ಬ್ರೇಕಿಂಗ್ ನ್ಯೂಸ್
11-06-24 08:41 pm Mangalore Correspondent ಕರಾವಳಿ
ಮಂಗಳೂರು, ಜೂನ್ 11: ಬೋಳಿಯಾರು ಇರಿತ ಘಟನೆಗೆ ಬಿಜೆಪಿ ಕಾರ್ಯಕರ್ತರು ಮಸೀದಿ ಎದುರಲ್ಲಿ ಘೋಷಣೆ ಕೂಗಿದ್ದೇ ಕಾರಣ. ಮುಸ್ಲಿಮರನ್ನು ಉದ್ದೇಶಿಸಿ ನೀವು ಪಾಕಿಸ್ತಾನಿಗಳು, ಮೋದಿ ಎದುರಲ್ಲಿ ನಿಲ್ಲುವುದಕ್ಕೆ ಭಯ ಪಡುತ್ತೀರಿ ಎನ್ನುವ ರೀತಿ ಅರ್ಥ ಬರುವಂತೆ ಪ್ರಚೋದನಕಾರಿ ಘೋಷಣೆ ಹಾಕಿದ್ದಾರೆ. ಭಾರತ್ ಮಾತಾ ಕಿ ಜೈ ಎನ್ನುವುದು ಮಾತ್ರ ಘೋಷಣೆ ಆಗಿರಲಿಲ್ಲ. ವಿಜಯೋತ್ಸವ ಸಂದರ್ಭದಲ್ಲಿ ಮುಸ್ಲಿಮರನ್ನು ಪ್ರಚೋದಿಸುವ ರೀತಿ ಘೋಷಣೆ ಕೂಗಿದ್ದಕ್ಕೆ ನಮ್ಮಲ್ಲಿ ಸಾಕ್ಷಿ ಇದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಹೇಳಿದ್ದಾರೆ.
ಬೋಳಿಯಾರಿನಲ್ಲಿ ಬಿಜೆಪಿ ಕಾರ್ಯಕರ್ತರಿಬ್ಬರ ಮೇಲೆ ಚೂರಿ ಇರಿತ ಘಟನೆಗೆ ಸಂಬಂಧಿಸಿ ಸುದ್ದಿಗೋಷ್ಟಿ ನಡೆಸಿದ ಕಮಿಷನರ್, ಪ್ರಕರಣದಲ್ಲಿ ಆರು ಮಂದಿಯನ್ನು ಬಂಧಿಸಿದ್ದೇವೆ. ಇನ್ನೂ ಹಲವರ ಬಂಧನ ಆಗಲಿಕ್ಕಿದೆ, ನಮ್ಮ ಮೂರು ವಿಶೇಷ ತಂಡಗಳು ಈ ಸಂಬಂಧ ಕಾರ್ಯಾಚರಣೆ ನಡೆಸ್ತಾ ಇದೆ ಎಂದರು. ಭಾರತ್ ಮಾತಾ ಕೀ ಜೈ ಘೋಷಣೆ ಕೂಗಿದ್ದಕ್ಕೆ ನೀವು ಕೇಸ್ ಹಾಕಿದ್ದೀರಾ ಎಂದು ಕೇಳಿದ ಪ್ರಶ್ನೆಗೆ, ಅಷ್ಟೇ ಘೋಷಣೆ ಕೂಗಿದ್ದು ಅಲ್ಲ. ಮುಸ್ಲಿಮರು ಪಾಕಿಸ್ತಾನಿಗಳು ಅನ್ನುವ ರೀತಿ ಪ್ರಚೋದನಕಾರಿ ಘೋಷಣೆ ಹಾಕಿದ್ದಾರೆ. ಮೆರವಣಿಗೆಯಲ್ಲೂ ಹಾಕಿದ್ದಾರೆ. ಆನಂತರ, ಮೂರು ಮಂದಿ ಯುವಕರು ಮಸೀದಿ ಬಳಿಗೆ ಬಂದು ಅಂತಹದ್ದೇ ಘೋಷಣೆ ಹಾಕಿದ್ದಾರೆ. ಇದರ ಬಗ್ಗೆ ಮಸೀದಿ ಕಮಿಟಿ ಅಧ್ಯಕ್ಷರು ನೀಡಿದ ದೂರಿನಂತೆ 153ಎ ಅಡಿ ಕೇಸು ದಾಖಲಿಸಿದ್ದೇವೆ. ಜೊತೆಗೆ, ನಮ್ಮ ಸಿಬಂದಿಯೂ ಅಲ್ಲಿದ್ದರು ಎಂದು ತಿಳಿಸಿದ್ದಾರೆ.
ತಂಡ ಚೂರಿ ಹಿಡಿದುಕೊಂಡು ಬಂದಿತ್ತೇ ಎಂದು ಕೇಳಿದ ಪ್ರಶ್ನೆಗೆ, ಅದರಲ್ಲಿ ಒಬ್ಬಾತ ರೌಡಿ ಶೀಟರ್ ಇದ್ದ. ಆತ ತನ್ನಲ್ಲಿದ್ದ ಚೂರಿಯಿಂದ ಹಲ್ಲೆ ಮಾಡಿದ್ದಾನೆ. ನಾವು ಸಿಸಿಟಿವಿ ವಿಡಿಯೋ ಆಧರಿಸಿ ಕಾರ್ಯಾಚರಣೆ ಮಾಡುತ್ತಿದ್ದೇವೆ ಎಂದು ಹೇಳಿದರು. ಏಂಟಿ ಕಮ್ಯುನಲ್ ವಿಂಗ್ ಬಗ್ಗೆ ಕೇಳಿದ ಪ್ರಶ್ನೆಗೆ, ಅದು ಏಕ್ಟಿವ್ ಇದೆ, ನಾವು ಈ ಬಾರಿ ಚುನಾವಣೆಗೂ ಮುನ್ನ ಕಟ್ಟುನಿಟ್ಟಿನ ಕ್ರಮ ಜರುಗಿಸಿದ್ದೇವೆ. ಕಮ್ಯುನಲ್ ಹಿಂಸೆಯ ಹಿನ್ನೆಲೆಯಿದ್ದ 300 ಮಂದಿಯ ಮೇಲೆ ಕ್ರಮ ಮಾಡಿದ್ದೇವೆ. 75 ಜನರನ್ನು ಗಡೀಪಾರು ಮಾಡಿದ್ದೇವೆ. ಎಂಟು ಮಂದಿ ಮೇಲೆ ಗೂಂಡಾ ಏಕ್ಟ್ ಜರುಗಿಸಿದ್ದೇವೆ. ಇಡೀ ರಾಜ್ಯಕ್ಕೆ ಹೋಲಿಸಿದರೆ ಮೂರನೇ ಒಂದು ಭಾಗದಷ್ಟು ಅಂದರೆ 35 ಶೇಕಡಾ ವರ್ಕೌಟ್ ನಮ್ಮಲ್ಲಿ ಆಗಿದೆ ಎಂದು ಹೇಳಿದರು. ಅಪರಾಧ ಹಿನ್ನೆಲೆಯವರಿಗೆ ನೋಟೀಸ್ ಜಾರಿ ಮಾಡುವುದು, ಠಾಣೆಗೆ ಕರೆಸಿ ಎಚ್ಚರಿಕೆ ನೀಡುವ ಕೆಲಸ ಮಾಡುತ್ತಿದ್ದೇವೆ ಎಂದರು.
Mangalore Provocative sloganeering triggered communal strife at Boliyar over stabbing two says Police Commissioner Anupam Agarwal. Mangaluru city Police Commissioner Anupam Agrawal on Tuesday said a provocative statement referring to Pakistan by those celebrating the Narendra Modi swearing-in ceremony sparked tension leading to stabbing of two BJP workers at Boliyar near here on Sunday night.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm