ಬ್ರೇಕಿಂಗ್ ನ್ಯೂಸ್
03-06-24 09:37 pm Mangalore Correspondent ಕರಾವಳಿ
ಪುತ್ತೂರು, ಜೂನ್ 3: ಸೋಮವಾರ ಸಂಜೆ ಪುತ್ತೂರು ಪೇಟೆಯಲ್ಲಿ ಮೇಘಸ್ಫೋಟ ಆದ ರೀತಿ ಮಳೆಯಾಗಿದೆ. ಸಂಜೆ 4 ಗಂಟೆಯಿಂದ 45 ನಿಮಿಷ ಕಾಲ ಭಾರೀ ಮಳೆ ಸುರಿದಿದ್ದು ಪುತ್ತೂರು ಪೇಟೆ ಇಡೀ ಮಳೆನೀರಿನಲ್ಲಿ ತೋಯ್ದು ಹೋಗಿದೆ. ಪುತ್ತೂರು ಪೇಟೆಯ ಜನರ ಪ್ರಕಾರ, ಇತ್ತೀಚಿನ ವರ್ಷಗಳಲ್ಲಿ ಕಂಡರಿಯದ ರೀತಿ ಮಳೆ ಆಗಿದ್ಯಂತೆ.
ಒಂದೇ ಸಮನೆ ಧೋ ಎಂದು ಮಳೆ ಸುರಿದಿದ್ದು, ರಸ್ತೆಯಲ್ಲಿ ನೀರು ನದಿಯಂತೆ ತುಂಬಿಕೊಂಡಿದೆ. ದರ್ಭೆಯಲ್ಲಿ ಆಟೋ ರಿಕ್ಷಾಗಳು, ದ್ವಿಚಕ್ರ ವಾಹನಗಳು ಸಾಗಲು ಸಾಧ್ಯವಾಗದೆ ನಿಂತುಬಿಟ್ಟಿದ್ದವು. ಕೋರ್ಟ್ ರೋಡಿನಲ್ಲಿ ತಗ್ಗಿನ ಪ್ರದೇಶದಲ್ಲಿದ್ದ ಜುವೆಲ್ಲರಿ ಅಂಗಡಿಗೆ ನೀರು ನುಗ್ಗಿದ್ದು ಮೊಣಕಾಲು ಮುಳುಗುವಷ್ಟು ಮಳೆ ನೀರು ಶೇಖರಗೊಂಡಿತ್ತು.




ಕೋರ್ಟ್ ರೋಡ್, ಮಹಾಲಿಂಗೇಶ್ವರ ದೇವಸ್ಥಾನ ಆಸುಪಾಸಿನಲ್ಲಿ ತಗ್ಗಿನ ಜಾಗದ ಹಲವಾರು ಅಂಗಡಿಗಳಿಗೆ ನೀರು ನುಗ್ಗಿದೆ. ದೇವಸ್ಥಾನ ಪರಿಸರದಲ್ಲಿ ಜನರ ಸಂಚಾರಕ್ಕೆ ತೊಡಕಾಗಿದೆ. ಆದರೆ ಅರ್ಧ ಗಂಟೆಯ ಮಳೆಯ ಬಳಿಕ ಮಳೆಯೇ ಬಂದಿಲ್ಲವೇನೋ ಎನ್ನುವಂತೆ ಹಠಾತ್ ನಿಂತುಬಿಟ್ಟಿದೆ. ಪುತ್ತೂರು ಆಸುಪಾಸಿನಲ್ಲಿ ಅಷ್ಟು ಮಳೆಯಾಗಿಲ್ಲ. ಒಂದೇ ಕಡೆ ಮಳೆಯಾಗಿರುವುದು ಭಾರೀ ವಿಶೇಷ ಅಂತ ಜನರು ಮಾತನಾಡಿಕೊಳ್ಳುತ್ತಿದ್ದಾರೆ.
ಮಂಗಳೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇಡೀ ದಿನ ಮೋಡ ಕವಿದ ವಾತಾವರಣ ಇತ್ತು. ಸಂಜೆಯ ಹೊತ್ತಿಗೆ ಕಪ್ಪಗಿನ ಮೋಡ ಆವರಿಸಿದ್ದರಿಂದ ಭಾರೀ ಮಳೆಯಾಗುತ್ತೆ ಅನ್ನುವ ಸುಳಿವು ನೀಡಿತ್ತು. ಆದರೆ ಮಂಗಳೂರಿನಲ್ಲಿ ಹನಿ ಹನಿ ಸುರಿದಿದ್ದು ನೆಲ ಒದ್ದೆಯಾಗುವಷ್ಟು ಮಾತ್ರ ಮಳೆಯಾಗಿದೆ.
Heavy rains in Puttur causes havoc, water enters shops, most of the shops were filled with shops causing huge damage to many business people.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm