ಬ್ರೇಕಿಂಗ್ ನ್ಯೂಸ್
05-06-24 10:55 pm Mangalore Correspondent ಕರಾವಳಿ
ಮಂಗಳೂರು, ಜೂನ್ 5: ಸಾಮಾನ್ಯ ಕಾರ್ಯಕರ್ತನಾದ ನನ್ನನ್ನು ಅಭ್ಯರ್ಥಿಯಾಗಿ ಮಾಡಿದ್ದಾರೆ. ಚುನಾವಣೆ ಎಂದ ಮೇಲೆ ಸೋಲು, ಗೆಲುವು ಸರ್ವೇ ಸಾಮಾನ್ಯ. ದಕ್ಷಿಣ ಕನ್ನಡದಲ್ಲಿ ಟಿಕೆಟ್ ಪಡೆಯುವ ಸಮಯದಲ್ಲಿ ಇಲ್ಲಿ ಟಿಕೆಟ್ ಪಡೆಯುವುದು ವೇಸ್ಟ್ ಅಂತಾ ಜನ ಹೇಳ್ತಾಯಿದ್ರು. ಇಲ್ಲಿ ಗೆಲುವು ಸಾಧ್ಯವಿಲ್ಲ ಅಂದಿದ್ರು. ಕೆಲವೇ ದಿನಗಳ ಪ್ರಚಾರದಲ್ಲಿ 6 ಲಕ್ಷದಷ್ಟು ಮತ ಪಡೆದಿದ್ದೇನೆ ಎಂದರೆ ಹೆಮ್ಮೆಯಿದೆ ಎಂದು ದಕ್ಷಿಣ ಕನ್ನಡ ಲೋಕಸಭಾ ಸೋಲಿನ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಹೇಳಿದ್ದಾರೆ.
ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಪದ್ಮರಾಜ್ ಅವರು, ಮೊದಲಿಗೆ ನಾನು ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರನ್ನ ಅಭಿನಂದಿಸುತ್ತೇನೆ. ಬಹಳಷ್ಟು ಗೌರವ ನನ್ನ ಪಕ್ಷ ನನಗೆ ಕೊಟ್ಟಿದೆ. ನನ್ನ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದಗಳನ್ನ ಹೇಳುತ್ತೇನೆ ಎಂದರು. ನನ್ನ ಪಕ್ಷದ ನಾಯಕರು ಕೆಲಸ ಮಾಡಿದ್ದಾರೆ. ಈ ಹಿಂದಿನ ಅಭ್ಯರ್ಥಿಗಳಿಗಿಂತ ಹೆಚ್ಚಿನ ಮತ ಪಡೆದಿದ್ದೇನೆ ಅನ್ನೋ ಹೆಮ್ಮೆಯಿದೆ. ನಾನು ಸೋತಿರಬಹುದು, ಆದರೆ ಪಕ್ಷದ ಕಾರ್ಯಕರ್ತರು ನನಗೆ ನೀಡಿದ ಬೆಂಬಲವನ್ನ ಮರೆಯುವಂತಿಲ್ಲ. ಇದು ಅಂತ್ಯವಲ್ಲ ಇದು ಆರಂಭ, ಪ್ರತಿ ಬೂತ್ ಮಟ್ಟದಲ್ಲೂ ಪಕ್ಷ ಸಂಘಟನೆ ಬಲಿಷ್ಠಗೊಳಿಸುತ್ತೇನೆ ಎಂದು ಹೇಳಿದ ಪದ್ಮರಾಜ್, ನನ್ನ ಸ್ಪರ್ಧೆ ಕಂಡು ರಾಷ್ಟ್ರೀಯ ನಾಯಕರು ಕರೆ ಮಾಡಿ ಶ್ಲಾಘಿಸಿದ್ದಾರೆ. ಯೂ ಫೂಟ್ ಲೈಕ್ ಎ ಲಯನ್ ಎಂದು ರಾಷ್ಟ್ರ ಮಟ್ಟದ ನಾಯಕರು ಕರೆ ಮಾಡಿದ್ದಾರೆ. ನಾವು ಪಕ್ಷ ಸಂಘಟನೆ ವಿಚಾರದಲ್ಲಿ ಹಿಂದೆ ಇದ್ದೇವೆ. ನಮ್ಮಲ್ಲಿ ಬೂತ್ ಮಟ್ಟದಲ್ಲಿ ಸಂಘಟನೆ ಕಡಿಮೆ ಇದೆ. ಮುಂದಿನ ದಿನಗಳಲ್ಲಿ ಇದನ್ನ ಬಲಿಷ್ಠಗೊಳಿಸುತ್ತೇವೆ. ರಾಜ್ಯ ಮಟ್ಟದಲ್ಲೂ ನಮ್ಮ ಸಾಧನೆ ಅಲ್ಲಗಳೆಯುವಂತದ್ದಲ್ಲ. ಗ್ಯಾರಂಟಿ ಯೋಜನೆಗಳ ನಡುವೆ 9 ಸೀಟ್ ಬಂದಿರೋದು ಜನರ ಮನಸ್ಸು ಏನು ಎಂದು ಅರಿತುಕೊಳ್ಳಬೇಕಾಗಿದೆ.
ಅಯೋದ್ಯೆ ಅಯೋಧ್ಯೆ ಅಂತಾ ಇದ್ದ ಬಿಜೆಪಿಯನ್ನ ಜನ, ಅಯೋಧ್ಯೆಯಲ್ಲೇ ಸೋಲಿಸಿದ್ದಾರೆ. ಆದರೆ ಮಂಗಳೂರಿನಲ್ಲಿ ಜನ ಬಿಜೆಪಿಯನ್ನ ಗೆಲ್ಲಿಸಿದ್ದಾರೆ. ಬುದ್ಧಿವಂತರು ಎನಿಸಿಕೊಳ್ಳುವ ಇಲ್ಲಿನ ಜನರು ಯೋಚಿಸಬೇಕಾಗಿದೆ ಎಂದು ಕೌಂಟರ್ ನೀಡಿದರು.
ಬ್ರಿಜೇಶ್ ಚೌಟರಿಗೆ ಮನವಿ ಮಾಡುತ್ತೇನೆ, ದಯವಿಟ್ಟು ಬೇರೆಲ್ಲಾ ವಿಚಾರ ಬಿಟ್ಟು ಜಿಲ್ಲೆಯ ಅಭಿವೃದ್ಧಿ ಮಾಡಿ. ಸಾಮರಸ್ಯದ ಗತ ವೈಭವ ಮರಳಿ ತರುವ ಪ್ರಯತ್ನ ಮಾಡಿ. ಒಳ್ಳೆಯ ಕೆಲಸಕ್ಕೆ ನಾನು ಬ್ರಿಜೇಶ್ ಚೌಟ ಜೊತೆಗೆ ಇದ್ದೇನೆ. ಸೋಲಿನ ನೈತಿಕ ಹೊಣೆ ನಾನೇ ಹೊತ್ತುಕೊಳ್ಳುತ್ತೇನೆ. ಆದರೆ ಸುಮ್ಮನಾಗೋದಿಲ್ಲ ಪಕ್ಷ ಸಂಘಟನೆ ಬಲಿಷ್ಠಗೊಳಿಸುತ್ತೇವೆ. ಬಿಜೆಪಿಯ ಪಕ್ಷ ಸಂಘಟನೆ ನೋಡಿ ಕಲಿಯಬೇಕು, ಒಳ್ಳೆಯದನ್ನ ಅನುಸರಿಸುವುದರಲ್ಲಿ ತಪ್ಪಿಲ್ಲ. ಎಸ್ ಡಿ ಪಿ ಐ ನವರೂ ಅಸ್ಪೃಶ್ಯರಲ್ಲ ಎಂದು ಹೇಳಿದರು.
ಅಯೋಧ್ಯೆ ರಾಮ ಮಂದಿರ ಸಂದರ್ಭದಲ್ಲೇ ಬಿಜೆಪಿ ಪ್ರಚಾರ ಆರಂಭವಾಗಿದೆ. ಆದರೆ ರಾಮ ಮಂದಿರ ಕಟ್ಟಿಸಿ ರಾಜಕೀಯ ಮಾಡಬಾರದು. ಇದೇ ಕಾರಣಕ್ಕೆ ಅಯೋಧ್ಯೆಯ ಜನ ಬಿಜೆಪಿಯನ್ನ ಸೋಲಿಸಿದ್ದಾರೆ ಎಂದು ವಿಶ್ಲೇಷಣೆ ಮಾಡಿದರು.
Dakshina Kannada Congress MP candidate Padmaraj congratulated Capt Brijesh Chowta on winning the Lok Sabha elections and said, “This is not an end, but the beginning. I will work to strengthen the party.”
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
17-06-25 08:17 pm
Mangalore Correspondent
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
Rain, Pilikula Zoo, Mangalore, Flood: ಪಿಲಿಕುಳ...
16-06-25 08:34 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm