ಬ್ರೇಕಿಂಗ್ ನ್ಯೂಸ್
11-06-24 11:43 am Mangalore Correspondent ಕರಾವಳಿ
ಉಳ್ಳಾಲ, ಜೂ.11: ಉಳ್ಳಾಲ ಸಮುದ್ರ ತೀರಕ್ಕೆ ವಿಹಾರಕ್ಕೆ ಬಂದಿದ್ದ ಆಂಧ್ರ ಪ್ರದೇಶ ಮೂಲದ ಆರು ಮಹಿಳೆಯರಲ್ಲಿ ಒಬ್ಬಾಕೆ ಸಮುದ್ರಪಾಲಾಗಿ ಸಾವನ್ನಪ್ಪಿದ್ದು ಉಳಿದ ಐವರನ್ನ ಸ್ಥಳೀಯರು ರಕ್ಷಿಸಿದ್ದಾರೆ.
ಆಂಧ್ರಪ್ರದೇಶದ ಕೊಂಡಾಪುರದ ಸಿರಿಲಿಂಗಪಲ್ಲಿ ನಿವಾಸಿ ಪಿ.ಎಲ್ ಪ್ರಸನ್ನ ಎಂಬವರ ಪತ್ನಿ ಪರಿಮಿ ರತ್ನ ಕುಮಾರಿ (57) ಸಾವನ್ನಪ್ಪಿದವರು.
ಉಳ್ಳಾಲ ಬೀಚಲ್ಲಿ ನಿನ್ನೆ ಸಂಜೆ ಪರಿಮಿ ರತ್ನ ಕುಮಾರಿ ಅವರು ಸ್ನೇಹಿತೆಯರಾದ ವೆನ್ನ ವಿಜಯ ಲಕ್ಷ್ಮಿ, ಸ್ವಾತಿ, ಸುನಂದ, ಅರುಣ ಮತ್ತು ಸುಮಾ ಅವರೊಂದಿಗೆ ವಿಹರಿಸುತ್ತಿದ್ದ ಸಂದರ್ಭ ಬೃಹತ್ ಗಾತ್ರದ ಅಲೆಯೊಂದು ಅಪ್ಪಳಿಸಿ ಆರು ಮಹಿಳೆಯರನ್ನು ಎಳೆದೊಯ್ದಿತ್ತು. ಸ್ಥಳೀಯರು ತಕ್ಷಣ ಆರು ಮಂದಿಯನ್ನ ಸಮುದ್ರದಿಂದ ಮೇಲಕ್ಕೆತ್ತಿದ್ದಾರೆ. ಪ್ರಜ್ಞಾಹೀನರಾಗಿದ್ದ ಪರಿಮಿ ರತ್ನ ಕುಮಾರಿಯನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಸೇರಿಸಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಹೈದರಾಬಾದ್ ನಿಂದ 6 ಮಂದಿ ಮಹಿಳೆಯರು ಜೂ.6 ಕ್ಕೆ ಮೈಸೂರಿಗೆ ವಿಮಾನದ ಮೂಲಕ ಬಂದಿಳಿದಿದ್ದರು. ಅಲ್ಲಿ ಪ್ರವಾಸ ಮುಗಿಸಿದ ಬಳಿಕ ಇನೋವಾ ಕಾರಿನಲ್ಲಿ ಜೂ.7 ಕ್ಕೆ ಕೊಡಗಿಗೆ ತಲುಪಿದ್ದರು. ಜೂ.9 ಕ್ಕೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರ ದರ್ಶನ ನಡೆಸಿ, ನಿನ್ನೆ ಬೆಳಗ್ಗೆ ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿ ಮಧ್ಯಾಹ್ನ ಸೋಮೇಶ್ವರ ಸೋಮನಾಥನ ದರ್ಶನ ಪಡೆದು ಸಂಜೆ ಉಳ್ಳಾಲ ಸಮುದ್ರ ತೀರ ವಿಹಾರಕ್ಕೆ ಬಂದಿದ್ದರು. ಉಳ್ಳಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore 57 year old women from Andhra drowned at ullal beach, five rescued. The deceased has been identified as Rathna Kumari. They had come as family to visit Dharmasthala temple to offer prayers from Andhra Pradesh.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm