ಬ್ರೇಕಿಂಗ್ ನ್ಯೂಸ್
10-06-24 08:09 pm Mangalore Correspondent ಕರಾವಳಿ
ಮಂಗಳೂರು, ಜೂನ್ 10: ನಾಗಾಲ್ಯಾಂಡ್ ರಾಜಧಾನಿ ಕೊಹಿಮಾದಲ್ಲಿ ಜೆಸೂಟ್ ಚರ್ಚ್ ಪಾದ್ರಿಯಾಗಿದ್ದ ಮಂಗಳೂರು ಮೂಲದ ಆನಂದ್ ಪಿರೇರಾ(56) ಅವರು ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ.
1986ರಲ್ಲಿ ಜೆಸೂಟ್ ಸೊಸೈಟಿಗೆ ಸೇರ್ಪಡೆಯಾಗಿದ್ದ ಆನಂದ್ ಪಿರೇರಾ ಅವರು 1995ರಲ್ಲಿ ಈಶಾನ್ಯ ಭಾರತದಲ್ಲಿ ಜೆಸೂಟ್ ಸೇವೆಗೆ ನಿಯೋಜನೆಗೊಂಡಿದ್ದರು. 2000ನೇ ಇಸವಿಯಲ್ಲಿ ಆನಂದ್ ಪಿರೇರಾ ಪಾದ್ರಿಯಾಗಿ ಸೇವೆ ಆರಂಭಿಸಿದ್ದರು. ಮಂಗಳೂರಿನ ಹೆಸರಾಂತ ಪಿರೇರಾ ಹೊಟೇಲ್ ಮಾಲೀಕ ದಿವಂಗತ ಚಾರ್ಲ್ಸ್ ಪಿರೇರಾ ಅವರ ಪುತ್ರನಾಗಿದ್ದು ಇವರ ತಾಯಿ ಜಾನೆಟ್ ಪಿರೇರಾ ಸೈಂಟ್ ಅಲೋಶಿಯಸ್ ಕಾಲೇಜು ಪ್ರೈಮರಿ ಸ್ಕೂಲ್ ನಲ್ಲಿ ಮುಖ್ಯ ಶಿಕ್ಷಕರಾಗಿ ನಿವೃತ್ತಿಯಾಗಿದ್ದಾರೆ.
2010ರಲ್ಲಿ ಆನಂದ್ ಪಿರೇರಾ ಅವರು ನೆಬ್ರಾಸ್ಕದ ಕ್ರೆಗ್ಟನ್ ಯುನಿವರ್ಸಿಟಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು ಅದರ ಬೆನ್ನಲ್ಲೇ ಉನ್ನತ ಅಧ್ಯಯನ ಮಾಡಿ ಪುಣೆ ಯುನಿವರ್ಸಿಟಿಯಿಂದ ಸಮಾಜಶಾಸ್ತ್ರ ವಿಷಯದಲ್ಲಿ ಪಿಎಚ್ ಡಿ ಗಳಿಸಿದ್ದರು. 2017-19ರಲ್ಲಿ ಮಣಿಪುರದ ಮೊಯಿರಾಂಗ್ ನಲ್ಲಿ ಸೈಂಟ್ ಕ್ಸೇವಿಯರ್ ಹೈಸ್ಕೂಲ್ ನಲ್ಲಿ ಪ್ರಿನ್ಸಿಪಾಲ್ ಆಗಿದ್ದರು. 2019ರಲ್ಲಿ ಅಸ್ಸಾಂ ರಾಜ್ಯದ ಗುವಾಹಟಿಯ ಜೆಸೂಟ್ ಹೌಸ್ ಕಮ್ಯುನಿಟಿ ಇದರ ಮುಖ್ಯಸ್ಥರಾಗಿ ಮತ್ತು ರೀಜನ್ ಡೆವಲಪ್ಮೆಂಟ್ ಡೈರೆಕ್ಟರ್ ಆಗಿಯೂ ಕರ್ತವ್ಯದಲ್ಲಿದ್ದರು. 2023ರಲ್ಲಿ ಜೆಸೂಟ್ಸ್ ಅರುಣಾಚಲ ಮಿಶನ್ ವಿಭಾಗದ ಮುಖ್ಯಸ್ಥರಾಗಿ ನಿಯೋಜನೆಗೊಂಡಿದ್ದರು. ಇದಲ್ಲದೆ, ನಾಗಾಲ್ಯಾಂಡಿನ ಕೊಹಿಮಾದಲ್ಲಿ ಜೆಸೂಟ್ ರೀಜನ್ ಇದರ ಮುಖ್ಯಸ್ಥರಾಗಿಯೂ ಜವಾಬ್ದಾರಿ ಹೊಂದಿದ್ದರು.
Mangalore son of pereira hotel owner Father Anand Pereira SJ dies of heart attack in Nagaland. Father Anand Pereira, SJ was currently rector of St. Paul Institute of Education Phesama in Kohima, Father Anand Pereira SJ is the son of the late Ignatius ('Inasam' - Pereira Hotel)
26-08-25 10:47 pm
HK News Desk
ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು ;...
26-08-25 07:07 pm
Dharmasthala, SIT, NIA, Home Minister: ಧರ್ಮಸ್...
26-08-25 06:06 pm
Dharmasthala Case SIT Officer M.N. Anucheth:...
26-08-25 04:48 pm
DK Shivakumar, BBMP, Potholea: ಬೆಂಗಳೂರಿನಲ್ಲಿ...
26-08-25 02:04 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
26-08-25 10:57 pm
Mangalore Correspondent
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
Dharmasthala case, Chinmaya, Mahesh Shetty: ದ...
26-08-25 10:36 am
Mangalore, Rushabh Rao: ವಿಯಟ್ನಾಂ ಫ್ಯಾಷನ್ ಶೋ ಸ...
25-08-25 10:59 pm
Mangalore, Esyasoft, AI, Bajpe: ಬಜ್ಪೆ ; ಎಸ್ಯಾ...
25-08-25 10:44 pm
26-08-25 10:39 pm
HK News Desk
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm
How Did Pastor John Shamine and Criminal Mada...
25-08-25 07:31 pm