ಬ್ರೇಕಿಂಗ್ ನ್ಯೂಸ್
13-06-24 10:33 pm Mangalore Correspondent ಕರಾವಳಿ
ಮಂಗಳೂರು, ಜೂನ್ 13: ಮಂಗಳೂರು ನಗರ ವ್ಯಾಪ್ತಿಯಲ್ಲಿ ಅಪಘಾತ ತಡೆಯುವ ನಿಟ್ಟಿನಲ್ಲಿ ವಾಹನಗಳ ವೇಗಕ್ಕೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಮುಂದಾಗಿದೆ. ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಆದೇಶದ ಅನುಸಾರ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಹೆದ್ದಾರಿ, ರಾಜ್ಯ ಹೆದ್ದಾರಿ, ನಗರಸಭೆ, ಪುರಸಭೆ, ಪಾಲಿಕೆ ವ್ಯಾಪ್ತಿಯ ರಸ್ತೆಗಳಲ್ಲಿ ನಿಗದಿಗಿಂತ ಹೆಚ್ಚಿನ ವೇಗದಲ್ಲಿ ವಾಹನ ಚಲಾಯಿಸಿದರೆ, ದಂಡ ವಿಧಿಸಲು ಮಂಗಳೂರು ಪೊಲೀಸ್ ಆಯುಕ್ತರು ನಿರ್ಧರಿಸಿದ್ದಾರೆ.
ಇದಕ್ಕಾಗಿ ಮಂಗಳೂರು ವ್ಯಾಪ್ತಿಯಲ್ಲಿ ವಾಹನಗಳ ಚಾಲನೆಗೆ ಸ್ಪೀಡ್ ಲಿಮಿಟ್ ನಿಗದಿ ಮಾಡಲಾಗಿದೆ. ಪ್ರಯಾಣಿಕರನ್ನು ಕರೆದೊಯ್ಯುವ 9 ಸೀಟಿಗಿಂತ ಕಡಿಮೆ ಸಾಮರ್ಥ್ಯದ ವಾಹನಗಳು ರಾಷ್ಟ್ರೀಯ ಹೆದ್ದಾರಿ ಅಥವಾ ರಸ್ತೆ ವಿಭಜಕ ಇರುವ ರಸ್ತೆಗಳಲ್ಲಿ ಗಂಟೆಗೆ ನೂರು ಕಿಮೀ, ಪಾಲಿಕೆ, ನಗರಸಭೆ, ಪುರಸಭೆ ವ್ಯಾಪ್ತಿಯ ರಸ್ತೆಗಳಲ್ಲಿ 70 ಕಿಮೀಗಿಂತ ಹೆಚ್ಚು ವೇಗದಲ್ಲಿ ಸಂಚರಿಸುವಂತಿಲ್ಲ. ಪ್ರಯಾಣಿಕರನ್ನು ಕರೆದೊಯ್ಯುವ 9 ಸೀಟಿಗಿಂತ ಹೆಚ್ಚು ಸೀಟನ್ನು ಹೊಂದಿರುವ ಎಲ್ಲ ಮಾದರಿಯ ಬಸ್, ಟ್ರಾವೆಲರ್ ಇನ್ನಿತರ ವಾಹನಗಳು ಹೆದ್ದಾರಿಗಳಲ್ಲಿ 90 ಕಿಮೀ, ಇತರ ಕಡೆಗಳಲ್ಲಿ ಗಂಟೆಗೆ 60 ಕಿಮೀ ಹೆಚ್ಚು ವೇಗದಲ್ಲಿ ಚಲಿಸುವಂತಿಲ್ಲ.
ಎಲ್ಲಾ ತರದ ಗೂಡ್ಸ್ ವಾಹನಗಳು ರಾಷ್ಟ್ರೀಯ ಹೆದ್ದಾರಿಗಳಲ್ಲಿ 80 ಕಿಮೀ, ಪಾಲಿಕೆ, ಪುರಸಭೆ ಇನ್ನಿತರ ಕಡೆಗಳಲ್ಲಿ 60 ಕಿಮೀ ಹೆಚ್ಚು ವೇಗದಲ್ಲಿ ಹೋಗುವಂತಿಲ್ಲ. ಮೋಟಾರ್ ಸೈಕಲ್ ಗಳು ಹೆದ್ದಾರಿಯಲ್ಲಿ 80 ಕಿಮೀ, ಇತರ ಕಡೆಗಳಲ್ಲಿ 60 ಕಿಮೀ ಹೆಚ್ಚು ವೇಗದಲ್ಲಿ ಹೋಗುವಂತಿಲ್ಲ. ತ್ರಿಚಕ್ರ ವಾಹನಗಳು ಹೆದ್ದಾರಿ, ರಾಜ್ಯ ಹೆದ್ದಾರಿ, ಪಾಲಿಕೆ, ನಗರಸಭೆ, ಪುರಸಭೆ ವ್ಯಾಪ್ತಿಯ ರಸ್ತೆಗಳಲ್ಲಿ ಗಂಟೆಗೆ 50 ಕಿಮೀ ಹೆಚ್ಚು ವೇಗದಲ್ಲಿ ಚಲಿಸುವಂತಿಲ್ಲ. ಈ ಮಿತಿಯನ್ನು ಉಲ್ಲಂಘಿಸಿದರೆ, ಮೊಬೈಲ್ ಸ್ಪೀಡ್ ರಾಡಾರ್ ಗನ್ ಮೂಲಕ ಸಂಚಾರಿ ಪೊಲೀಸರು ನಿಗಾ ವಹಿಸಲಿದ್ದು, ಅಂತಹ ವಾಹನಗಳ ಮೇಲೆ ದಂಡ ವಿಧಿಸಲಿದ್ದಾರೆ.
ಈ ಬಗ್ಗೆ ಹೆದ್ದಾರಿ ಇಲಾಖೆಯ ಅದಿಕಾರಿಗಳ ಜೊತೆಗೆ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್, ಉಪ ಪೊಲೀಸ್ ಆಯುಕ್ತ ಬಿಪಿ ದಿನೇಶ್ ಕುಮಾರ್ ಸಭೆ ನಡೆಸಿದ್ದು, ಹೆದ್ದಾರಿ ಇನ್ನಿತರ ಕಡೆಗಳಲ್ಲಿ ವೇಗದ ಮಿತಿಯ ಸೂಚನಾ ಫಲಕಗಳನ್ನು ಹಾಕುವಂತೆ ಸೂಚನೆ ನೀಡಿದ್ದಾರೆ. ಸಭೆಯಲ್ಲಿ ಹೆದ್ದಾರಿ ಇಲಾಖೆಯ ಯೋಜನಾ ನಿರ್ದೇಶಕ ಜಾವೇದ್ ಅಬ್ದುಲ್ಲ ಅಜ್ಮಿ, ಅನಿರುದ್ಧ ಕಾಮತ್, ಪಿಡಬ್ಲ್ಯುಡಿ ಇಲಾಖೆಯ ಜೆಇ ಲಾಯಿಡ್ ಡಿಸಿಲ್ವ, ಮಂಗಳೂರು ಸ್ಮಾರ್ಟ್ ಸಿಟಿ ಎಇಇ ಮಂಜು ಕೀರ್ತಿ, ಮಹಾನಗರ ಪಾಲಿಕೆಯ ಇಇ ಜ್ಞಾನೇಶ್, ಎಇಇ ಎಂ.ಎನ್ ಶಿವಲಿಂಗಪ್ಪ, ಎಇಇ ಮಿಥುನ್ ಹಾಜರಿದ್ದರು.
The Mangaluru City Police on Thursday, June 13, urged road users to adhere to speed limits prescribed for different categories of roads as the police will use Mobile Speed Radar Guns to impose penalties for overspeeding.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm