ಬ್ರೇಕಿಂಗ್ ನ್ಯೂಸ್
04-12-20 05:41 pm Mangalore Correspondent ಕರಾವಳಿ
ಮಂಗಳೂರು, ಡಿ.4: ಕನ್ನಡ ಪರ ಸಂಘಟನೆಗಳು ನೀಡಿರುವ ಬಂದ್ ಕರೆಗೆ ಕರಾವಳಿಯಲ್ಲಿ ಯಾವುದೇ ಬೆಂಬಲ ವ್ಯಕ್ತವಾಗಿಲ್ಲ. ಯಾವುದೇ ಸಂಘಟನೆಗಳು ಬೆಂಬಲವನ್ನೂ ನೀಡಿಲ್ಲ.
ಈ ಹಿಂದೆಯೂ ಕನ್ನಡ ಪರ ಸಂಘಟನೆಗಳ ಕರ್ನಾಟಕ ಬಂದ್ ಕರೆ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಂಬಲ ವ್ಯಕ್ತವಾಗಿದ್ದಿಲ್ಲ. ಎಂದಿನಂತೆ ಸಾರಿಗೆ ಬಸ್ ಇನ್ನಿತರ ವಾಹನಗಳು ಸಂಚಾರ ನಡೆಸಿದ್ದವು. ಈ ಬಾರಿಯು ಅದೇ ರೀತಿ ಸಾರಿಗೆ ವಾಹನಗಳು ಸಂಚಾರ ನಡೆಸುವ ನಿರೀಕ್ಷೆಯಿದೆ.


ಆಟೋ, ಟ್ಯಾಕ್ಸಿ ವಾಹನಗಳು ಎಂದಿನಂತೆ ಸಂಚಾರ ನಡೆಸಲಿವೆ. ಟ್ಯಾಕ್ಸಿ ಚಾಲಕ- ಮಾಲಕರ ಸಂಘಟನೆಗಳು ಕೂಡ ಬಂದ್ ಕರೆಗೆ ಬೆಂಬಲ ನೀಡಿಲ್ಲ. ಅಲ್ಲದೆ, ಕೆಎಸ್ಸಾರ್ಟಿಸಿ ಬಸ್ ಸಂಚಾರವೂ ಎಂದಿನಂತೆ ಇರಲಿದೆ.
ಬೆಂಗಳೂರು, ಮೈಸೂರು ಭಾಗದಲ್ಲಿ ಬಂದ್ ಬಿಸಿ ಇದ್ದರೆ ಮಂಗಳೂರಿನಿಂದ ಅಲ್ಲಿಗೆ ತೆರಳುವ ಸಾರಿಗೆ ಬಸ್ ಗಳು ಸಂಚಾರ ನಡೆಸುವ ಸಾಧ್ಯತೆ ಕಡಿಮೆ. ಉಳಿದಂತೆ, ಕರಾವಳಿ ಜಿಲ್ಲೆಗಳು ಮತ್ತು ಉತ್ತರ ಕರ್ನಾಟಕ ಭಾಗಕ್ಕೆ ತೆರಳುವ ಬಸ್ ಗಳು ಎಂದಿನ ರೀತಿ ಸಂಚರಿಸುವ ಸಾಧ್ಯತೆ ಇದೆ ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.


ಇನ್ನು ರಾಜ್ಯ ಸರಕಾರ ಯಾವುದೇ ಕಾರಣಕ್ಕೂ ಬಂದ್ ಮಾಡಲು ಬಿಡುವುದಿಲ್ಲ ಎಂದು ಹೇಳಿದೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಈ ಬಗ್ಗೆ ಹೇಳಿಕೆ ನೀಡಿ, ಯಾರೇ ಆಗಲಿ ಬಂದ್ ಮಾಡಲು ಬಂದರೆ ಪೊಲೀಸರು ಕ್ರಮ ಜರುಗಿಸಲಿದ್ದಾರೆ ಎಂದಿದ್ದಾರೆ. ಹೀಗಾಗಿ ಬಂದ್ ವಿಚಾರದಲ್ಲಿ ಯಾರು ಕೂಡ ಬಹಿರಂಗ ಬೆಂಬಲ ನೀಡಿಲ್ಲ.
Mangalore will have it's services and operations as usual lending no response to Karnataka Bandh on 5th December 2020. Karnataka outfits have called for a bandh on December 5, opposing the establishment of a Maratha Development Corporation.
24-03-26 02:55 pm
HK News Staffer
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
24-03-26 04:43 pm
HK News Staffer
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
24-03-26 09:29 pm
HK News Staffer
ಟ್ಯಾಕ್ಸಿ ಕಾರುಗಳಿಗೆ ಪ್ಯಾನಿಕ್ ಬಟನ್ ಹಣ ಮಾಡುವ ದಂಧ...
24-03-26 08:29 pm
ಲಕ್ಷ್ಮೀ ಲಾಕೆಟ್ ಸರ ಎಂದು ನಂಬಿಸಿ ಮಹಿಳೆಯಿಂದ ಅಸಲಿ...
24-03-26 05:34 pm
ಸಜಿಪನಡು ತಲೆಮೊಗರು ಮಸೀದಿಯಲ್ಲಿ ಗಲಾಟೆ ; ಆಡಳಿತ ವಿಚ...
24-03-26 11:55 am
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm