ಬ್ರೇಕಿಂಗ್ ನ್ಯೂಸ್
04-12-20 11:05 pm Mangaluru Correspondent ಕರಾವಳಿ
ಮಂಗಳೂರು, ಡಿ. 4: ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ , ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಕೆ.ಕೃಷ್ಣಪ್ಪ ಮೆಂಡನ್ (88) ಶುಕ್ರವಾರ ಮುಂಜಾನೆ ಅಳಪೆ ಸ್ವಗೃಹದಲ್ಲಿ ನಿಧನ ಹೊಂದಿದರು.
ಅವರು ನಗರ ಪಾಲಿಕೆ ಕಂಕನಾಡಿ ಅಳಪೆ ವಾರ್ಡ್ ನಿಂದ ನಾಲ್ಕು ಬಾರಿ ಕಾರ್ಪೊರೇಟರ್ ಆಗಿ ಆಯ್ಕೆಯಾಗಿದ್ದು, ಮೇಯರ್ ಆಗಿ, ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ವೇಳೆ ಸಜ್ಜನ ರಾಜಕಾರಣಿಯೆಂದೇ ಗುರುತಿಸಲ್ಪಟ್ಟಿದ್ದರು.
ಅತ್ತಾವರ ಶ್ರೀ ವಿಷ್ಣುಮೂರ್ತಿ ಉಮಾಮಹೇಶ್ವರ ದೇವಸ್ಥಾನದ ಮೊಕ್ತೇಶ್ವರರಾಗಿದ್ದರು. ಅಳಪೆ ಕರ್ಮಾರ್ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿ, ಕರಾವಳಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಕಂಕನಾಡಿ ಯುವಕ ವೃಂದದ ಸ್ಥಾಪಕ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು. ದ.ಕ. ಜಿಲ್ಲಾ ಗಾಣಿಗ ಸಂಘದ ಅಧ್ಯಕ್ಷರಾಗಿ ಸಾಮಾಜಿಕ ಮುಖಂಡರಾಗಿದ್ದರು. ಅವರು ಪತ್ನಿ, ಇಬ್ಬರು ಪುತ್ರಿಯರನ್ನು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.
ಶಾಸಕ ಯು.ಟಿ.ಖಾದರ್, ಐವನ್ ಡಿಸೋಜ, ಮಾಜಿ ಶಾಸಕ ಮೊಯಿದೀನ್ ಬಾವ ಅಂತಿಮ ನಮನ ಸಲ್ಲಿಸಿದರು.
ಮಾಜಿ ಮೇಯರ್ ಗಳಾದ ಶಶಿಧರ ಹೆಗ್ಡೆ, ಹಿಲ್ಡಾ ಆಳ್ವ, ಭಾಸ್ಕರ್ ಮೊಯ್ಲಿ, ಜೇಸಿಂತ ಆಲ್ಫ್ರೆಡ್, ಮಂಗಳೂರು ನಗರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ವಿಶ್ವಾಸ್ ಕುಮಾರ್ ದಾಸ್, ದಕ್ಷಿಣ ಬ್ಲಾಕ್ ಅಧ್ಯಕ್ಷರಾದ ಸಲೀಮ್, ಕಾರ್ಪೊರೇಟರ್ ಗಳಾದ ಪ್ರವೀಣ್ ಚಂದ್ರ ಆಳ್ವ, ಕೇಶವ ಮರೋಳಿ, ಅಶ್ರಫ್, ವಿರೋಧ ಪಕ್ಷದ ನಾಯಕ ಅಬ್ದುಲ್ ರಾವೂಫ್, ರೂಪಶ್ರೀ ಪೂಜಾರಿ, ಸಂದೀಪ್ ಗರೋಡಿ ಮಾಜಿ ಕಾರ್ಪೊರೇಟರ್ ಗಳಾದ ಪದ್ಮನಾಭ ಅಮೀನ್, ಆಶಾ ಡಿಸಿಲ್ವ, ಪ್ರಕಾಶ್ ಪಡೀಲ್ ಮತ್ತು ಟಿ.ಕೆ. ಸುಧೀರ್, ಡೆನ್ನಿಸ್ ಡಿಸಿಲ್ವಾ ಮತ್ತಿತರರು ಅಂತಿಮ ದರ್ಶನ ಪಡೆದರು.
The former Mayor K. Krishnappa Mendon died here on Friday. He was 88 and is survived by his wife and two daughters.
24-03-26 02:55 pm
HK News Staffer
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
24-03-26 04:43 pm
HK News Staffer
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
24-03-26 09:29 pm
HK News Staffer
ಟ್ಯಾಕ್ಸಿ ಕಾರುಗಳಿಗೆ ಪ್ಯಾನಿಕ್ ಬಟನ್ ಹಣ ಮಾಡುವ ದಂಧ...
24-03-26 08:29 pm
ಲಕ್ಷ್ಮೀ ಲಾಕೆಟ್ ಸರ ಎಂದು ನಂಬಿಸಿ ಮಹಿಳೆಯಿಂದ ಅಸಲಿ...
24-03-26 05:34 pm
ಸಜಿಪನಡು ತಲೆಮೊಗರು ಮಸೀದಿಯಲ್ಲಿ ಗಲಾಟೆ ; ಆಡಳಿತ ವಿಚ...
24-03-26 11:55 am
ಹರ್ಮುಜ್ ಜಲಸಂಧಿ ಬಂದ್ ; ಭಾರತದ 22 ಹಡಗು ಲಂಗರು, 20...
24-03-26 09:24 am
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm