೊಲೀಸರ ಮೇಲೆ ಕಾರು ಹರಿಸಲು ಯತ್ನ ; ಆರ...
29-03-26 06:03 pm
ಉಜಿರೆಯಲ್ಲಿ ಬೈಕ್ ಸ್ಕೀಡ್ ಆಗಿ ಡಿವೈಡರ್ ಡಿಕ್ಕಿ ; ತ...
29-03-26 12:41 pm